AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಎನ್​ಐಎ ದಾಳಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ ಸಂಘಟನೆಯ ಕಾರ್ಯಕರ್ತರ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಎನ್​ಐಎ ದಾಳಿ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿನ ನಿಷೇಧಿತ ಪಿಎಫ್​ಐ ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್​ಐಎ ದಾಳಿ
Shivaprasad B
| Edited By: Rakesh Nayak Manchi|

Updated on:Jun 27, 2023 | 5:52 PM

Share

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್​ಐಎ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್​ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್​​ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಎನ್​ಐಎ ಅಧಿಕಾರಿಗಳ ದಾಳಿ ಕುರಿತು ಟಿವಿ9 ಜೊತೆ ಮಾತನಾಡಿದ ಕೊಡಗು ಎಸ್​ಪಿ ರಾಮರಾಜನ್, ನಿಷೇಧಿತ ಸಂಘಟನೆ ಪಿಎಫ್​ಐನಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರನ್ನು ವಿಚಾರಣೆ ನಡೆಸಲಾಗುತ್ತಿದೆ. ಸೋಮವಾರಪೇಟೆಯಲ್ಲಿ ಹಲವು ಕಾರ್ಯಕರ್ತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಬಳ್ಳಾರಿಯಲ್ಲಿ ಸುಳ್ಳು ಗುರುತಿನಲ್ಲಿ ವಾಸಿಸುತ್ತಿದ್ದ ಪಿಎಫ್ಐ ಶಸ್ತ್ರಾಸ್ತ್ರ ತರಬೇತುದಾರನನ್ನು ಬಂಧಿಸಿದ ಎನ್‌ಐಎ

ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಅಧಿಕಾರಿಗಳ ಶೋಧ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದಲ್ಲಿರುವ ಕಾರು ಚಾಲಕ ನೌಶಾದ್ ಎಂಬಾತನ ಮನೆಗೆ ಎನ್​ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಾಳಿ ವೇಳೆ ನೌಶದ್ ಮನೆಯಲ್ಲಿರಲಿಲ್ಲ,  ಆದರೆ ಲಭ್ಯವಾದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ‌ 26 ರಂದು ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯು ಇಡೀ ರಾಜ್ಯವೇ ದಂಗಾಗುವಂತೆ ಹಾಗೂ ಕರ್ನಾಟಕದ ಬಿಜೆಪಿ ಸರ್ಕಾರದ ಬುಡ ಅಲುಗಾಡಿಸಿತ್ತು. ಅಷ್ಟೇ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ತಾಲೂಕು ಶಾಸಕರೂ ಆಗಿರುವ ಸಚಿವ ಎಸ್. ಅಂಗಾರ ವಿರುದ್ಧ ಕಾರ್ಯಕರ್ತರು ತೀವ್ರ ಆಕ್ರೋಶ ಹೊರಹಾಕಿದ್ದರು. ರಾಜ್ಯಾದ್ಯಂತ ಕಾರ್ಯಕರ್ತರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ಸರ್ಕಾರದ ಕಠಿಣ ಕ್ರಮದ ಹೇಳಿಕೆಯನ್ನು ಟೀಕಿಸಿದರು, ಯುವ ಮೂರ್ಚಾದ ಮುಖಂಡರು ರಾಜೀನಾಮೆಯ ಬಿಸಿ ತಟ್ಟಿಸಿದ್ದರು.

ಪ್ರಕರಣ ಸಂಬಂಧ ತನಿಖೆಯಲ್ಲಿ ರಾಜ್ಯ ಸರ್ಕಾರ ಎನ್​ಐಎಗೆ ವಹಿಸಿತ್ತು. ಬಳಿಕ ರಾಜ್ಯದ ಹಲವೆಡೆ ದಾಳಿಗಳನ್ನು ನಡೆಸಿದ್ದ ಎನ್​ಐಎ ಅಧಿಕಾರಿಗಳು, ಈ ಸಂಘಟನೆಯ ರಾಜಕೀಯ ಪಕ್ಷ ಎಸ್​ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೂ ದಾಳಿ ನಡೆಸಿ ಶೋಧ ನಡೆಸಿದ್ದರು. ಅಲ್ಲದೆ, ಈಗಾಗಲೇ ಎನ್​ಐಎ ಅಧಿಕಾರಿಗಳು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Tue, 27 June 23

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!