AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಕೊಂದು ಸೂಟ್​​ಕೇಸ್​​ನಲ್ಲಿ ಠಾಣೆಗೆ ಶವ ತಂದ ಮಗಳು: ಆರೋಪಿ ಹೇಳಿಕೆಗೆ ಪೊಲೀಸರೇ ಶಾಕ್

ಹೆತ್ತ ತಾಯಿಯನ್ನು ಕೊಂದು ಸೂಟ್​ಕೇಸ್​ನಲ್ಲಿ ಶವವಿಟ್ಟು ಪೊಲೀಸ್​ ಠಾಣೆಗೆ ಹೊತ್ತು ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಆರೋಪಿಯ ಮಾತುಗಳು ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ.

ತಾಯಿ ಕೊಂದು ಸೂಟ್​​ಕೇಸ್​​ನಲ್ಲಿ ಠಾಣೆಗೆ ಶವ ತಂದ ಮಗಳು: ಆರೋಪಿ ಹೇಳಿಕೆಗೆ ಪೊಲೀಸರೇ ಶಾಕ್
ಸೆನಾಲಿ, ಕೊಲೆ ಆರೋಪಿ
ರಮೇಶ್ ಬಿ. ಜವಳಗೇರಾ
|

Updated on: Jun 13, 2023 | 3:54 PM

Share

ಬೆಂಗಳೂರು: ತಾಯಿಗಿಂತ ದೇವರಿಲ್ಲ ಎಂಬ ಮಾತಿದೆ. ಆದ್ರೆ, ಬೆಂಗಳೂರಿನಲ್ಲಿ ಇಲ್ಲೋರ್ವ ಕ್ರೂರಿ ಮಗಳು ತನ್ನ ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ಪ್ಯಾಕ್ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ತಂದಿದ್ದಾಳೆ. ಮಗಳು ಸೇನಾಲಿ ಸೇನ್​ ತನ್ನ ತಾಯಿ ಬೀವಾಪಾಲ್ (70) ಎಂಬಾಕೆಯನ್ನು ಕೊಲೆ ಮಾಡಿ, ಸೂಟ್​ಕೇಸ್​ನಲ್ಲಿ ತಂದೆಯ ಫೋಟೋ ಜತೆಗೆ ತಾಯಿ ಶವವಿಟ್ಟು, ಮೈಕೊಲೇಔಟ್ ಪೊಲೀಸ್ ಠಾಣೆಗೆ ಹೊತ್ತು ತಂದು ಶರಣಾಗಿದ್ದಾಳೆ. ಈ ಪ್ರಕರಣದ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲಿಗೆ ಬಂದಿದೆ. ಇನ್ನು ಆರೋಪಿ ಸೆನಾಲಿ ಸೇನ್‌ ಮಾತಿಗೆ ಪೊಲೀಸರೇ ಶಾಕ್​ ಆಗಿದ್ದಾರೆ.

ಇದನ್ನೂ ಓದಿ: Bengaluru News: ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವವನ್ನು ಪೊಲೀಸ್​ ಠಾಣೆಗೆ ತಂದ ಮಗಳು

ತಾಯಿಯೇ ಮಗಳ ಬಳಿ ನಿದ್ರೆ ಮಾತ್ರೆ ಕೊಟ್ಟು ಸಾಯಿಸುವಂತೆ ಹೇಳಿದ್ದಳು. ಅದರಂತೆ ನನ್ನ ತಾಯಿಗೆ ಮುಕ್ತಿ ಕೊಡಿಸಿದ್ದೇನೆ ಎಂದು ಪುತ್ರಿ ಸೆನಾಲಿ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾಳೆ. ಈಕೆಯ ಮಾತುಗಳು ಕೇಳಿ ಮೈಕ್ರೋ ಲೇಔಟ್ ಪೊಲೀಸರೇ ಶಾಕ್ ಆಗಿದ್ದಾರೆ. ಕೆಲವು ವರ್ಷಗಳ ಹಿಂದೆ ಸೆನಾಲಿ ತಂದೆ ತೀರಿ ಹೋಗಿದ್ದಾರೆ. ನೀನು ನನ್ನ ತಂದೆ ಬಳಿ ಹೋಗು, ನಾನು ಜೈಲಿಗೆ ಹೋಗುತ್ತೇನೆ ಎಂದು ಕೊಲೆ ಮಾಡುವ ಮುಂಚೆಯೇ ತಾಯಿ-ಮಗಳು ಮಾತನಾಡಿದ್ದರು ಎಂಬ ಸಂಗತಿ ಈ ಪ್ರಕರಣದ ವಿಚಾರಣೆ ವೇಳೆ ಬಯಲಾಗಿದೆ.

ಆರೋಪಿ ಸೆನಾಲಿ ಸೇನ್, ತಾಯಿ ಬೀವಾಪಾಲ್​ ಮತ್ತು ಸೆನಾಲಿ ಅತ್ತೆ ಒಂದೇ ಮನೆಯಲ್ಲಿ ವಾಸವಿದ್ದರು. ಇಬ್ಬರು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದರಂತೆ. ತಾಯಿ ಮತ್ತು ಅತ್ತೆ ಜಗಳದಿಂದ ಬೇಸತ್ತು ಸೆನಾಲಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಸೆನಾಲಿ ಮಗನಿಗೂ ಕೂಡ ಮಾನಸಿಕ ತೊಂದರೆ ಕಾಡುತ್ತಿತ್ತು. ಒಂದು ಕಡೆ ಮಗನ ಚಿಂತೆ, ಇನ್ನೊಂದು ಕಡೆ ಅತ್ತೆ-ತಾಯಿಯ ಜಗಳ. ಇದರಿಂದ ಜೀವನದಲ್ಲಿ ಬೇಸತ್ತು ಹೋಗಿದ್ದ ಸೆನಾಲಿ ಈ ದುಷ್ಕ್ರತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದೆ.

ಮೂಲತಃ ಅಸ್ಸಾಂ ಮೂಲದ ಸೆನಾಲಿ, ಸುಬ್ರತ್​ ಸೇನ್​ ದಂಪತಿ ಹತ್ತು ವರ್ಷಗಳ ಹಿಂದೆ ವಿವಾಹವಾಗಿದ್ದರು. ಕುಟುಂಬ ನಿಶ್ಚಯದಂತೆ ಇಬ್ಬರ ವಿವಾಹ ನಡೆದಿತ್ತು. ಸುಬ್ರತ್ ಸೇನ್, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದು, ಬಿಳೇಕಳ್ಳಿಯಲ್ಲಿ ಸ್ವಂತ ಪ್ಲ್ಯಾಟ್ ಹೊಂದಿದ್ದಾರೆ. ಇನ್ನು ಸುಬ್ರತ್ ಆತನ ತಾಯಿ, ಸೆನಾಲಿ ಹಾಗೂ ಒಂಬತ್ತು ವರ್ಷದ ಮಗ ವಾಸವಿದ್ದರು. ಇನ್ನು ಕೊಲ್ಕತ್ತಾದಲ್ಲಿ ಕ್ಲರ್ಕ್​ ಆಗಿದ್ದ ಸೊನಾಲಿ ತಂದೆ 2018ರಲ್ಲಿ ಸಾವನಪ್ಪಿದ್ದರು. ಪತಿ ಸಾವಿನ ಬಳಿಕ ಬೀವಾಪಾಲ್ ಮಗಳ(ಸೊನಾಲಿ) ಮನೆಗೆ ಬಂದ ನೆಲೆಸಿದ್ದಳು. ಆದ್ರೆ, ನಿನ್ನೆ ತಾಯಿಯನ್ನು ಕೊಲೆ ಮಾಡಿ ಉಬರ್ ಮುಖಾಂತರ ಆಟೋ ಬುಕ್ ಮಾಡಿ ಮೈಕ್ರೋಲೇಔಟ್ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಳು.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ