ಬೆಳ್ಳಂಬೆಳಗ್ಗೆ ಪೊಲೀಸ್ ಗನ್ ಸದ್ದು , ಆರೋಪಿಗಳ ಕಾಲಿಗೆ ಗುಂಡು

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ನಗರದಲ್ಲಿ ಪೊಲೀಸರ ಪಿಸ್ತೂಲ್ ಸದ್ದು ಮಾಡಿದೆ. ಬೆಂಗಳೂರು ನಗರದ ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಜಿಕೆಡಬ್ಲ್ಯು ಲೇಔಟ್‌ನಲ್ಲಿ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್‌ ಆಗಿದೆ. ಕೊಲೆ ಆರೋಪಿಗಳಾದ ಚಂದನ್ ಅಲಿಯಾಸ್‌ ಚಂದ್ರು ಮತ್ತು ರೋಹಿತ್‌ ಮೇಲೆ ಪೊಲೀಸರು ಗುಂಡುಹಾರಿಸಿ ಬಂಧಿಸಿದ್ದಾರೆ. ನಂದಿನಿ ಲೇಔಟ್‌ ಠಾಣಾ ವ್ಯಾಪ್ತಿಯ ಗಣೇಶ ಬ್ಲಾಕ್‌ನಲ್ಲಿ ನವೆಂಬರ್ 21ರಂದು ಒಬ್ಬ ಯುವಕನನ್ನು ಕೊಂದು, ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಈ ವೇಳೆ ಆತ್ಮರಕ್ಷಣೆಗಾಗಿ ನಂದಿನಿ […]

ಬೆಳ್ಳಂಬೆಳಗ್ಗೆ ಪೊಲೀಸ್ ಗನ್ ಸದ್ದು , ಆರೋಪಿಗಳ ಕಾಲಿಗೆ ಗುಂಡು
ಸಾಧು ಶ್ರೀನಾಥ್​

Updated on: Nov 25, 2019 | 12:49 PM

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ನಗರದಲ್ಲಿ ಪೊಲೀಸರ ಪಿಸ್ತೂಲ್ ಸದ್ದು ಮಾಡಿದೆ. ಬೆಂಗಳೂರು ನಗರದ ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಜಿಕೆಡಬ್ಲ್ಯು ಲೇಔಟ್‌ನಲ್ಲಿ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್‌ ಆಗಿದೆ.

ಕೊಲೆ ಆರೋಪಿಗಳಾದ ಚಂದನ್ ಅಲಿಯಾಸ್‌ ಚಂದ್ರು ಮತ್ತು ರೋಹಿತ್‌ ಮೇಲೆ ಪೊಲೀಸರು ಗುಂಡುಹಾರಿಸಿ ಬಂಧಿಸಿದ್ದಾರೆ. ನಂದಿನಿ ಲೇಔಟ್‌ ಠಾಣಾ ವ್ಯಾಪ್ತಿಯ ಗಣೇಶ ಬ್ಲಾಕ್‌ನಲ್ಲಿ ನವೆಂಬರ್ 21ರಂದು ಒಬ್ಬ ಯುವಕನನ್ನು ಕೊಂದು, ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಈ ವೇಳೆ ಆತ್ಮರಕ್ಷಣೆಗಾಗಿ ನಂದಿನಿ ಲೇಔಟ್‌ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್ ಲೋಹಿತ್‌ರಿಂದ ಆರೋಪಿಗಳ ಮೇಲೆ ಫೈರಿಂಗ್ ಆಗಿದೆ.

ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದು, ಘಟನೆಯಲ್ಲಿ PSI ನಿತ್ಯಾನಂದ, ಪೇದೆ ಬಸವಣ್ಣಗೆ ಗಾಯಗಳಾಗಿವೆ. ಆರೋಪಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 8:41 am, Sun, 24 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us