AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?

ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿ ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?
ಹಲ್ಲೆಗೊಳಗಾದ ಪೇದೆ ಮಂಜುನಾಥ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 06, 2021 | 12:28 PM

Share

ಬೆಂಗಳೂರು: ಕಳ್ಳನ ಹಿಡಿಯಲು ಹೊದ ಪೊಲೀಸ್ ಪೇದೆ ಮೇಲೆ, ಕಳ್ಳ ಹಾಗೂ ಆತನ ಕುಟುಂಬದಿಂದ ಚಾಕು, ದೊಣ್ಣೆಯಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಿನ್ನೆ ರಾತ್ರಿ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಮಂಜುನಾಥ್ ಹಲ್ಲೆಗೊಳಗಾದ ಪೊಲೀಸ್ ಪೇದೆ‌ಯಾಗಿದ್ದಾರೆ. ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿಯನ್ನು ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು. ಈ ವೇಳೆ ನವೀನ್​ನನ್ನು ಕರೆದೊಯ್ಯಲು ಮುಂದಾದಾಗ ಪೇದೆ ಮಂಜುನಾಥ್ ಮೇಲೆ ಆರೋಪಿ ನವೀನ್ ತಾಯಿ ಹಾಗೂ ಸಹೋದರ ಮುರುಗೇಶ್​ ದೊಣ್ಣೆಯಿಂದ ತಲೆಗೆ ಹಲ್ಲೆ ಮಾಡಿದ್ದಾರೆ.

ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.. ಈ ವೇಳೆ ತಪ್ಪಿಸಿಕೊಂಡ ಆರೋಪಿ ನವೀನ್​,​ ಪೇದೆ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಬಳಿಕ ಆರೋಪಿ ನವೀನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೇದೆ ಮಂಜುನಾಥ್​​ಗೆ ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಚಾಕು ಇರಿದಿರುವುದರಿಂದ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಪೇದೆ ಜೊತೆ ಬಂದಿದ್ದ ವ್ಯಕ್ತಿಯಿಂದ ಪೇದೆ ಮಂಜುನಾಥ್​ನನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಘಟನೆ ಸಂಬಂಧ ಹಲ್ಲೆ ಮಾಡಿದ ನರಸಮ್ಮ ಹಾಗೂ ಮುರುಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧನವಾಗಬೇಕಾಗಿದ್ದ ಆರೋಪಿ ನವೀನ್ ಪರಾರಿಯಾಗಿದ್ದು, ಆರೋಪಿ ನವೀನ್​ಗಾಗಿ ಪೊಲೀಸರಿಂದ ತಲಾಶ್ ಶುರುವಾಗಿದೆ.

ಕೌಟುಂಬಿಕ ಕಲಹ: ಮೂವರಿಗೆ ಚಾಕುವಿನಿಂದ ಇರಿದು ಆರೋಪಿ ಪರಾರಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್