ಬೆಂಗಳೂರಲ್ಲಿ ಖಾಕಿ ಗುಂಡಿನ ಮೊರೆತ, ಅಮ್ಜದ್ ಭಟ್ಟಿ ಹಂತಕನ ಮೇಲೆ ಫೈರಿಂಗ್

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಗನ್ ಸದ್ದು ಮಾಡಿದೆ. ನಗರದ ಡಿ.ಜೆ.ಹಳ್ಳಿಯ ಚರ್ಮದ ಮಂಡಿಯಲ್ಲಿ ಕೊಲೆ ಆರೋಪಿ ಯೂನಿಸ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. 2 ದಿನದ ಹಿಂದೆ ಅಮ್ಜದ್​ನನ್ನು ಕೊಲೆ ಮಾಡಿದ್ದ ಗ್ಯಾಂಗ್​ನ ಲೀಡರ್ ಆಗಿದ್ದ ಆರೋಪಿ ಯೂನಿಸ್​ನನ್ನು ಡಿ.ಜೆ.ಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಬೆಳಗ್ಗೆ ಮಾರಕಾಸ್ತ್ರ ವಶಕ್ಕೆ ಪಡೆಯಲು ಅಮ್ಜದ್‌ನನ್ನು ಕೊಲೆ ಮಾಡಿದ್ದ ಸ್ಥಳಕ್ಕೆ ಆರೋಪಿಯನ್ನ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಯೂನಿಸ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾನೆ. ಶರಣಾಗುವಂತೆ […]

ಬೆಂಗಳೂರಲ್ಲಿ ಖಾಕಿ ಗುಂಡಿನ ಮೊರೆತ, ಅಮ್ಜದ್ ಭಟ್ಟಿ ಹಂತಕನ ಮೇಲೆ ಫೈರಿಂಗ್
ಸಾಧು ಶ್ರೀನಾಥ್​

Updated on: Mar 03, 2020 | 11:05 AM

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಗನ್ ಸದ್ದು ಮಾಡಿದೆ. ನಗರದ ಡಿ.ಜೆ.ಹಳ್ಳಿಯ ಚರ್ಮದ ಮಂಡಿಯಲ್ಲಿ ಕೊಲೆ ಆರೋಪಿ ಯೂನಿಸ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

2 ದಿನದ ಹಿಂದೆ ಅಮ್ಜದ್​ನನ್ನು ಕೊಲೆ ಮಾಡಿದ್ದ ಗ್ಯಾಂಗ್​ನ ಲೀಡರ್ ಆಗಿದ್ದ ಆರೋಪಿ ಯೂನಿಸ್​ನನ್ನು ಡಿ.ಜೆ.ಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಬೆಳಗ್ಗೆ ಮಾರಕಾಸ್ತ್ರ ವಶಕ್ಕೆ ಪಡೆಯಲು ಅಮ್ಜದ್‌ನನ್ನು ಕೊಲೆ ಮಾಡಿದ್ದ ಸ್ಥಳಕ್ಕೆ ಆರೋಪಿಯನ್ನ ಕರೆದೊಯ್ಯಲಾಗಿತ್ತು.

ಈ ವೇಳೆ ಆರೋಪಿ ಯೂನಿಸ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾನೆ. ಶರಣಾಗುವಂತೆ ಇನ್ಸ್‌ಪೆಕ್ಟರ್ ಕೇಶವಮೂರ್ತಿ ಸೂಚಿಸಿದ್ದಾರೆ. ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಎಚ್ಚರಿಸಿದ್ದಾರೆ. ಆದ್ರೂ ಲೆಕ್ಕಿಸದೆ ಪೇದೆಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಪೊಲೀಸ್ ಪೇದೆ ಮತ್ತು ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Published On - 9:19 am, Tue, 3 March 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us