ಪೇದೆಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಬೆಂಗಳೂರು: ಸಿಗರೇಟ್ ಸೇದುವುದನ್ನು ಪ್ರಶ್ನಿಸಿದ ಪೊಲೀಸ್ ಪೇದೆ ನಾಗರಾಜ್​ಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಆರ್.ಟಿ ನಗರದ ಈರುಳ್ಳಿ‌ ಮೈದಾನದ ಬಳಿ‌ ಆರೋಪಿ ಮರ್ದಾನ್ ಖಾನ್​ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿ ಕಲ್ಲು ತೂರಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದರೂ ಪೊಲೀಸರ ಸೂಚನೆಯನ್ನು ಲೆಕ್ಕಿಸಿದೆ ಕಲ್ಲಿನಿಂದ ಪೊಲೀಸ್ ಜೀಪ್ ಗ್ಲಾಸ್ ಹೊಡೆದಿದ್ದಾನೆ. ತಕ್ಷಣ […]

ಪೇದೆಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರ ಫೈರಿಂಗ್
ಸಾಧು ಶ್ರೀನಾಥ್​

Updated on: Dec 02, 2019 | 7:50 AM

ಬೆಂಗಳೂರು: ಸಿಗರೇಟ್ ಸೇದುವುದನ್ನು ಪ್ರಶ್ನಿಸಿದ ಪೊಲೀಸ್ ಪೇದೆ ನಾಗರಾಜ್​ಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಆರ್.ಟಿ ನಗರದ ಈರುಳ್ಳಿ‌ ಮೈದಾನದ ಬಳಿ‌ ಆರೋಪಿ ಮರ್ದಾನ್ ಖಾನ್​ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿ ಕಲ್ಲು ತೂರಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದರೂ ಪೊಲೀಸರ ಸೂಚನೆಯನ್ನು ಲೆಕ್ಕಿಸಿದೆ ಕಲ್ಲಿನಿಂದ ಪೊಲೀಸ್ ಜೀಪ್ ಗ್ಲಾಸ್ ಹೊಡೆದಿದ್ದಾನೆ.

ತಕ್ಷಣ ಎಚ್ಚೆತ್ತ ಆರ್.ಟಿ.ನಗರ ಠಾಣೆ ಇನ್ಸ್​ಪೆಕ್ಟರ್​ ಮಿಥುನ್ ಶಿಲ್ಪಿ ಆರೋಪಿ ಮರ್ದಾನ್ ಖಾನ್ ಎರಡೂ ಕಾಲಿಗೆ ಗುಂಡು‌ ಹಾರಿಸಿ, ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ. ಮರ್ದಾನ್ ಖಾನ್ ಈ ಹಿಂದೆ ನಾಲ್ಕು ಪ್ರಕರಣಗಳಿಗೆ ಬೇಕಾಗಿದ್ದ ವಾಂಟೆಡ್ ಆರೋಪಿಯಾಗಿದ್ದಾನೆ. ಆರೋಪಿ ಕಲ್ಲು ತೂರಿದ ಹಿನ್ನೆಲೆಯಲ್ಲಿ ಪೇದೆಗಳಾದ ಮುತ್ತಪ್ಪ, ಶ್ರೀಧರ್ ಮೂರ್ತಿಗೆ ಗಾಯವಾಗಿದೆ. ಇಬ್ಬರೂ ಪೇದೆಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 7:15 am, Mon, 2 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us