AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಮೋಸ; ವಂಚಕನನ್ನು ಹುಡುಕಲು ಸಾರ್ವಜನಿಕರ ಸಹಾಯ ಕೋರಿದ ಪೊಲೀಸರು

ಪೊಲೀಸ್ ಸಿಐಡಿ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಮಹಾನಿರ್ದೇಶಕ ಶ್ರೀ ಪಿ ಎಸ್ ಸಂಧು ಅವರ ಮಾಹಿತಿಯಂತೆ, ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಛಾಯಾಚಿತ್ರಗಳನ್ನು ಹೊರತುಪಡಿಸಿ ಆರೋಪಿಯ ನಿಜವಾದ ಗುರುತು ತಿಳಿದುಬಂದಿಲ್ಲ.

ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಮೋಸ; ವಂಚಕನನ್ನು ಹುಡುಕಲು ಸಾರ್ವಜನಿಕರ ಸಹಾಯ ಕೋರಿದ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 14, 2021 | 1:12 PM

Share

ಬೆಂಗಳೂರು: ಅಮಾಯಕ ಜನರನ್ನು ವಂಚಿಸುವ ಉದ್ದೇಶದಿಂದ ತನ್ನ ಮೂಲ ಗುರುತನ್ನು ಮರೆಮಾಚುವ ಮೂಲಕ ಓರ್ವ ವಂಚಕ ವಿವಿಧ ಹೆಸರುಗಳಲ್ಲಿ ನಕಲಿ ದಾಖಲೆಗಳನ್ನು ತಯಾರಿಸಿ, ವಿವಿಧ ಬ್ಯಾಂಕುಗಳಲ್ಲಿ ಖಾತೆಗಳನ್ನು ತೆರೆದಿರುವ ಬಗ್ಗೆ ಕರ್ನಾಟಕ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆತನನ್ನು ಪತ್ತೆಹಚ್ಚಲು ಮುಂದಾಗಿರುವ ಪೊಲೀಸರು ಸಾರ್ವಜನಿಕರ ಸಹಕಾರವನ್ನು ಕೋರಿದ್ದಾರೆ.

ಪೊಲೀಸ್ ಸಿಐಡಿ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಮಹಾನಿರ್ದೇಶಕ ಶ್ರೀ ಪಿ ಎಸ್ ಸಂಧು ಅವರ ಮಾಹಿತಿಯಂತೆ, ತನಿಖೆಯ ಸಮಯದಲ್ಲಿ ಸಂಗ್ರಹಿಸಿದ ಛಾಯಾಚಿತ್ರಗಳನ್ನು ಹೊರತುಪಡಿಸಿ ಆರೋಪಿಯ ನಿಜವಾದ ಗುರುತು ತಿಳಿದುಬಂದಿಲ್ಲ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎರಡು ಶಾಖೆಗಳಲ್ಲಿ ಮತ್ತು ಉತ್ತರ ಪ್ರದೇಶದ ಗೋರಖ್‌ಪುರದ ಕೆನರಾ ಬ್ಯಾಂಕಿನ ಒಂದು ಶಾಖೆಯಲ್ಲಿ ಆರೋಪಿಯು ಖಾತೆಗಳನ್ನು ತೆರೆದಿದ್ದಾನೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪಡ್ರಿ ಬಜಾರ್ ಶಾಖೆಯಲ್ಲಿ ವಿಜಯ್ ಸನ್ ಆಫ್ ರಾಮಚಂದ್ರ ಎಂಬ ಹೆಸರಿನಲ್ಲಿ ಆತ ಖಾತೆ ತೆರೆದಿದ್ದಾನೆ. ಮನೆ ಸಂಖ್ಯೆ 378 ಮತ್ತು 2/255, ಮನಸ್ ವಿಹಾರ್ ಕಾಲೋನಿ, ಗೋರಖ್​ಪುರ್ ಸದರ್, ಗೋರಖ್​ಪುರ್ ಎಂಬ ವಸತಿ ವಿಳಾಸವನ್ನು ನೀಡುವ ಮೂಲಕ ಖಾತೆಯನ್ನು ತೆರೆದಿದ್ದಾನೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೊಹದ್ದಿಪುರ ಶಾಖೆಯಲ್ಲಿ ವಂಚಕ ಉಗ್ರಾಸೆನ್ ಸಿಂಗ್ ಅವರ ಪುತ್ರ ಸುಮಿತ್ ಸಿಂಗ್ ಎಂಬ ಹೆಸರಿನಲ್ಲಿ ಹೌಸ್ ನಂ 229, ಆವಾಸ್ ವಿಕಾಸ್ ಕಾಲೋನಿ, ಗೋರಖ್​ಪುರ್ ಸದರ್, ಗೋರಖ್​ಪುರ್ ಎಂಬುದನ್ನು ತಮ್ಮ ವಸತಿ ವಿಳಾಸವಾಗಿ ಒದಗಿಸಿ ಮತ್ತೂ ಒಂದು ಖಾತೆಯನ್ನು ತೆರೆದಿದ್ದಾನೆ.

ತಾರಮಂಡಲ್ ಶಾಖೆಯಲ್ಲಿ ತೆರೆಯಲಾದ ತನ್ನ ಖಾತೆಯಲ್ಲಿ, ಮೋಸಗಾರ ತನ್ನ ಹೆಸರನ್ನು ಸಂದೀಪ್ ಜೈಸ್ವಾಲ್ ಪುತ್ರ ಅಶೋಕ್‌ ಎಂದು ನೀಡಿದ್ದಾನೆ. ಮತ್ತು ತನ್ನ ವಿಳಾಸವನ್ನು ಹೌಸ್ ನಂ 1/87, ಆಜಾದ್ ನಗರ, ರುಸ್ತಾಂಪುರ, ಗೋರಖ್​ಪುರ ಸದರ್, ಗೋರಖ್‌ಪುರ ಎಂದು ತೋರಿಸಿದ್ದಾನೆ.

2008 ರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 (ಸಿ) ಮತ್ತು 66 (ಡಿ) ಅಡಿಯಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳು ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ರ ಅಡಿಯಲ್ಲಿ ವಂಚನೆಯನ್ನು ಬೆಂಗಳೂರಿನ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Mehul Choksi: 13,500 ಕೋಟಿ ವಂಚನೆಯ ಆರೋಪಿ ಮೆಹುಲ್ ಚೋಸ್ಕಿ ಭಾರತಕ್ಕೆ ಹಸ್ತಾಂತರ: ಆಂಟಿಗುವಾ ಪ್ರಧಾನಿ

ರೆಮ್​ಡಿಸಿವಿರ್, ಆಕ್ಸಿಜನ್ ಸಿಲಿಂಡರ್ ನೀಡುವುದಾಗಿ ವಂಚನೆ; ಅಪರಿಚಿತ ಸಂಖ್ಯೆಗೆ ಹಣ ಕಳಿಸುವ ಮುನ್ನ ಎಚ್ಚರ

Published On - 7:09 pm, Fri, 28 May 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ