AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿಯನ್ನು ಕಳೆದುಕೊಂಡಿದ್ದ ಯುವಕ ಬಸ್​ ಕ್ಲೀನರ್ ಆಗಿದ್ದ, ಆದ್ರೆ, ಲವ್​ನಲ್ಲಿ ಬಿದ್ದು ದುರಂತ ಅಂತ್ಯ ಕಂಡ

ತಂದೆ-ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ಯುವಕನೊಬ್ಬ ಖಾಸಗಿ ಬಸ್ ಕ್ಲೀನರ್ ಆಗಿದ್ದ. ಆದ್ರೆ,​ ಲವ್​ನಲ್ಲಿ ಬಿದ್ದು ಇದೀಗ ದುರಂತ ಕಂಡಿದ್ದಾನೆ.

ತಂದೆ-ತಾಯಿಯನ್ನು ಕಳೆದುಕೊಂಡಿದ್ದ ಯುವಕ ಬಸ್​ ಕ್ಲೀನರ್ ಆಗಿದ್ದ, ಆದ್ರೆ, ಲವ್​ನಲ್ಲಿ ಬಿದ್ದು ದುರಂತ ಅಂತ್ಯ ಕಂಡ
ಆತ್ಮಹತ್ಯೆಗೆ ಶರಣಾದ ಯುವಕ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 19, 2022 | 9:45 PM

Share

ಬೆಂಗಳೂರು: ಇನ್ನೂ ಚಿಗುರು ಮೀಸೆ ಯುವಕ ಮನೆಯಲ್ಲಿ ಅಪ್ಪ ಅಮ್ಮ ಚಿಕ್ಕವರಿದ್ದಾಗಲೇ ತೀರಿಕೊಂಡಿದ್ರು. ಇನ್ನು ಮೂವರು ಅಕ್ಕಂದಿರು ಇದ್ದರು. ತಾನು ಬಸ್ ಕ್ಲೀನರ್ ಕೆಲಸ ಮಾಡಿಕೊಂಡು ತಿಂಗಳಿಗೊಮ್ಮೆ ಮನೆಗೆ ಬಂದು ಹೋಗ್ತಿದ್ದ. ಹೀಗಿರುವಾಗ, ಮನೆಗೆ ಬಂದಾತ ಮನೆಯಲ್ಲಿ ಯಾರು ಇಲ್ಲದ ವೇಳೆ ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾನೆ.

19 ವರ್ಷದ ದೀಪಕ್ ಅಂತ ಮೂಲತಃ ಮೈಸೂರಿನವನಾಗಿದ್ದು, ಈತನಿಗೆ ಮೂವರು ಅಕ್ಕಂದಿರು ಇದ್ದಾರೆ. ಚಿಕ್ಕವನಿದ್ದಾಗಲೇ ತಂದೆ – ತಾಯಿ ಅಕಾಲಿಕ ನಿಧನರಾಗಿದ್ದಾರೆ. ಇನ್ನು ಅಕ್ಕಂದಿರ ಮದುವೆಯಾಗಿದ್ದು, ಹಿರಿಯ ಅಕ್ಕ ಬೆಂಗಳೂರು ಉತ್ತರ ತಾಲೂಕಿನ ಹ್ಯಾರೋಕ್ಯಾತನಹಳ್ಳಿಯಲ್ಲಿ ವಾಸವಿದ್ದು, ಅವರ ಹತ್ತಿರವೇ ಇದ್ದ ದೀಪಕ್ ಖಾಸಗಿ ಬಸ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ, ತಿಂಗಳಿಗೊಮ್ಮೆ ಮನೆಗೆ ಬಂದು ಹೋಗಿ ಮಾಡ್ತಿದ್ದ ಈತ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.

ಪತ್ನಿ ಕತ್ತು ಸೀಳಿದ್ದು ಅದೊಂದು ವಿಷಯಕ್ಕೆ: ಪೊಲೀಸರೆದುರು ಅಸಲಿ ಸತ್ಯ ಬಾಯ್ಬಿಟ್ಟ ಪತಿ

ಕೆಲಸ ಮಾಡಬೇಕಾದರೆ ಒಂದು ಹುಡುಗಿನ ಲವ್ ಮಾಡೋಕೆ ಶುರು ಮಾಡಿದ್ನಂತೆ. ಅದೇನಾಯ್ತೋ ಗೊತ್ತಿಲ್ಲ. ಹುಡುಗಿ ಲವ್ ತಿರಸ್ಕಾರ ಮಾಡಿದ್ಳೋ ಅಥವಾ ಲವ್ ಬ್ರೇಕ್ ಅಪ್ ಆಯ್ತೋ ಗೊತ್ತಿಲ್ಲ. ಯಾರಿಗೂ ಹೇಳದೇ ಕೇಳದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮನನ್ನು ಕಳೆದುಕೊಂಡ ಅಕ್ಕಂದಿರ ಆಕ್ರಂಧನ ಮುಗಿಲು ಮುಟ್ಟಿದ್ದು, ತನಿಖೆ ಮಾಡುವಂತೆ ಆಗ್ರಹಿಸಿದ್ದಾರೆ.

ಇನ್ನೂ ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಒಟ್ಟಿನಲ್ಲಿ ಮೀಸೆ ಚಿಗುರುವ ವಯಸ್ಸಿನಲ್ಲಿ ಬದುಕಿ ಬಾಳಿ ಮನೆಗೆ ಬೆಳಕಾಗಬೇಕಾಗಿದ್ದ ಹುಡುಗ ಹೀಗೆ ಲವ್ ಮಾಡಿ ಮನನೊಂದು ನೇಣಿಗೆ ಶರಣಾಗಿರುವುದು ನಿಜಕ್ಕೂ ದುರಾದೃಷ್ಟಕರ.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!