AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?

ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿ ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?
ಹಲ್ಲೆಗೊಳಗಾದ ಪೇದೆ ಮಂಜುನಾಥ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 06, 2021 | 12:28 PM

Share

ಬೆಂಗಳೂರು: ಕಳ್ಳನ ಹಿಡಿಯಲು ಹೊದ ಪೊಲೀಸ್ ಪೇದೆ ಮೇಲೆ, ಕಳ್ಳ ಹಾಗೂ ಆತನ ಕುಟುಂಬದಿಂದ ಚಾಕು, ದೊಣ್ಣೆಯಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಿನ್ನೆ ರಾತ್ರಿ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಮಂಜುನಾಥ್ ಹಲ್ಲೆಗೊಳಗಾದ ಪೊಲೀಸ್ ಪೇದೆ‌ಯಾಗಿದ್ದಾರೆ. ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿಯನ್ನು ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು. ಈ ವೇಳೆ ನವೀನ್​ನನ್ನು ಕರೆದೊಯ್ಯಲು ಮುಂದಾದಾಗ ಪೇದೆ ಮಂಜುನಾಥ್ ಮೇಲೆ ಆರೋಪಿ ನವೀನ್ ತಾಯಿ ಹಾಗೂ ಸಹೋದರ ಮುರುಗೇಶ್​ ದೊಣ್ಣೆಯಿಂದ ತಲೆಗೆ ಹಲ್ಲೆ ಮಾಡಿದ್ದಾರೆ.

ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.. ಈ ವೇಳೆ ತಪ್ಪಿಸಿಕೊಂಡ ಆರೋಪಿ ನವೀನ್​,​ ಪೇದೆ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಬಳಿಕ ಆರೋಪಿ ನವೀನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೇದೆ ಮಂಜುನಾಥ್​​ಗೆ ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಚಾಕು ಇರಿದಿರುವುದರಿಂದ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಪೇದೆ ಜೊತೆ ಬಂದಿದ್ದ ವ್ಯಕ್ತಿಯಿಂದ ಪೇದೆ ಮಂಜುನಾಥ್​ನನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಘಟನೆ ಸಂಬಂಧ ಹಲ್ಲೆ ಮಾಡಿದ ನರಸಮ್ಮ ಹಾಗೂ ಮುರುಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧನವಾಗಬೇಕಾಗಿದ್ದ ಆರೋಪಿ ನವೀನ್ ಪರಾರಿಯಾಗಿದ್ದು, ಆರೋಪಿ ನವೀನ್​ಗಾಗಿ ಪೊಲೀಸರಿಂದ ತಲಾಶ್ ಶುರುವಾಗಿದೆ.

ಕೌಟುಂಬಿಕ ಕಲಹ: ಮೂವರಿಗೆ ಚಾಕುವಿನಿಂದ ಇರಿದು ಆರೋಪಿ ಪರಾರಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು