AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿಯನ್ನು ಕಳೆದುಕೊಂಡಿದ್ದ ಯುವಕ ಬಸ್​ ಕ್ಲೀನರ್ ಆಗಿದ್ದ, ಆದ್ರೆ, ಲವ್​ನಲ್ಲಿ ಬಿದ್ದು ದುರಂತ ಅಂತ್ಯ ಕಂಡ

ತಂದೆ-ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ಯುವಕನೊಬ್ಬ ಖಾಸಗಿ ಬಸ್ ಕ್ಲೀನರ್ ಆಗಿದ್ದ. ಆದ್ರೆ,​ ಲವ್​ನಲ್ಲಿ ಬಿದ್ದು ಇದೀಗ ದುರಂತ ಕಂಡಿದ್ದಾನೆ.

ತಂದೆ-ತಾಯಿಯನ್ನು ಕಳೆದುಕೊಂಡಿದ್ದ ಯುವಕ ಬಸ್​ ಕ್ಲೀನರ್ ಆಗಿದ್ದ, ಆದ್ರೆ, ಲವ್​ನಲ್ಲಿ ಬಿದ್ದು ದುರಂತ ಅಂತ್ಯ ಕಂಡ
ಆತ್ಮಹತ್ಯೆಗೆ ಶರಣಾದ ಯುವಕ
TV9 Web
| Edited By: |

Updated on: Oct 19, 2022 | 9:45 PM

Share

ಬೆಂಗಳೂರು: ಇನ್ನೂ ಚಿಗುರು ಮೀಸೆ ಯುವಕ ಮನೆಯಲ್ಲಿ ಅಪ್ಪ ಅಮ್ಮ ಚಿಕ್ಕವರಿದ್ದಾಗಲೇ ತೀರಿಕೊಂಡಿದ್ರು. ಇನ್ನು ಮೂವರು ಅಕ್ಕಂದಿರು ಇದ್ದರು. ತಾನು ಬಸ್ ಕ್ಲೀನರ್ ಕೆಲಸ ಮಾಡಿಕೊಂಡು ತಿಂಗಳಿಗೊಮ್ಮೆ ಮನೆಗೆ ಬಂದು ಹೋಗ್ತಿದ್ದ. ಹೀಗಿರುವಾಗ, ಮನೆಗೆ ಬಂದಾತ ಮನೆಯಲ್ಲಿ ಯಾರು ಇಲ್ಲದ ವೇಳೆ ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾನೆ.

19 ವರ್ಷದ ದೀಪಕ್ ಅಂತ ಮೂಲತಃ ಮೈಸೂರಿನವನಾಗಿದ್ದು, ಈತನಿಗೆ ಮೂವರು ಅಕ್ಕಂದಿರು ಇದ್ದಾರೆ. ಚಿಕ್ಕವನಿದ್ದಾಗಲೇ ತಂದೆ – ತಾಯಿ ಅಕಾಲಿಕ ನಿಧನರಾಗಿದ್ದಾರೆ. ಇನ್ನು ಅಕ್ಕಂದಿರ ಮದುವೆಯಾಗಿದ್ದು, ಹಿರಿಯ ಅಕ್ಕ ಬೆಂಗಳೂರು ಉತ್ತರ ತಾಲೂಕಿನ ಹ್ಯಾರೋಕ್ಯಾತನಹಳ್ಳಿಯಲ್ಲಿ ವಾಸವಿದ್ದು, ಅವರ ಹತ್ತಿರವೇ ಇದ್ದ ದೀಪಕ್ ಖಾಸಗಿ ಬಸ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ, ತಿಂಗಳಿಗೊಮ್ಮೆ ಮನೆಗೆ ಬಂದು ಹೋಗಿ ಮಾಡ್ತಿದ್ದ ಈತ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.

ಪತ್ನಿ ಕತ್ತು ಸೀಳಿದ್ದು ಅದೊಂದು ವಿಷಯಕ್ಕೆ: ಪೊಲೀಸರೆದುರು ಅಸಲಿ ಸತ್ಯ ಬಾಯ್ಬಿಟ್ಟ ಪತಿ

ಕೆಲಸ ಮಾಡಬೇಕಾದರೆ ಒಂದು ಹುಡುಗಿನ ಲವ್ ಮಾಡೋಕೆ ಶುರು ಮಾಡಿದ್ನಂತೆ. ಅದೇನಾಯ್ತೋ ಗೊತ್ತಿಲ್ಲ. ಹುಡುಗಿ ಲವ್ ತಿರಸ್ಕಾರ ಮಾಡಿದ್ಳೋ ಅಥವಾ ಲವ್ ಬ್ರೇಕ್ ಅಪ್ ಆಯ್ತೋ ಗೊತ್ತಿಲ್ಲ. ಯಾರಿಗೂ ಹೇಳದೇ ಕೇಳದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮನನ್ನು ಕಳೆದುಕೊಂಡ ಅಕ್ಕಂದಿರ ಆಕ್ರಂಧನ ಮುಗಿಲು ಮುಟ್ಟಿದ್ದು, ತನಿಖೆ ಮಾಡುವಂತೆ ಆಗ್ರಹಿಸಿದ್ದಾರೆ.

ಇನ್ನೂ ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಒಟ್ಟಿನಲ್ಲಿ ಮೀಸೆ ಚಿಗುರುವ ವಯಸ್ಸಿನಲ್ಲಿ ಬದುಕಿ ಬಾಳಿ ಮನೆಗೆ ಬೆಳಕಾಗಬೇಕಾಗಿದ್ದ ಹುಡುಗ ಹೀಗೆ ಲವ್ ಮಾಡಿ ಮನನೊಂದು ನೇಣಿಗೆ ಶರಣಾಗಿರುವುದು ನಿಜಕ್ಕೂ ದುರಾದೃಷ್ಟಕರ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​