ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಗನ್ ಸೌಂಡ್​​, ಕಿಡ್ನಾಪರ್ ಕಾಲಿಗೆ ಗುಂಡು

ಬೆಂಗಳೂರು: ಬಾಲಕನನ್ನು ಅಪಹರಿಸಿ 50 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಪಹರಣಕಾರನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ ನಡೆದಿದೆ. ನಿನ್ನೆ 13 ವರ್ಷದ ಬಾಲಕನನ್ನು ಆರೋಪಿ ಮುಬಾರಕ್ ಸೇರಿದಂತೆ ಮೂವರು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ 50 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ಅಪಹರಣಾಕಾರರನ್ನು ಬಂಧಿಸಿ ಬಾಲಕನ ರಕ್ಷಣೆ ಮಾಡಲು ಪೊಲೀಸರು ತೆರಳಿದ್ದರು. ಆರೋಪಿ ಕಾಲಿಗೆ ಗುಂಡು ಹಾರಿಸಿದ ಇನ್ಸ್​ಪೆಕ್ಟರ್​ ಅಜಯ್ ಸಾರಥಿ: ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ […]

ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಗನ್ ಸೌಂಡ್​​, ಕಿಡ್ನಾಪರ್ ಕಾಲಿಗೆ ಗುಂಡು
ಸಾಧು ಶ್ರೀನಾಥ್​

Updated on: Dec 01, 2019 | 8:44 AM

ಬೆಂಗಳೂರು: ಬಾಲಕನನ್ನು ಅಪಹರಿಸಿ 50 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಪಹರಣಕಾರನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ ನಡೆದಿದೆ.

ನಿನ್ನೆ 13 ವರ್ಷದ ಬಾಲಕನನ್ನು ಆರೋಪಿ ಮುಬಾರಕ್ ಸೇರಿದಂತೆ ಮೂವರು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ 50 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ಅಪಹರಣಾಕಾರರನ್ನು ಬಂಧಿಸಿ ಬಾಲಕನ ರಕ್ಷಣೆ ಮಾಡಲು ಪೊಲೀಸರು ತೆರಳಿದ್ದರು.

ಆರೋಪಿ ಕಾಲಿಗೆ ಗುಂಡು ಹಾರಿಸಿದ ಇನ್ಸ್​ಪೆಕ್ಟರ್​ ಅಜಯ್ ಸಾರಥಿ:
ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ ಆರೋಪಿ ಮುಬಾರಕ್ ಮತ್ತು ಟೀಂನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಈ ವೇಳೆ ಬಾನಸವಾಡಿ ಪೊಲೀಸ್ ಪೇದೆ ನಾಯಕ್ ಎಂಬುವರಿಗೆ ಚಾಕು ಇರಿದಿದ್ದಾರೆ. ಈ ವೇಳೆ ಶರಣಾಗಲು ಪೊಲೀಸರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪೊಲೀಸರ ಮಾತು ಲೆಕ್ಕಿಸದೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾರೆ. ಆಗ ಇನ್ಸ್​ಪೆಕ್ಟರ್​ ಅಜಯ್ ಸಾರಥಿ ಆರೋಪಿ ಮುಬಾರಕ್ ಕಾಲಿಗೆ ಗುಂಡು ಹಾರಿಸಿ ಬಾಲಕನ್ನು ರಕ್ಷಣೆ ಮಾಡಿದ್ದಾರೆ.

ಸಂಬಂಧಿಕನೇ ಕಿಡ್ನಾಪ್​ಗೆ ಸುಪಾರಿ ಕೊಟ್ಟಿದ್ದ: 
ಹೋಟೆಲ್ ಕಡಾಯಿ ಮಾಲೀಕನ 15 ವರ್ಷದ ಮಗನನ್ನು ಮುಬಾರಕ್ ತಂಡ ಅಪಹರಿಸಿತ್ತು. ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕ ಸುಪಾರಿ ಕೊಟ್ಟಿದ್ದ. ಆರೋಪಿಗಳು ಬಾಲಕನನ್ನು ಅಪಹರಿಸಿ ಆಟೋದಲ್ಲಿ ಸುತ್ತಾಡುತ್ತಿದ್ರು. ಬಾನಸವಾಡಿ ಎಸಿಪಿ ರವಿ ಪ್ರಸಾದ್, ಇನ್ಸ್​ಪೆಕ್ಟರ್ ಜಯರಾಜ್ ಮತ್ತು ಕೆ.ಜಿ.ಹಳ್ಳಿ ಠಾಣೆ ಇನ್ಸ್​ಪೆಕ್ಟರ್ ಅಜಯ್ ಸಾರತಿ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ.

Published On - 8:05 am, Sun, 1 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us