AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಗನ್ ಸೌಂಡ್​​, ಕಿಡ್ನಾಪರ್ ಕಾಲಿಗೆ ಗುಂಡು

ಬೆಂಗಳೂರು: ಬಾಲಕನನ್ನು ಅಪಹರಿಸಿ 50 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಪಹರಣಕಾರನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ ನಡೆದಿದೆ. ನಿನ್ನೆ 13 ವರ್ಷದ ಬಾಲಕನನ್ನು ಆರೋಪಿ ಮುಬಾರಕ್ ಸೇರಿದಂತೆ ಮೂವರು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ 50 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ಅಪಹರಣಾಕಾರರನ್ನು ಬಂಧಿಸಿ ಬಾಲಕನ ರಕ್ಷಣೆ ಮಾಡಲು ಪೊಲೀಸರು ತೆರಳಿದ್ದರು. ಆರೋಪಿ ಕಾಲಿಗೆ ಗುಂಡು ಹಾರಿಸಿದ ಇನ್ಸ್​ಪೆಕ್ಟರ್​ ಅಜಯ್ ಸಾರಥಿ: ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ […]

ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಗನ್ ಸೌಂಡ್​​, ಕಿಡ್ನಾಪರ್ ಕಾಲಿಗೆ ಗುಂಡು
ಸಾಧು ಶ್ರೀನಾಥ್​
|

Updated on:Dec 01, 2019 | 8:44 AM

Share

ಬೆಂಗಳೂರು: ಬಾಲಕನನ್ನು ಅಪಹರಿಸಿ 50 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಪಹರಣಕಾರನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ ನಡೆದಿದೆ.

ನಿನ್ನೆ 13 ವರ್ಷದ ಬಾಲಕನನ್ನು ಆರೋಪಿ ಮುಬಾರಕ್ ಸೇರಿದಂತೆ ಮೂವರು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ 50 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ಅಪಹರಣಾಕಾರರನ್ನು ಬಂಧಿಸಿ ಬಾಲಕನ ರಕ್ಷಣೆ ಮಾಡಲು ಪೊಲೀಸರು ತೆರಳಿದ್ದರು.

ಆರೋಪಿ ಕಾಲಿಗೆ ಗುಂಡು ಹಾರಿಸಿದ ಇನ್ಸ್​ಪೆಕ್ಟರ್​ ಅಜಯ್ ಸಾರಥಿ: ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ ಆರೋಪಿ ಮುಬಾರಕ್ ಮತ್ತು ಟೀಂನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಈ ವೇಳೆ ಬಾನಸವಾಡಿ ಪೊಲೀಸ್ ಪೇದೆ ನಾಯಕ್ ಎಂಬುವರಿಗೆ ಚಾಕು ಇರಿದಿದ್ದಾರೆ. ಈ ವೇಳೆ ಶರಣಾಗಲು ಪೊಲೀಸರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪೊಲೀಸರ ಮಾತು ಲೆಕ್ಕಿಸದೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾರೆ. ಆಗ ಇನ್ಸ್​ಪೆಕ್ಟರ್​ ಅಜಯ್ ಸಾರಥಿ ಆರೋಪಿ ಮುಬಾರಕ್ ಕಾಲಿಗೆ ಗುಂಡು ಹಾರಿಸಿ ಬಾಲಕನ್ನು ರಕ್ಷಣೆ ಮಾಡಿದ್ದಾರೆ.

ಸಂಬಂಧಿಕನೇ ಕಿಡ್ನಾಪ್​ಗೆ ಸುಪಾರಿ ಕೊಟ್ಟಿದ್ದ:  ಹೋಟೆಲ್ ಕಡಾಯಿ ಮಾಲೀಕನ 15 ವರ್ಷದ ಮಗನನ್ನು ಮುಬಾರಕ್ ತಂಡ ಅಪಹರಿಸಿತ್ತು. ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕ ಸುಪಾರಿ ಕೊಟ್ಟಿದ್ದ. ಆರೋಪಿಗಳು ಬಾಲಕನನ್ನು ಅಪಹರಿಸಿ ಆಟೋದಲ್ಲಿ ಸುತ್ತಾಡುತ್ತಿದ್ರು. ಬಾನಸವಾಡಿ ಎಸಿಪಿ ರವಿ ಪ್ರಸಾದ್, ಇನ್ಸ್​ಪೆಕ್ಟರ್ ಜಯರಾಜ್ ಮತ್ತು ಕೆ.ಜಿ.ಹಳ್ಳಿ ಠಾಣೆ ಇನ್ಸ್​ಪೆಕ್ಟರ್ ಅಜಯ್ ಸಾರತಿ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ.

Published On - 8:05 am, Sun, 1 December 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು