ಸಿಗರೇಟ್ ಸೇದುವುದನ್ನ ಪ್ರಶ್ನಿಸಿದ ಪೇದೆಗೆ ಚಾಕು ಇರಿತ

ಬೆಂಗಳೂರು: ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಪೇದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಆರ್.ಟಿ.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಮುಂಡಿನಗರದಲ್ಲಿ ಪುಂಡರು ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದಿತ್ತು. ದೂರು ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸ್ ಪೇದೆ ನಾಗರಾಜ್ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ದುಷ್ಕರ್ಮಿಗಳು, ಪೇದೆಗೆ ಚಾಕುವಿನಿಂದ ಎರಡು ಬಾರಿ ಇರಿದು ಪರಾರಿಯಾಗಿದ್ದಾರೆ. ಸದ್ಯ ನಾಗರಾಜ್​ಗೆ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಚಿಕಿತ್ಸೆಗೆ ಪೇದೆ […]

ಸಿಗರೇಟ್ ಸೇದುವುದನ್ನ ಪ್ರಶ್ನಿಸಿದ ಪೇದೆಗೆ ಚಾಕು ಇರಿತ
ಸಾಧು ಶ್ರೀನಾಥ್​

Updated on: Nov 30, 2019 | 2:47 PM

ಬೆಂಗಳೂರು: ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಪೇದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಆರ್.ಟಿ.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಾಮುಂಡಿನಗರದಲ್ಲಿ ಪುಂಡರು ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದಿತ್ತು. ದೂರು ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸ್ ಪೇದೆ ನಾಗರಾಜ್ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ದುಷ್ಕರ್ಮಿಗಳು, ಪೇದೆಗೆ ಚಾಕುವಿನಿಂದ ಎರಡು ಬಾರಿ ಇರಿದು ಪರಾರಿಯಾಗಿದ್ದಾರೆ.

ಸದ್ಯ ನಾಗರಾಜ್​ಗೆ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಚಿಕಿತ್ಸೆಗೆ ಪೇದೆ ನಾಗರಾಜ್ ಸ್ಪಂದಿಸುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us