Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕ ಜಪ್ತಿ, ಭೂ ಪರಿಹಾರ ಗೊಂದಲ ರೈತ ಆತ್ಮಹತ್ಯೆ, ರಾಗಿ ಖರೀದಿಗೆ ಲಂಚ ಕೇಳಿದ ನೌಕರನ ಬಂಧನ

ರೌಡಿಶೀಟರ್​ ಜೆಸಿಬಿ ನಾರಾಯಣಸ್ವಾಮಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹುಸ್ಕೂರಿನ ಕಾಂಗ್ರೆಸ್ ಮುಖಂಡನನ್ನು ಬೇಗೂರು ಠಾಣೆ ಪೊಲೀಸರು ಶುಕ್ರವಾರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದರು.

Crime News: ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕ ಜಪ್ತಿ, ಭೂ ಪರಿಹಾರ ಗೊಂದಲ ರೈತ ಆತ್ಮಹತ್ಯೆ, ರಾಗಿ ಖರೀದಿಗೆ ಲಂಚ ಕೇಳಿದ ನೌಕರನ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 18, 2022 | 10:39 PM

ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕಗಳನ್ನು ಪೊಲೀಸರು ನಗರದ ಲಂಡನ್ ಬ್ರಿಡ್ಜ್ ಬಳಿ ಜಪ್ತಿ ಮಾಡಿದ್ದಾರೆ. 84 ಜಿಲೆಟಿನ್ ಕಡ್ಡಿಗಳು, 4 ಎಲೆಕ್ಟ್ರಿಕ್‌ ಡಿಟೋನೇಟರ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಾಲಮುರುಗನ್‌, ಆನಂದ್‌ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸುತ್ತಿದ್ದರು. ಕಾರವಾರ ನಗರ ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ರೌಡಿಶೀಟರ್ ಕೊಲೆ ಯತ್ನ ಪ್ರಕರಣದ ಆರೋಪಿ ಬಂಧನ

ಆನೇಕಲ್: ರೌಡಿಶೀಟರ್​ ಜೆಸಿಬಿ ನಾರಾಯಣಸ್ವಾಮಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹುಸ್ಕೂರಿನ ಕಾಂಗ್ರೆಸ್ ಮುಖಂಡನನ್ನು ಬೇಗೂರು ಠಾಣೆ ಪೊಲೀಸರು ಶುಕ್ರವಾರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದರು. ಕೊಲೆಗೆ ಯತ್ನಿಸಿದ್ದ ಗ್ಯಾಂಗ್ ಸದಸ್ಯ ದೇವ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದರು. ದೇವ್ ಹೇಳಿಕೆ ಆಧಾರದಲ್ಲಿ ಕಾಂಗ್ರೆಸ್ ಮುಖಂಡನನ್ನು ವಿಚಾರಿಸಿದರು. ಕೆಲವು ದಿನಗಳ ಹಿಂದೆ ಬೇಗೂರು ರಸ್ತೆಯಲ್ಲಿ ರೌಡಿಶೀಟರ್ ಜೆಸಿಬಿ ನಾರಾಯಣಸ್ವಾಮಿ ಹತ್ಯೆಗೆ ಯತ್ನ ನಡೆದಿತ್ತು. ನಾರಾಯಣಸ್ವಾಮಿ ಕೊಲೆ ಯತ್ನದ ವಿಡಿಯೊ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಭೂ ಪರಿಹಾರ ಗೊಂದಲ: ರೈತ ಆತ್ಮಹತ್ಯೆ

ಶಿವಮೊಗ್ಗ: ರೈಲ್ವೆ ಯೋಜನೆಗೆ ಸ್ವಾಧೀನವಾಗಿದ್ದ ಭೂಮಿಗೆ ಕಡಿಮೆ ಪರಿಹಾರ ನೀಡಲು ಮುಂದಾದ ಹಿನ್ನೆಲೆಯಲ್ಲಿ ರೈತ ಮನನೊಂದು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾರೋಗೊಪ್ಪದಲ್ಲಿ ನಡೆದಿದೆ. ಮೃತನನ್ನು ಅರುಣ್ ನಾಯ್ಕ್ (28) ಎಂದು ಗುರುತಿಸಲಾಗಿದೆ. ಮೂರು ಎಕರೆ ಅಡಿಕೆ ತೋಟವನ್ನು ರೈಲ್ವೆ ಇಲಾಖೆ ಸ್ವಾಧೀನಪಡಿಸಿಕೊಂಡಿತ್ತು. ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕಾಗಿ ಸ್ವಾಧೀನಪಡಿಸಿಕೊಂಡಿದ್ದ ತೋಟಕ್ಕೆ ಇಲಾಖೆಯು ಪ್ರತಿ ಎಕರೆಗೆ ಕೇವಲ ₹ 5 ಲಕ್ಷ ಪರಿಹಾರ ಘೋಷಿಸಿತ್ತು. ಈ ಸಂಬಂಧ ದಾವಣಗೆರೆಯ ರೈಲ್ವೆ ಭೂಸ್ವಾಧೀನ ಪ್ರಾಧಿಕಾರ ಅಧಿಕಾರಿಗಳು ನೊಟೀಸ್ ನೀಡಿತ್ತು. ಆದರೆ ಈ ಪ್ರದೇಶದಲ್ಲಿ ಒಂದು ಎಕರೆ ಅಡಿಕೆ ತೋಟವು 30ರಿಂದ 40 ಲಕ್ಷ ರೂಪಾಯಿ ಬೆಲೆ ಬಾಳುತ್ತದೆ ಎಂದು ಮೃತ ರೈತ ಹೇಳಿದ್ದ. ಶಿಕಾರಿಪುರ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಗಿ ಖರೀದಿಗೆ ಲಂಚ: ಎಸಿಬಿ ವಶಕ್ಕೆ ನೌಕರ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ರಾಗಿ ಖರೀದಿ ಕೇಂದ್ರದ ಹೊರಗುತ್ತಿಗೆ ನೌಕರ ಲಿಂಗಯ್ಯ ಎನ್ನುವವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿ ರೈತರಿಂದ ತಲಾ ₹ 1,500 ಲಂಚಕ್ಕೆ ಬೇಡಿಕೆಯಿಡುತ್ತಿದ್ದರು. ರಾಗಿ ಮಾರಾಟಕ್ಕೆ ಖರೀದಿ ಕೇಂದ್ರಕ್ಕೆ ತೆರಳಿದ್ದ ತಾವರೆಕೆರೆ ನಿವಾಸಿಯೊಬ್ಬರು ಎಸಿಬಿಗೆ ದೂರು ನೀಡಿದ್ದರು.

ಮಂಗಳೂರಿನಲ್ಲಿ ಗ್ಯಾಸ್ ಲೀಕೇಜ್ ಆತಂಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಗ್ಯಾಸ್ ಲೀಕೇಜ್ ಆತಂಕ ಕಂಡುಬಂದಿದೆ. ಅರ್ಧ ಮಂಗಳೂರು ನಗರಕ್ಕೆ ಎಲ್​ಪಿಜಿ ವಾಸನೆ ವ್ಯಾಪಿಸಿದೆ. ಆದರೆ ಎಲ್ಲಿ ಸೋರಿಕೆಯಾಗುತ್ತಿದೆ ಎನ್ನುವುದು ಈವರೆಗೆ ಪತ್ತೆಯಾಗಿಲ್ಲ. ನಗರದಲ್ಲಿರುವ ಎಲ್ಲ ಪೊಲೀಸ್​ ಠಾಣೆಗಳ ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Bengaluru Crime: ಅಶ್ಲೀಲ ಫೋಟೋ, ವಿಡಿಯೋ ಕಳಿಸಿ ಮಹಿಳೆಯರಿಗೆ ಕಾಟ ಕೊಡುತ್ತಿದ್ದ ಆರೋಪಿ ಅರೆಸ್ಟ್

ಇದನ್ನೂ ಓದಿ: Crime Updates: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬೆಸ್ಕಾಂ ಅಧಿಕಾರಿ ಎಸಿಬಿ ಬಲೆಗೆ, ಮಾರಕಾಸ್ತ್ರ ತೋರಿಸಿ ಡೆಲಿವರಿ ಬಾಯ್ ಬೈಕ್ ಕಳ್ಳತನ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ