AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಚಲಿಸುತ್ತಿರುವ ಬಸ್​ನಿಂದ ತಳ್ಳಿದ ಪತಿ, ಗರ್ಭಿಣಿ ಸಾವು

ವ್ಯಕ್ತಿಯೊಬ್ಬ ಚಲಿಸುತ್ತಿರುವ ಬಸ್​ನಿಂದ ತಳ್ಳಿದ ಪರಿಣಾಮ, ಗರ್ಭಿಣಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ದಿಂಡಿಗಲ್​ನಲ್ಲಿ ಘಟನೆ ನಡೆದಿದ್ದು, ಪತ್ನಿಯ ಸಾವಿಗೆ ಕಾರಣನಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 19 ವರ್ಷದ ವಳರಮತಿ ವೆಂಬರಪಟ್ಟಿಯ ಪಾಂಡಿಯನ್ (24) ಎಂಬಾತನನ್ನು ಮದುವೆಯಾಗಿ ಎಂಟು ತಿಂಗಳಾಗಿತ್ತು. ದಂಪತಿ ದಿಂಡಿಗಲ್‌ನಿಂದ ಪೊನ್ನಮರಾವತಿಗೆ ಉಪನಗರದ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.

ತಮಿಳುನಾಡು: ಚಲಿಸುತ್ತಿರುವ ಬಸ್​ನಿಂದ ತಳ್ಳಿದ ಪತಿ, ಗರ್ಭಿಣಿ ಸಾವು
ಮೃತ ಗರ್ಭಿಣಿImage Credit source: India Today
ನಯನಾ ರಾಜೀವ್
|

Updated on: Jan 30, 2024 | 2:49 PM

Share

ವ್ಯಕ್ತಿಯೊಬ್ಬ ಚಲಿಸುತ್ತಿರುವ ಬಸ್​ನಿಂದ ತಳ್ಳಿದ ಪರಿಣಾಮ, ಗರ್ಭಿಣಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ದಿಂಡಿಗಲ್​ನಲ್ಲಿ ಘಟನೆ ನಡೆದಿದ್ದು, ಪತ್ನಿಯ ಸಾವಿಗೆ ಕಾರಣನಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 19 ವರ್ಷದ ವಳರಮತಿ ವೆಂಬರಪಟ್ಟಿಯ ಪಾಂಡಿಯನ್ (24) ಎಂಬಾತನನ್ನು ಮದುವೆಯಾಗಿ ಎಂಟು ತಿಂಗಳಾಗಿತ್ತು. ದಂಪತಿ ದಿಂಡಿಗಲ್‌ನಿಂದ ಪೊನ್ನಮರಾವತಿಗೆ ಉಪನಗರದ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಮದ್ಯದ ಅಮಲಿನಲ್ಲಿ ಪಾಂಡಿಯನ್ ಐದು ತಿಂಗಳ ಗರ್ಭಿಣಿಯಾಗಿದ್ದ ವಳರಮತಿಯೊಂದಿಗೆ ಜಗಳವಾಡಿದ್ದಾನೆ ಎಂದು ವರದಿಗಳು ಹೇಳಿವೆ.

ವಿಷಯಗಳು ಉಲ್ಬಣಗೊಂಡವು ಮತ್ತು ಕೋಪದ ಭರದಲ್ಲಿ, ಪಾಂಡಿಯನ್ ತನ್ನ ಹೆಂಡತಿಯನ್ನು ಕನವೈಪಟ್ಟಿ ಬಳಿ ಚಲಿಸುವ ಬಸ್‌ನಿಂದ ಹೊರಹಾಕಿದ್ದಾನೆ, ಅದು ಆಕೆಯ ಸಾವಿಗೆ ಕಾರಣವಾಯಿತು.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಳರಮತಿ ಶವವನ್ನು ಹೊರತೆಗೆದಿದ್ದಾರೆ. ನಂತರ ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಯ ಮೂಲಕ ಹೆಚ್ಚಿನ ಪರೀಕ್ಷೆಗಾಗಿ ದಿಂಡುಗಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪಾಂಡಿಯನ್​ನನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

ಪತಿಯಿಂದಲೇ ಪತ್ನಿ ಕೊಲೆ, ವಾಷಿಂಗ್​ ಮೆಷಿನ್​ನಿಂದ ಹತ್ಯೆ ಬಹಿರಂಗ ಮಹಿಳಾ ಅಧಿಕಾರಿಯನ್ನು ನಿರುದ್ಯೋಗಿ ಪತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಳಿಕ ಪತಿ ಪೊಲೀಸರ ಗಮನವನ್ನು ಬೇರೆಡೆಗೆ ಸೆಳೆದು ಸಹಜ ಸಾವು ಎಂದು ನಿರೂಪಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ದಿಂಡೋರಿ ಜಿಲ್ಲೆಯ ಶಹಪುರದಲ್ಲಿ ನಿಶಾ ನಾಪಿತ್​ ಅವರನ್ನು ಉಪವಿಭಾಗೀಯ ಮ್ಯಾಜಿಸ್ಟ್ರೇಟ್​ ಆಗಿ ಪೋಸ್ಟಿಂಗ್ ಮಾಡಲಾಗಿತ್ತು.

ಮತ್ತಷ್ಟು ಓದಿ: ಭೋಪಾಲ್​: ಪತಿಯಿಂದಲೇ ಪತ್ನಿ ಕೊಲೆ, ವಾಷಿಂಗ್​ ಮೆಷಿನ್​ನಿಂದ ಹತ್ಯೆ ಬಹಿರಂಗ

ಸರ್ವೀಸ್​ಬುಕ್, ಬ್ಯಾಂಕ್ ಖಾತೆ ಎಲ್ಲೂ ನಾಮಿನಿಯಲ್ಲಿ ತನ್ನ ಹೆಸರಿಲ್ಲ ಎಂದು ಅವರ ಪತಿ ಮನೀಶ್​ ಶರ್ಮಾ ಅಸಮಾಧಾನಗೊಂಡಿದ್ದ. ದಿಂಬಿನಿಂದ ಪತ್ನಿಯ ಉಸಿರುಗಟ್ಟಿಸಿ ಕೊಲೆ ಮಾಡಿದ್ದ, ಮೂಗಿನಿಂದ ವಿಪರೀತ ರಕ್ತಸ್ರಾವ ಆಗಿತ್ತು, ಅದನ್ನು ಒರೆಸಿದ್ದ, ಬಳಿಕ ಸಾಕ್ಷ್ಯಗಳನ್ನು ನಾಶ ಮಾಡಲು ದಿಂಬಿನ ಕವರ್ ಹಾಗೂ ಹಾಸಿಗೆ ವಸ್ತ್ರಗಳನ್ನು ವಾಶಿಂಗ್​ ಮೆಷಿನ್​ಗೆ ಹಾಕಿದ್ದ.

ಈ ವಾಷಿಂಗ್ ಮೆಷಿನ್​ ಇಂದಲೇ ಪೊಲೀಸರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿಂಬಿನ ಕವರ್ ಹಾಗೂ ಬೆಡ್​ಶೀಟ್​ ಇದೀಗ ಪೊಲೀಸರ ಕೈಗೆ ಸಿಕ್ಕಿದೆ. ನಾಪಿತ್ ಸಹೋದರಿ ನೀಲಿಮಾ ಅವರು ಶರ್ಮಾ ಅವರೇ ತನ್ನ ಸಹೋದರಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆತ ನಿತ್ಯ ಆಕೆಗೆ ಹಣಕ್ಕಾಗಿ ಪೀಡಿಸುತ್ತಿದ್ದ, ಕಿರುಕುಳ ನೀಡುತ್ತಿದ್ದ, ನನ್ನ ತಂಗಿಗೆ ಯಾವುದೇ ಕಾಯಿಲೆಗಳಿರಲಿಲ್ಲ, ಮನೀಶ್​ ಏನೋ ತಪ್ಪು ಮಾಡಿದ್ದಾನೆ ಎಂದು ಹೇಳಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!