Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?

ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿ ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?
ಹಲ್ಲೆಗೊಳಗಾದ ಪೇದೆ ಮಂಜುನಾಥ್
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 06, 2021 | 12:28 PM

ಬೆಂಗಳೂರು: ಕಳ್ಳನ ಹಿಡಿಯಲು ಹೊದ ಪೊಲೀಸ್ ಪೇದೆ ಮೇಲೆ, ಕಳ್ಳ ಹಾಗೂ ಆತನ ಕುಟುಂಬದಿಂದ ಚಾಕು, ದೊಣ್ಣೆಯಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಿನ್ನೆ ರಾತ್ರಿ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಮಂಜುನಾಥ್ ಹಲ್ಲೆಗೊಳಗಾದ ಪೊಲೀಸ್ ಪೇದೆ‌ಯಾಗಿದ್ದಾರೆ. ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿಯನ್ನು ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು. ಈ ವೇಳೆ ನವೀನ್​ನನ್ನು ಕರೆದೊಯ್ಯಲು ಮುಂದಾದಾಗ ಪೇದೆ ಮಂಜುನಾಥ್ ಮೇಲೆ ಆರೋಪಿ ನವೀನ್ ತಾಯಿ ಹಾಗೂ ಸಹೋದರ ಮುರುಗೇಶ್​ ದೊಣ್ಣೆಯಿಂದ ತಲೆಗೆ ಹಲ್ಲೆ ಮಾಡಿದ್ದಾರೆ.

ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.. ಈ ವೇಳೆ ತಪ್ಪಿಸಿಕೊಂಡ ಆರೋಪಿ ನವೀನ್​,​ ಪೇದೆ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಬಳಿಕ ಆರೋಪಿ ನವೀನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೇದೆ ಮಂಜುನಾಥ್​​ಗೆ ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಚಾಕು ಇರಿದಿರುವುದರಿಂದ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಪೇದೆ ಜೊತೆ ಬಂದಿದ್ದ ವ್ಯಕ್ತಿಯಿಂದ ಪೇದೆ ಮಂಜುನಾಥ್​ನನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಘಟನೆ ಸಂಬಂಧ ಹಲ್ಲೆ ಮಾಡಿದ ನರಸಮ್ಮ ಹಾಗೂ ಮುರುಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧನವಾಗಬೇಕಾಗಿದ್ದ ಆರೋಪಿ ನವೀನ್ ಪರಾರಿಯಾಗಿದ್ದು, ಆರೋಪಿ ನವೀನ್​ಗಾಗಿ ಪೊಲೀಸರಿಂದ ತಲಾಶ್ ಶುರುವಾಗಿದೆ.

ಕೌಟುಂಬಿಕ ಕಲಹ: ಮೂವರಿಗೆ ಚಾಕುವಿನಿಂದ ಇರಿದು ಆರೋಪಿ ಪರಾರಿ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ