AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು

ಬೆಂಗಳೂರಿನಲ್ಲಿ ನಾಲ್ಕು ಪ್ರತ್ಯೇಕ ಮಾದಕ ವಸ್ತು ಮಾರಾಟ ಜಾಲವನ್ನು ಬೇಧಿಸಿರುವ ಪೊಲೀಸರು ಅಪಾರ ಪ್ರಮಾಣದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು
ಬೆಂಗಳೂರಿನ ಕೆಂಗೇರಿ ಗೇಟ್ ಎ.ಸಿ.ಪಿ. ಕ್ರೈಂ ಸ್ಕ್ವಾಡ್ ವಶಪಡಿಸಿಕೊಂಡ 50 110 ಕೆ.ಜಿ. ಗಾಂಜಾ
TV9 Web
| Edited By: |

Updated on: Jul 05, 2021 | 5:21 PM

Share

ಬೆಂಗಳೂರು: ರಾಜ್ಯಕ್ಕೆ ನೆರೆ ರಾಜ್ಯದಿಂದ ಗಾಂಜಾ ಘಾಟು ಎಗ್ಗಿಲ್ಲದೇ ಕಾಲಿಡುತ್ತಿದೆ. ಕಳೆದ ಮೂರು ವಾರದಿಂದ ಕಣ್ಣಿಟ್ಟಿದ್ದ ಖಾಕಿ ಪಡೆಯಿಂದ ಇಂದು ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರಿನ ಕೆಂಗೇರಿ ಗೇಟ್ ಎಸಿಪಿ ಸ್ಕ್ವಾಡ್‌ನಿಂದ ಈರ್ವರನ್ನು ಬಂಧಿಸಲಾಗಿದ್ದು,  ಅವರಿಂದ 50 ಲಕ್ಷ ರೂ. ಮೌಲ್ಯದ 110 ಕೆಜಿ ಶುದ್ಧ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್‌ ಬಳಿ ಕಾರು ತಡೆದು ಆರೋಪಿಗಳಾದ ಅಪ್ಪಣ್ಣ, ಸುಬ್ರಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಖಪಟ್ಟಣಂನ ಗುಡ್ಡಗಾಡು ಪ್ರದೇಶದಲ್ಲಿ ಬೆಳೆದ ಗಾಂಜಾವನ್ನು ಸ್ಥಳೀಯರಿಂದ ಖರೀದಿಸಿ ತಂದು ರಾಜ್ಯದ ಹಲವು ಜಿಲ್ಲೆಗಳಿಗೆ ಪೂರೈಕೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಮಡಿವಾಳ ಠಾಣೆಯ ಪೊಲೀಸರು ಮಾದಕ ವಸ್ತು ಮಾರಾಟ ಜಾಲವನ್ನು ಬೇಧಿಸಿ ಭರ್ಜರಿ 1.85ಕೋಟಿ ರೂ. ಮೌಲ್ಯದ ಡ್ರಗ್ಸ್​ಅನ್ನು ವಶಪಡಿಸಿಕೊಂಡಿದ್ದಾರೆ.  ಹ್ಯಾಶ್ ಆಯಿಲ್, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಲೋಕೇಶ್, ಮೋಹನ್ ಕುಮಾರ್, ಜಬಿ ಎಂಬುವವರನ್ನು ಬಂಧಿಸಿದ್ದಾರೆ. ಈ ವೇಳೆ ಹ್ಯಾಷ್ ಆಯಿಲ್ ಅಸಲಿಯೊ, ನಕಲಿಯೊ ಎಂದು ಪರೀಕ್ಷಿಸುವ ವೇಳೆ ಮೂವರು ಸಿಬ್ಬಂದಿ ಮೂರ್ಛೆ ಹೋಗಿದ್ದಾರೆ. ವಾಹನ ತಪಾಸಣೆ ವೇಳೆ ಸಿಕ್ಕಿದ್ದ ಕ್ಲ್ಯೂ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು. ‘ವಿಶಾಖಪಟ್ಟಣದಿಂದ ಬಂದಿದ್ದೀವಿ’ ಎಂದಿದ್ದ ಆರೋಪಿಗಳ ಮೂಲಕವೇ ಅವರ ಕಿಂಗ್‌ಪಿನ್​ಗೆ ಕರೆ ಮಾಡಿಸಿ ಡ್ರಗ್ಸ್​ ಬೇಕೆಂದು ಹೇಳಿ ಪೊಲೀಸರು ಖೆಡ್ಡಾಗಿ‌ ಬೀಳಿಸಿದ್ದಾರೆ. ಮಡಿವಾಳ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಹೆಚ್‌ಬಿಆರ್‌ ಲೇಔಟ್‌ ಬಳಿ ಕೊಕೇನ್ ಮಾರುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಇದರಲ್ಲಿ ಓರ್ವ ಮಹಿಳೆಯೂ ಸೇರಿದ್ದಾಳೆ. ಅವರಿಂದ 4.70 ಲಕ್ಷ ರೂ. ಮೌಲ್ಯದ 55 ಗ್ರಾಂ ಕೊಕೇನ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳನ್ನು ಟಾರ್ಗೆಟ್ ಮಾಡಿದ್ದರು.  ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಗೇರಿಗೇಟ್ ಎಸಿಪಿ ವಿಶೇಷ ಅಪರಾಧ ಪತ್ತೆ ದಳವು ಕಾರ್ ನಲ್ಲಿ ನೂರು ಕೆಜಿ ಗಾಂಜಾ ಸಾಗಿಸುತಿದ್ದ ಆರೋಪಿಗಳನ್ನು ಬಂಧಿಸಿದೆ. ಮಹಿಂದ್ರಾ ಜೈಲೊ ಕಾರ್ ನಲ್ಲಿ ಆರೋಪಿಗಳು ಗಾಂಜಾ ಸಾಗಿಸುತಿದ್ದರು. ಖಚಿತ ಮಾಹಿತಿ ಆಧರಿಸಿ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಬಳಿ ಕಾರ್ ತಡೆದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮೀನಿನ ಬಾಕ್ಸ್​ನಲ್ಲಿ ಗಾಂಜಾ ಸಾಗಿಸುತ್ತಿದ್ದ ಮೂವರ ಸೆರೆ

(Police seize drugs in four different cases at Bengaluru)

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ