AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಖಾಕಿ ಗನ್ ಸದ್ದು.. ಆತ್ಮ ರಕ್ಷಣೆಗೆ ಫೈರಿಂಗ್ ಮಾಡಿ ಕೊಲೆ ಆರೋಪಿ ಬಂಧಿಸಿದ ಪೊಲೀಸ್

ಆರೋಪಿ ಧನುಷ್ ಮಾ.24ರಂದು ಮಂಜು ಅಲಿಯಾಸ್ ದಡಿಯಾ ಮಂಜುನನ್ನು ಇಟ್ಟಮಡು ಮುಖ್ಯರಸ್ತೆ ಬಳಿಯ ರೂಂನಲ್ಲಿ ಹತ್ಯೆಗೈದಿದ್ದ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದ. ಈ ಸಂಬಂಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾತ್ರೋರಾತ್ರಿ ಖಾಕಿ ಗನ್ ಸದ್ದು.. ಆತ್ಮ ರಕ್ಷಣೆಗೆ ಫೈರಿಂಗ್ ಮಾಡಿ ಕೊಲೆ ಆರೋಪಿ ಬಂಧಿಸಿದ ಪೊಲೀಸ್
ಆರೋಪಿ ಧನುಷ್‌ ಮತ್ತು ಸಿ.ಕೆ.ಅಚ್ಚುಕಟ್ಟು ಠಾಣೆ ಇನ್ಸ್ಪೆಕ್ಟರ್ ಜನಾರ್ದನ್
ಆಯೇಷಾ ಬಾನು
ಆಯೇಷಾ ಬಾನು|

Updated on: Mar 26, 2021 | 9:29 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರೋರಾತ್ರಿ ಖಾಕಿ ಗನ್ ಸದ್ದು ಮಾಡಿದೆ. ಹತ್ಯೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ಹೊಸಕೆರೆಹಳ್ಳಿ ಬಳಿಯ ಹನುಮಗಿರಿ ಬೆಟ್ಟದಲ್ಲಿ ಈ ಘಟನೆ ನಡೆದಿದ್ದು ಕಾಲಿಗೆ ಗುಂಡು ಹಾರಿಸಿ ಧನುಷ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸಿ.ಕೆ.ಅಚ್ಚುಕಟ್ಟು ಠಾಣೆ ಇನ್ಸ್ಪೆಕ್ಟರ್ ಜನಾರ್ದನ್ ಫೈರಿಂಗ್ ಮಾಡಿ ಆರೋಪಿ ಧನುಷ್​ನನ್ನು ಸೆರೆ ಹಿಡಿದಿದ್ದಾರೆ.

ಆರೋಪಿ ಧನುಷ್ ಮಾ.24ರಂದು ಮಂಜು ಅಲಿಯಾಸ್ ದಡಿಯಾ ಮಂಜುನನ್ನು ಇಟ್ಟಮಡು ಮುಖ್ಯರಸ್ತೆ ಬಳಿಯ ರೂಂನಲ್ಲಿ ಹತ್ಯೆಗೈದಿದ್ದ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದ. ಈ ಸಂಬಂಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಆರೋಪಿ ಬಂಧನಕ್ಕೆ ಪೊಲೀಸರು ಹನುಮಗಿರಿ ಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಕಾನ್ಸ್‌ಟೇಬಲ್ ಲೋಕೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಗೆ ಆರೋಪಿ ಧನುಷ್ ಯತ್ನಿಸಿದ್ದ. ಹೀಗಾಗಿ ತಕ್ಷಣ ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಜನಾರ್ದನ್‌ರಿಂದ ಗುಂಡಿನ ದಾಳಿ ನಡೆದಿದೆ. ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿ ಧನುಷ್​ನ ಬಲಗಾಲಿಗೆ ಫೈರಿಂಗ್ ಮಾಡಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಗಾಯಾಳು ಧನುಷ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಹಲ್ಲೆಗೆ ಯತ್ನಿಸಿದ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ