ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿವಿಧ ಅರಬ್ ರಾಷ್ಟ್ರಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳು

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ತಪ್ಪಿಸಿಕೊಂಡಿರುವ ನಾಲ್ವರು ಆರೋಪಿಗಳು ಭಾರತದಲ್ಲಿ ಇರುವುದೇ ಅನುವಾನವಾಗಿದೆ. ಕೊಲೆಯ ತನಿಖೆ ಎನ್ಐಎ ಹೆಗಲಿಗೆ ಬಿದ್ದಾಗಲೇ ಕೊಲೆಯ ಮಾಸ್ಟರ್ ಮೈಂಡ್​ಗಳು ವಿದೇಶಕ್ಕೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿವಿಧ ಅರಬ್ ರಾಷ್ಟ್ರಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳು
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ವರು ಪ್ರಮುಖ ಆರೋಪಿಗಳು ವಿದೇಶಕ್ಕೆ ಪರಾರಿ
Edited By:

Updated on: Jun 29, 2023 | 10:41 AM

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಕೊಲೆ ಪ್ರಕರಣ ಸಂಬಂಧ ತಪ್ಪಿಸಿಕೊಂಡಿರುವ ನಾಲ್ವರು ಆರೋಪಿಗಳ ತಲೆಗೆ ಒಟ್ಟು 14 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಮಂಗಳೂರು ಮತ್ತು ಕೊಡಗಿನಲ್ಲಿ ನಡೆದ ಶೋಧ ಕಾರ್ಯದ ನಂತರ ರಾಷ್ಟ್ರೀಯ ತನಿಖಾ ದಳವು (NIA) ಶರಾಣಾಗತಿಯಾಗಲು ಆರೋಪಿಗಳಿಗೆ ಜೂ.30 ರ ಗಡುವು ನೀಡಿದೆ. ಅಸಲಿಗೆ ಮೋಸ್ಟ್ ವಾಂಟೆಡ್ ಆರೋಪಿಗಳು ಭಾರತದಲ್ಲೇ ಇರುವುದು ಅನುಮಾನ. ನೇಪಾಳದ ಮೂಲಕ ವಿವಿಧ ಅರಬ್ ದೇಶಗಳಿಗೆ ತಲೆಮರೆಸಿಕೊಂಡಿರುವ ವಿಚಾರ ಟಿವಿ9ಗೆ ಎನ್​ಐಎ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಉಮರ್ ಫಾರುಕ್, ಅಬುಬಕರ್ ಸಿದ್ದಿಕ್, ತುಫೈಲ್, ಮೊಹಮ್ಮದ್ ಮುಸ್ತಾಫಾ ಕೊಲೆ ಪ್ರಕರಣದಲ್ಲಿ ಎನ್​ಐಎಗೆ ಬೇಕಾಗಿರುವ ಮೋಸ್ಟ್​ ವಾಂಟೆಡ್​ಗಳಾಗಿದ್ದಾರೆ. ಕೊಡಗಿನ ತುಫೈಲ್ ಎಮ್.ಹೆಚ್ ಈ ನಾಲ್ವರಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಈ ನಾಲ್ವರ ಪತ್ತೆಗೆ ಒಟ್ಟು 14 ಲಕ್ಷ ಬಹುಮಾನ ಘೋಷಣೆ‌ ಮಾಡಲಾಗಿದೆ. ಈ ಪೈಕಿ ತುಫೈಲ್, ಮೊಹಮ್ಮದ್ ಮುಸ್ತಾಫಾ ಸುಳಿವಿಗೆ ತಲಾ 5 ಲಕ್ಷ, ಉಮರ್ ಫಾರುಕ್, ಅಬುಬಕರ್ ಸಿದ್ದಿಕ್ ಪತ್ತೆಗೆ ತಲಾ 2 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಶರಣಾಗತಿಗೆ ವಾರ್ನಿಂಗ್​​: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA

ಕೊಡಗಿನಲ್ಲಿ ನಡೆದ ಕೋಮುಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತುಫೈಲ್​ಗೆ ಉಗ್ರ ಸಂಘಟನೆಯ ಪ್ರಮುಖರ ನೇರ ಸಂಪರ್ಕ ಇದೆ. ಅಲ್ಲದೆ, ಜಿಲ್ಲೆಯ ಪಿಎಫ್ಐ ಅಸಾಲ್ಟ್ ತಂಡದಲ್ಲಿ ಈತ ಪ್ರಮುಖನಾಗಿದ್ದನು. ಈ ಎಲ್ಲಾ ಆರೋಪಿಗಳಿಗೆ ಶರಣಾಗತಿಯಾಗಲು ಜೂನ್ 30ರ ಡೆಡ್​ಲೈನ್ ನೀಡಲಾಗಿದೆ. ಹಾಗಾದರೆ ಆರೋಪಿಗಳ ಬಂಧನ ಅಷ್ಟೊಂದು ಜಟಿಲ ಯಾಕೆ‌? ಇಲ್ಲಿದೆ ಟಿವಿ9 ಎಕ್ಸ್​​ಕ್ಲೂಸಿವ್ ಸುದ್ದಿ.

ಅಸಲಿಗೆ ಈ ನಾಲ್ವರು ಆರೋಪಿಗಳು ಭಾರತದಲ್ಲಿ ಇರುವುದೇ ಡೌಟ್. ಕೊಲೆಯ ತನಿಖೆ ಎನ್ಐಎ ಹೆಗಲಿಗೆ ಬೀಳುತ್ತಿದ್ದಂತೆ ಮಾಸ್ಟರ್​ ಮೈಂಡ್​ಗಳು ವಿದೇಶಕ್ಕೆ ಹಾರಿರುವ ಅನುಮಾನ ವ್ಯಕ್ತವಾಗಿದೆ. ಹೌದು, ನೇಪಾಳದ ಮೂಲಕ ದುಬೈ ಸೇರಿದಂತೆ ವಿವಿಧ ಅರಬ್ ರಾಷ್ಟ್ರಗಳಲ್ಲಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ನೇಪಾಳದ ಜಾಡು ಹಿಡಿದು ಹೋಗಿದ್ದ ಎನ್​ಐಎ ತಂಡದಿಂದ ಇಬ್ಬರು ಆರೋಪಿಗಳು ಕೂದಲೆಳೆಯಲ್ಲಿ ತಪ್ಪಿಸಿಕೊಂಡಿದ್ದರು ಎಂದು ಎನ್​ಐಎ ಮೂಲಗಳಿಂದ ತಿಳಿದುಬಂದಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ