AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Crime: ಪಾಕಿಸ್ತಾನದಲ್ಲಿ ಹಿಂದೂ ವೈದ್ಯರನ್ನು ಗುಂಡಿಕ್ಕಿ ಹತ್ಯೆ, ತಿಂಗಳಲ್ಲಿ ಎರಡನೇ ಘಟನೆ

ಪಾಕಿಸ್ತಾನದಲ್ಲಿ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಪಾಕಿಸ್ತಾನದಲ್ಲಿ ಮತ್ತೊಮ್ಮೆ ಹಿಂದೂ ವೈದ್ಯರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗಿದೆ.

Pakistan Crime: ಪಾಕಿಸ್ತಾನದಲ್ಲಿ ಹಿಂದೂ ವೈದ್ಯರನ್ನು ಗುಂಡಿಕ್ಕಿ ಹತ್ಯೆ, ತಿಂಗಳಲ್ಲಿ ಎರಡನೇ ಘಟನೆ
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Mar 31, 2023 | 7:53 AM

Share

ಪಾಕಿಸ್ತಾನದಲ್ಲಿ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಪಾಕಿಸ್ತಾನದಲ್ಲಿ ಮತ್ತೊಮ್ಮೆ ಹಿಂದೂ ವೈದ್ಯರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗಿದೆ. ಕರಾಚಿ ಮುನ್ಸಿಪಲ್ ಕಾರ್ಪೊರೇಶನ್‌ನ ನಿವೃತ್ತ ನಿರ್ದೇಶಕ ಮತ್ತು ನೇತ್ರತಜ್ಞ ಡಾ.ಬೀರ್ಬಲ್ ಜೆನಾನಿ ಅವರನ್ನು ಲಿಯಾರಿ ಎಕ್ಸ್‌ಪ್ರೆಸ್‌ವೇ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ದಾಳಿಯಲ್ಲಿ ಆತನ ಸಹಾಯಕ ಕುರಾತ್-ಉಲ್-ಐನ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಕರಾಚಿ ಮುನ್ಸಿಪಲ್ ಕಾರ್ಪೊರೇಶನ್‌ನ ಮಾಜಿ ನಿರ್ದೇಶಕ ಮತ್ತು ನೇತ್ರಶಾಸ್ತ್ರಜ್ಞರನ್ನು ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಪಾಕಿಸ್ತಾನದಲ್ಲಿ ಹಿಂದೂ ವೈದ್ಯರೊಬ್ಬರನ್ನು  ಟಾರ್ಗೆಟ್ ಮಾಡಲಾಗಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ಕೂಡ ಬಯಲಿಗೆ ಬಂದಿದೆ.

ಮತ್ತಷ್ಟು ಓದಿ: Bengaluru: ಪಾರ್ಕ್​ನಲ್ಲಿ ಕುಳಿತಿದ್ದ ಯುವತಿಯನ್ನು ಎಳೆದೊಯ್ದು ಗ್ಯಾಂಗ್​ರೇಪ್​, ಆರೋಪಿಗಳನ್ನ ಬಂಧಿಸಿದ ಪೊಲೀಸರು

ಈ ಸಿಸಿಟಿವಿ ಫೂಟೇಜ್ ಆಧಾರದಲ್ಲಿ ಟಾರ್ಗೆಟ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ತಿಂಗಳಲ್ಲಿ ಪಾಕಿಸ್ತಾನದಲ್ಲಿ ಹಿಂದೂ ವೈದ್ಯರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಈ ತಿಂಗಳ ಆರಂಭದಲ್ಲಿ, ಪಾಕಿಸ್ತಾನದ ಹೈದರಾಬಾದ್‌ನಲ್ಲಿ ವೈದ್ಯರಾಗಿದ್ದ ಧರಮ್ ದೇವ್ ರಾಠಿ ಅವರನ್ನು ಅವರ ಡ್ರೈವರ್‌ನಿಂದ ಅವರ ಮನೆಯೊಳಗೆ ಕೊಲೆ ಮಾಡಿಸಲಾಗಿತ್ತು. ಚಾಲಕ ಚಾಕುವಿನಿಂದ ವೈದ್ಯರ ಕತ್ತು ಸೀಳಿದ್ದ ಎಂದು ಪೊಲೀಸರು ಪಾಕಿಸ್ತಾನಿ ಸುದ್ದಿವಾಹಿನಿ ದಿ ನೇಷನ್‌ಗೆ ತಿಳಿಸಿದ್ದರು.

ಪೊಲೀಸರು ಖೈರ್‌ಪುರದ ಮನೆಯಿಂದ ಚಾಲಕನನ್ನು ಬಂಧಿಸಿದ್ದಾರೆ ಮತ್ತು ಅವನನ್ನು ಹನೀಫ್ ಲೆಘರಿ ಎಂದು ಗುರುತಿಸಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ವಾಹನದ ಮೇಲೆ ದಾಳಿ ನಡೆಸಿದಾಗ ಡಾ ಜೆನಾನಿ ಅವರೊಂದಿಗೆ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯೆ ವಾಹನದಲ್ಲಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್