AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?

ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿ ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?
ಹಲ್ಲೆಗೊಳಗಾದ ಪೇದೆ ಮಂಜುನಾಥ್
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Jan 06, 2021 | 12:28 PM

Share

ಬೆಂಗಳೂರು: ಕಳ್ಳನ ಹಿಡಿಯಲು ಹೊದ ಪೊಲೀಸ್ ಪೇದೆ ಮೇಲೆ, ಕಳ್ಳ ಹಾಗೂ ಆತನ ಕುಟುಂಬದಿಂದ ಚಾಕು, ದೊಣ್ಣೆಯಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಿನ್ನೆ ರಾತ್ರಿ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಮಂಜುನಾಥ್ ಹಲ್ಲೆಗೊಳಗಾದ ಪೊಲೀಸ್ ಪೇದೆ‌ಯಾಗಿದ್ದಾರೆ. ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿಯನ್ನು ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು. ಈ ವೇಳೆ ನವೀನ್​ನನ್ನು ಕರೆದೊಯ್ಯಲು ಮುಂದಾದಾಗ ಪೇದೆ ಮಂಜುನಾಥ್ ಮೇಲೆ ಆರೋಪಿ ನವೀನ್ ತಾಯಿ ಹಾಗೂ ಸಹೋದರ ಮುರುಗೇಶ್​ ದೊಣ್ಣೆಯಿಂದ ತಲೆಗೆ ಹಲ್ಲೆ ಮಾಡಿದ್ದಾರೆ.

ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.. ಈ ವೇಳೆ ತಪ್ಪಿಸಿಕೊಂಡ ಆರೋಪಿ ನವೀನ್​,​ ಪೇದೆ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಬಳಿಕ ಆರೋಪಿ ನವೀನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೇದೆ ಮಂಜುನಾಥ್​​ಗೆ ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಚಾಕು ಇರಿದಿರುವುದರಿಂದ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಪೇದೆ ಜೊತೆ ಬಂದಿದ್ದ ವ್ಯಕ್ತಿಯಿಂದ ಪೇದೆ ಮಂಜುನಾಥ್​ನನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಘಟನೆ ಸಂಬಂಧ ಹಲ್ಲೆ ಮಾಡಿದ ನರಸಮ್ಮ ಹಾಗೂ ಮುರುಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧನವಾಗಬೇಕಾಗಿದ್ದ ಆರೋಪಿ ನವೀನ್ ಪರಾರಿಯಾಗಿದ್ದು, ಆರೋಪಿ ನವೀನ್​ಗಾಗಿ ಪೊಲೀಸರಿಂದ ತಲಾಶ್ ಶುರುವಾಗಿದೆ.

ಕೌಟುಂಬಿಕ ಕಲಹ: ಮೂವರಿಗೆ ಚಾಕುವಿನಿಂದ ಇರಿದು ಆರೋಪಿ ಪರಾರಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್