AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?

ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿ ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?
ಹಲ್ಲೆಗೊಳಗಾದ ಪೇದೆ ಮಂಜುನಾಥ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 06, 2021 | 12:28 PM

Share

ಬೆಂಗಳೂರು: ಕಳ್ಳನ ಹಿಡಿಯಲು ಹೊದ ಪೊಲೀಸ್ ಪೇದೆ ಮೇಲೆ, ಕಳ್ಳ ಹಾಗೂ ಆತನ ಕುಟುಂಬದಿಂದ ಚಾಕು, ದೊಣ್ಣೆಯಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಿನ್ನೆ ರಾತ್ರಿ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಮಂಜುನಾಥ್ ಹಲ್ಲೆಗೊಳಗಾದ ಪೊಲೀಸ್ ಪೇದೆ‌ಯಾಗಿದ್ದಾರೆ. ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿಯನ್ನು ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು. ಈ ವೇಳೆ ನವೀನ್​ನನ್ನು ಕರೆದೊಯ್ಯಲು ಮುಂದಾದಾಗ ಪೇದೆ ಮಂಜುನಾಥ್ ಮೇಲೆ ಆರೋಪಿ ನವೀನ್ ತಾಯಿ ಹಾಗೂ ಸಹೋದರ ಮುರುಗೇಶ್​ ದೊಣ್ಣೆಯಿಂದ ತಲೆಗೆ ಹಲ್ಲೆ ಮಾಡಿದ್ದಾರೆ.

ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.. ಈ ವೇಳೆ ತಪ್ಪಿಸಿಕೊಂಡ ಆರೋಪಿ ನವೀನ್​,​ ಪೇದೆ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಬಳಿಕ ಆರೋಪಿ ನವೀನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೇದೆ ಮಂಜುನಾಥ್​​ಗೆ ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಚಾಕು ಇರಿದಿರುವುದರಿಂದ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಪೇದೆ ಜೊತೆ ಬಂದಿದ್ದ ವ್ಯಕ್ತಿಯಿಂದ ಪೇದೆ ಮಂಜುನಾಥ್​ನನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಘಟನೆ ಸಂಬಂಧ ಹಲ್ಲೆ ಮಾಡಿದ ನರಸಮ್ಮ ಹಾಗೂ ಮುರುಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧನವಾಗಬೇಕಾಗಿದ್ದ ಆರೋಪಿ ನವೀನ್ ಪರಾರಿಯಾಗಿದ್ದು, ಆರೋಪಿ ನವೀನ್​ಗಾಗಿ ಪೊಲೀಸರಿಂದ ತಲಾಶ್ ಶುರುವಾಗಿದೆ.

ಕೌಟುಂಬಿಕ ಕಲಹ: ಮೂವರಿಗೆ ಚಾಕುವಿನಿಂದ ಇರಿದು ಆರೋಪಿ ಪರಾರಿ

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು