AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಜೀವನಕ್ಕೆ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳು: 2 ಕೋಟಿಗೂ ಅಧಿಕ ಮೌಲ್ಯದ ಹ್ಯಾಷ್ ಆಯಿಲ್ ವಶಕ್ಕೆ

Drug Case: ರಾಜಧಾನಿಯಲ್ಲಿ ಖಾಕಿ ಪಡೆಯ ಡ್ರಗ್ಸ್​ ಜಾಲದ ಬೇಟೆ ಮುಂದುವರೆದಿದೆ. ಸುಮಾರು 2ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಐಷಾರಾಮಿ ಜೀವನಕ್ಕೆ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳು: 2 ಕೋಟಿಗೂ ಅಧಿಕ ಮೌಲ್ಯದ ಹ್ಯಾಷ್ ಆಯಿಲ್ ವಶಕ್ಕೆ
ವಶಪಡಿಸಿಕೊಂಡ ವಸ್ತುಗಳನ್ನು ತೋರಿಸುತ್ತಿರುವ ಪೊಲೀಸರು
TV9 Web
| Edited By: |

Updated on: Jul 17, 2021 | 4:01 PM

Share

ಬೆಂಗಳೂರು: ನಗರದಲ್ಲಿ ಖಾಕಿ ಪಡೆಯ ಡ್ರಗ್ಸ್​ ಜಾಲದ ಬೇಟೆ ಮುಂದುವರೆದಿದೆ. ಇತ್ತೀಚೆಗೆ ಹೆಚ್ಚುತ್ತಿರುವ ಡ್ರಗ್ಸ್ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲಿಸ್ ಪಡೆ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಅದರ ಪರಿಣಾಮವಾಗಿ ದಿನವೂ ನಗರದಲ್ಲಿ ಬಹಳಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಪೊಲೀಸರು ಮಾದಕ ವಸ್ತುಗಳ ಸಮೇತ ಆರೋಪಿಗಳನ್ನು ಸೆರೆಹಿಡಿಯುತ್ತಿದ್ದಾರೆ. ಇದೇ ಮಾದರಿಯಲ್ಲಿ ಇಂದು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಐಷಾರಾಮಿ ಜೀವನಕ್ಕಾಗಿ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಡ್ರಗ್ಸ್ ತರಿಸಿ ವಿದ್ಯಾರ್ಥಿಗಳು ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಅವರನ್ನು ಮೊಹಮ್ಮದ್ ಇರ್ಫಾನ್ ಹಾಗೂ ಥಾರಿ ಅಜೀಮ್ ಎಂದು ಗುರುತಿಸಲಾಗಿದೆ. ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ವಿದ್ಯಾರ್ಥಿಗಳಿಂದ 2 ಕೋಟಿ ರೂ. ಮೌಲ್ಯದ 4 ಕೆಜಿ ಹಾಷಿಷ್ ಆಯಿಲ್(ಒಂದು ಮಾದರಿಯ ಮಾದಕ ದ್ರವ್ಯ)​ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಟೆಕ್ಕಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದರು ಎಂದು ತಿಳಿದು ಬಂದಿದೆ.

ಬೆಂಗಳೂರು ನಗರದ ಆಗ್ನೇಯದ ಮೈಕೊ ಲೇಔಟ್ ಉಪ ವಿಭಾಗದ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಆರೋಪಿಗಳಾದ ಮೊಹಮ್ಮದ್ ಇರ್ಫಾನ್​ 24 ಹಾಗೂ ಥಾರಿ ಅಜೀಮ್​ 26 ವರ್ಷದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಡ್ರಗ್​ ಪ್ರಕರಣಗಳಲ್ಲಿ ನಮ್ಮನ್ನು ಟಾರ್ಗೆಟ್​ ಮಾಡಲಾಗುತ್ತಿದೆ; ಭಾರತೀಯರೂ ನಮ್ಮನ್ನು ಹೊರದಬ್ಬುತ್ತಿದ್ದಾರೆ: ನೈಜೀರಿಯಾ ಪ್ರಜೆಗಳ ಅಸಮಾಧಾನ

ಇದನ್ನೂ ಓದಿ: ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ 11 ಜನ ವಿದ್ಯಾರ್ಥಿಗಳ ಬಂಧನ; ಉತ್ತರ ವಿಭಾಗದ ಪೊಲೀಸರಿಂದ ವಿಚಾರಣೆ

(Police seized 4kg hash oil worth 2Cr in Bengaluru)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ