AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಪೊಲೀಸರಿಂದ ಗುಂಡೇಟು; ಆರೋಪಿ ಸೆರೆ

ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡು ಹೊಡೆದು ಪೊಲೀಸರು ಆರೋಪಿಯನ್ನು ಸೆರೆ ಹಿಡಿದಿರುವ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳ ಗ್ರಾಮದಲ್ಲಿ ನಡೆದಿದೆ.

ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಪೊಲೀಸರಿಂದ ಗುಂಡೇಟು; ಆರೋಪಿ ಸೆರೆ
ಸಾಂದರ್ಭಿಕ ಚಿತ್ರImage Credit source: NDTV
TV9 Web
| Edited By: |

Updated on:Aug 22, 2022 | 9:00 PM

Share

ದಕ್ಷಿಣ ಕನ್ನಡ: ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡು ಹೊಡೆದು ಪೊಲೀಸರು ಆರೋಪಿಯನ್ನು (Accused) ಸೆರೆ ಹಿಡಿದಿರುವ ಘಟನೆ ಮಂಗಳೂರು (Mangalore) ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳ ಗ್ರಾಮದಲ್ಲಿ ನಡೆದಿದೆ. ಮಿಸ್ಟ ಅಲಿಯಾಸ್​ ಎಮ್.ಡಿ.ಮುಸ್ತಾಕ್ (26) ಬಂಧಿತ ಆರೋಪಿ. ಆರೋಪಿ ಎಮ್.ಡಿ.ಮುಸ್ತಾಕ್ ಆ.19 ರಂದು ಕೊಲೆಗೆ ಯತ್ನಿಸಿರುವ ಆರೋಪದಡಿ ಪೊಲೀಸರು ಬಂಧಿಸಿದ್ದರು.

ಈ ಸಂಬಂಧ ಪೊಲೀಸರು ಸ್ಥಳ ಮಹಜರು ಮಾಡಲು ಆರೋಪಿಯ ಕರೆದುಕೊಂಡು ಹೋಗಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆ ಅಟ್ಯಾಕ್ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪಿ.ಎಸ್.ಐ ವಿನಾಯಕ ಬಾವಿಕಟ್ಟಿ, ಪಿಸಿ ಸದ್ದಾಂ ಹುಸೇನ್​ ಅವರಿಗೆ ಗಾಯವಾಗಿದೆ. ಹೀಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.

ಗುಂಡೇಟು ತಿಂದ ಮಿಸ್ಟನನ್ನು ಪೊಲೀಸರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿದ್ದಾರೆ.

ಕುಖ್ಯಾತ ಅಂತಾರಾಜ್ಯ ಕಾರು ಕಳ್ಳರಿಬ್ಬರ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಕುಖ್ಯಾತ ಅಂತಾರಾಜ್ಯ ಕಾರು ಕಳ್ಳರಿಬ್ಬರನ್ನು ಅಶೋಕ್‌ ನಗರ ಪೊಲೀಸರು ಬಂಧಿಸಿದ್ದಾರೆ. ಅಯಾಜ್‌, ಮತೀನ್‌ವುದ್ದೀನ್  ಬಂಧಿತ ಆರೋಪಿಗಳು. ಆರೋಪಿಗಳಿಂದ  1 ಕೋಟಿ 20 ಲಕ್ಷ ಮೌಲ್ಯದ 9 ಐಷಾರಾಮಿ ಕಾರುಗಳು ಸೀಜ್‌ ಮಾಡಲಾಗಿದೆ. ಆರೋಪಿಗಳು ದೆಹಲಿ, ಪಂಜಾಬ್‌, ಹಿಮಾಚಲಪ್ರದೇಶಗಳಲ್ಲಿ ಕಳವು ಮಾಡುತ್ತಿದ್ದರು.

ಕದ್ದ ಕಾರುಗಳಿಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಬೆಂಗಳೂರಿಗೆ ತಂದು ಮಾರುತ್ತಿದ್ದರು.  ಬಂಧಿತ ಆರೋಪಿಗಳ ಸಹಚರರಾದ ಸೈಯದ್‌, ಸಮೀರ್‌, ಡೆಲ್ಲಿ ಇಮ್ರಾನ್‌, ಯಾರಬ್​ ಮತ್ತು ತನ್ವೀರ್‌ಗಾಗಿ ಅಶೋಕ್‌ ನಗರ ಠಾಣೆಯ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಜೈಪುರದ ಕ್ಯಾಸಿನೋ ಮೇಲೆ ಪೊಲೀಸರ ದಾಳಿ; ಕೆಎಎಸ್​ ಅಧಿಕಾರಿ, ಬಿಜೆಪಿ ಮುಖಂಡ ಸೇರಿದಂತೆ ಕೋಲಾರದ 7 ಮಂದಿಯ ಬಂಧನ

ಕೋಲಾರ: ಕ್ಯಾಸಿನೋ ಹಾಗೂ ಅಶ್ಲೀಲ ನೃತ್ಯ ನಡೆಯುತ್ತಿದ್ದ ಜೈಪುರದ ಸಾಯಿಪುರ ಫಾರ್ಮ್​ ಹೌಸ್​​ ಮೇಲೆ ಜೈಪುರದ ಸ್ಪೆಷಲ್​ ಕ್ರೈಂ ಬ್ರಾಂಚ್​ ಪೊಲೀಸರು ರೇಡ್​ ಮಾಡಿದ್ದಾರೆ. ರೇಡ್​​ನಲ್ಲಿ ಕೋಲಾರದ ಏಳು ಜನರನ್ನು ಬಂಧಿಸಿದ್ದಾರೆ. ಕೋಲಾರ ಸೈಬರ್​ ಕ್ರೈಂ ಇನ್ಪೆಕ್ಟರ್ ಆಂಜಿನಪ್ಪ, ಶಿಕ್ಷಕ ರಮೇಶ್​, ವ್ಯಾಪಾರಿ ಸುಧಾಕರ್​, ಕೋಲಾರ ನಗರಸಭೆ ಸದಸ್ಯ ಸತೀಶ್​, ಹಾಗೂ ಬಿಜೆಪಿ ಮುಖಂಡ ರಾಜೇಶ್​, ಕೆಎಎಸ್​ ಅಧಿಕಾರಿ ಶ್ರೀನಾಥ್​ ಮತ್ತು ಆರ್​ಟಿಒ ಇಲಾಖೆ ಸಿಬ್ಬಂದಿ ಶಬರೀಶ್ ಬಂಧಿತರು.

ದೆಹಲಿ ಮೂಲದ ಈವೆಂಟ್​ ಕಂಪನಿ ಹೈಪ್ರೊಪೈಲ್​ ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೆ ತಲಾ 2 ಲಕ್ಷ ರೂಪಾಯಿ ಚಾರ್ಜ್​ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 84 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಕೋಲಾರದ 7 ಜನರನ್ನು ಬಂಧಿಸಿದ್ದಾರೆ.

ದಾಳಿ ವೇಳೆ 14 ವಿಲಾಸಿ ಕಾರುಗಳು, 1 ಟ್ರಕ್​ ಸೇರಿದಂತೆ, ಹಾಗೂ ಹುಕ್ಕಾ ಪಾಟ್​ಗಳು ಫಾರಿನ್​ ಡ್ರಿಂಕ್ಸ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:49 pm, Mon, 22 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್