AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳರಿಗೆ ಪೊಲೀಸರಿಂದಲೇ ಸಾಥ್, ದಾಳಿ ನೆಪ ಮಾಡಿ ಚಿನ್ನಾಭರಣ ಎಗರಿಸುದ್ರು

ಬೆಂಗಳೂರು: ಚಿನ್ನಾಭರಣ ಎಗರಿಸಲು ಕಳ್ಳರಿಗೆ ಪೊಲೀಸರೇ ಸಹಾಯ ಮಾಡಿರುವ ಘಟನೆ ನಡೆದಿದೆ. ದಾಳಿ ಹೆಸರಿನಲ್ಲಿ ಕಳ್ಳರಿಗೆ ಸಾಥ್ ನೀಡ್ತಿದ್ದ ಕಾನ್ಸ್‌ಟೇಬಲ್ ಸೇರಿ 7 ಜನರನ್ನ ಅರೆಸ್ಟ್ ಮಾಡಲಾಗಿದೆ. ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ. ಪರವಾನಗಿ ಇಲ್ಲದೆ ವ್ಯಕ್ತಿ ಅಂಗಡಿ ನಡೆಸುತ್ತಿದ್ದ ಮಾಹಿತಿ ಸಿಕ್ಕುತ್ತಿದ್ದಂತೆ ಇದನ್ನೇ ಬಂಡವಾಳವಾಗಿ ಮಾಡಿಕೊಂಡಿದ್ದ ಆರೋಪಿಗಳು ದಾಳಿ ಹೆಸರಿನಲ್ಲಿ ಚಿನ್ನಾಭರಣ ಎಗರಿಸಲು ಪ್ಲ್ಯಾನ್ ಮಾಡಿಕೊಂಡಿದ್ರು. ಅಂಗಡಿ ಹಿಂದಿನ ಕಟ್ಟಡದ ಮಾಲೀಕ ಜೀತು ಎಂಬ ಖದೀಮರು ಈ ಪ್ಲ್ಯಾನ್ ರೂಪಿಸಿದ್ದ. ಇದಕ್ಕೆ ಆತ […]

ಕಳ್ಳರಿಗೆ ಪೊಲೀಸರಿಂದಲೇ ಸಾಥ್, ದಾಳಿ ನೆಪ ಮಾಡಿ ಚಿನ್ನಾಭರಣ ಎಗರಿಸುದ್ರು
ಆಯೇಷಾ ಬಾನು
|

Updated on: Nov 22, 2020 | 7:39 AM

Share

ಬೆಂಗಳೂರು: ಚಿನ್ನಾಭರಣ ಎಗರಿಸಲು ಕಳ್ಳರಿಗೆ ಪೊಲೀಸರೇ ಸಹಾಯ ಮಾಡಿರುವ ಘಟನೆ ನಡೆದಿದೆ. ದಾಳಿ ಹೆಸರಿನಲ್ಲಿ ಕಳ್ಳರಿಗೆ ಸಾಥ್ ನೀಡ್ತಿದ್ದ ಕಾನ್ಸ್‌ಟೇಬಲ್ ಸೇರಿ 7 ಜನರನ್ನ ಅರೆಸ್ಟ್ ಮಾಡಲಾಗಿದೆ. ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ.

ಪರವಾನಗಿ ಇಲ್ಲದೆ ವ್ಯಕ್ತಿ ಅಂಗಡಿ ನಡೆಸುತ್ತಿದ್ದ ಮಾಹಿತಿ ಸಿಕ್ಕುತ್ತಿದ್ದಂತೆ ಇದನ್ನೇ ಬಂಡವಾಳವಾಗಿ ಮಾಡಿಕೊಂಡಿದ್ದ ಆರೋಪಿಗಳು ದಾಳಿ ಹೆಸರಿನಲ್ಲಿ ಚಿನ್ನಾಭರಣ ಎಗರಿಸಲು ಪ್ಲ್ಯಾನ್ ಮಾಡಿಕೊಂಡಿದ್ರು. ಅಂಗಡಿ ಹಿಂದಿನ ಕಟ್ಟಡದ ಮಾಲೀಕ ಜೀತು ಎಂಬ ಖದೀಮರು ಈ ಪ್ಲ್ಯಾನ್ ರೂಪಿಸಿದ್ದ. ಇದಕ್ಕೆ ಆತ ಪೊಲೀಸರ ಜತೆಯೂ ಮಾತನಾಡಿದ್ದ. ಕಾಡುಗೋಡಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ಗಳಾದ ಅಶೋಕ್ ಮತ್ತು ಚೌಡೇಗೌಡ ಜತೆ ಚರ್ಚೆ ನಡೆಸಿದ್ದ. ದಾಳಿಗೆ ಸಹಕರಿಸಿದರೆ ಪಾಲು ನೀಡುವುದಾಗಿ ಪೊಲೀಸ್ ಮತ್ತು ಜೀತುವಿನ ನಡುವೆ ಡೀಲಿಂಗ್ ನಡೆದಿತ್ತು. ಹೀಗಾಗಿ ಪೊಲೀಸರ ಜತೆ ಸೇರಿ ನಕಲಿ ದಾಳಿ ಮಾಡಿದ್ದರು.

ನವೆಂಬರ್ 11ರಂದು ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಆಭರಣದ ಅಂಗಡಿ ಮೇಲೆ ಇಬ್ಬರು ಪೊಲೀಸರ ಜತೆ ಸೇರಿ ಒಟ್ಟು 8 ಜನ ದಾಳಿ ನಡೆಸಿದ್ದರು. ಈ ವೇಳೆ 8 ಜನ ದಾಳಿ ಮಾಡಿ ಚಿನ್ನಾಭರಣ ಎಗರಿಸಿ ಹಂಚಿಕೊಂಡಿದ್ದರು. 2 ದಿನಗಳ ಬಳಿಕ ಅಂಗಡಿ ಮಾಲೀಕ ಠಾಣೆಗೆ ದೂರು ನೀಡಿದ್ದ. ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಅಂಗಡಿಗೆ ತೆರಳಿ ಪರಿಶೀಲನೆ ಮಾಡಿದ್ದರು. ಬಳಿಕ ಸಿಸಿ ಕ್ಯಾಮರಾದಲ್ಲಿ ನಕಲಿ ದಾಳಿ ದುಷ್ಕೃತ್ಯ ಸೆರೆಯಾಗಿತ್ತು. ಸಿಸಿಟಿವಿ ದೃಶ್ಯ ಆಧರಿಸಿ ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳ್ಳರಿಗೆ ಸಹಕಾರ ನೀಡಿದ್ದ ಪೊಲೀಸ್ ಚೌಡೇಗೌಡ ಎಸ್ಕೇಪ್ ಆಗಿದ್ದಾರೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!