AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ: ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ; ಓರ್ವ ವ್ಯಕ್ತಿಯ ಕಾಲು ಮುರಿತ

ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದವರ ವಿರುದ್ದ ಕೇಸ್ ದಾಖಲು ಮಾಡಲಾಗಿದೆ. ಹೊಸಪೇಟೆಯಲ್ಲಿ ಸಿಂಗಲ್ ಬ್ಯಾರಲ್ ಗನ್ ಹಿಡಿದು ಮೆರವಣಿಗೆ ಮಾಡಿದ ಹಿನ್ನಲೆ, ವರ್ಷತೊಡಕು ಅಂಗವಾಗಿ ಭೇಟಿಯಾಡಿ ಸಂಭ್ರಮಿಸುವ ವೇಳೆ ಬಂದೂಕು ಬಳಕೆ ಮಾಡಲಾಗಿದೆ.

ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ: ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ; ಓರ್ವ ವ್ಯಕ್ತಿಯ ಕಾಲು ಮುರಿತ
ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 04, 2022 | 8:47 AM

Share

ತುಮಕೂರು: ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ (Accident) ಹೊಡೆದಿರುವಂತಹ ಘಟನೆ ನಡೆದಿದೆ. ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಬೆಳಗಿನ ಜಾವ 3.50 ಕ್ಕೆ ಸುಮಾರಿಗೆ ಘಟನೆ ಸಂಭವಿಸಿದೆ. ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವ ಪ್ರಯಾಣಿಕನ ಕಾಲು ಮುರಿದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. Ka 51 AF 3434 ನಂಬರ್ ನ ಖಾಸಗಿ ಬಸ್ ಸೊರಬದಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಗಾಳಿಯಲ್ಲಿ ಗುಂಡು ಹಾರಿಸಿದವರ ವಿರುದ್ಧ ಕೇಸ್​ ದಾಖಲು:

ವಿಜಯನಗರ: ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದವರ ವಿರುದ್ದ ಕೇಸ್ ದಾಖಲು ಮಾಡಲಾಗಿದೆ. ಹೊಸಪೇಟೆಯಲ್ಲಿ ಸಿಂಗಲ್ ಬ್ಯಾರಲ್ ಗನ್ ಹಿಡಿದು ಮೆರವಣಿಗೆ ಮಾಡಿದ ಹಿನ್ನಲೆ, ವರ್ಷತೊಡಕು ಅಂಗವಾಗಿ ಭೇಟಿಯಾಡಿ ಸಂಭ್ರಮಿಸುವ ವೇಳೆ ಬಂದೂಕು ಬಳಕೆ ಮಾಡಲಾಗಿದೆ. ಸಾಂಪ್ರದಾಯಿಕವಾಗಿ ಬೇಟೆಯಾಡಿ ಸಂಭ್ರಮಿಸುವ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿದಕ್ಕೆ ಇಬ್ಬರ ವಿರುದ್ಧ ದೂರು ದಾಖಲು ಮಾಡಲಾಗಿದೆ. ಹೊಸಪೇಟೆ ನಿವಾಸಿ ಕೆ, ಹನುಮಂತ ಹಾಗೂ ಕಿಚಡಿ ಯಮನೂರಪ್ಪ ವಿರುದ್ಧ ಕೇಸ್ ದಾಖಲಾಗಿದ್ದು, ಹೊಸಪೇಟೆ ಪಟ್ಟಣ ಪೊಲೀಸ ಠಾಣೆಯಲ್ಲಿ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಡಾಟ ಎಂಟ್ರಿ ಆಪರೇಟರ್ ಹಾಗೂ ಇಂಜಿನಿಯರ್​ಗೆ ಗ್ರಾಪಂ ಸದಸ್ಯನಿಂದ ಅವಾಜ್:

ತುಮಕೂರು: ಗ್ರಾಮ ಪಂಚಾಯತ್​ಗೆ ಬಂದರೇ ನಾಯಿಗೆ ಹೊಡೆದಂಗೆ ಹೊಡಿತಿನಿ ಎಂದು ಗ್ರಾಪಂ‌ ಸದಸ್ಯನಿಂದ ಗ್ರಾಪಂ ಡಾಟ ಎಂಟ್ರಿ ಆಪರೇಟರ್ ನಾಗರಾಜು ಹಾಗೂ ಇಂಜಿನಿಯರ್ ಗಿರಿರಾಜು ಗ್ರಾಪಂ ಸದಸ್ಯ ಅವಾಜ್ ಹಾಕಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಅವಾಜ್ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ವೈರಲ್ ಆಗಿದೆ. ಗ್ರಾಪಂ ಸದಸ್ಯ ಐಸಿ ಮಹೇಶ್ ಎಂಬಾತ ನರೇಗಾ ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸಿದ್ದರು. ಯೋಜನೆಯ ಬಿಲ್ ಸರಿಯಾಗಿ ಮಾಡಿಲ್ಲ ಎಂಬ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಗ್ರಾಪಂ ಗೆ ಬರದಂತೆ ಧಮ್ಕಿ ಆರೋಪ ಮಾಡಲಾಗಿದೆ. ನರೇಗಾ ಯೋಜನೆಯಲ್ಲಿ ಒಕ್ಕಣೆ ಕಣ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿ ಕಳೆಪೆಯಿಂದ ಕೂಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಎಂದು ಗ್ರಾಮದ ಗಂಗಾಧರ ಇಂಜಿನಿಯರಿಂಗ್ ದೂರು ನೀಡಿದ್ದರು. ಪರಿಶೀಲನೆ ವೇಳೆ ಗ್ರಾಪಂ ಸದಸ್ಯ ಮಹೇಶ್ ನಾನು ಗ್ರಾಪಂ ಸದಸ್ಯ ಕಾಮಗಾರಿ ಪರಿಶೀಲನೆ ಮಾಡುವ ಅಗತ್ಯವಿಲ್ಲ. ನಾನು ಹೇಳಿದಂತೆ ಬಿಲ್ ಮಾಡಿ ಎಂದು ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ಜೊತೆಗೆ ಪೋನ್ ಮೂಲಕವೂ ಪುಲ್ ಅವಾಜ್ ಹಾಕಲಾಗಿದೆ. ಈ ಬಗ್ಗೆ ಆಡಿಯೋ ಕೂಡ ವೈರಲ್ ಆಗಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದನೆ ಎಂದು ದೂರು ನೀಡಲಾಗಿದ್ದು, ಡಾಟ ಎಂಟ್ರಿ ಹಾಗೂ ನರೇಗಾ ಇಂಜಿನಿಯರ್​ನಿಂದ ಕುಣಿಗಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಸೋಲಾರ್ ಪ್ಲ್ಯಾಂಟ್ ಬಳಿ ಚಿರತೆಗಳು ಪ್ರತ್ಯಕ್ಷ:

ಮೈಸೂರು: ಸೋಲಾರ್ ಪ್ಲ್ಯಾಂಟ್ ಬಳಿ ಚಿರತೆಗಳು ಪ್ರತ್ಯಕ್ಷವಾಗಿವೆ. ಪಿರಿಯಾಪಟ್ಟಣ ತಾಲ್ಲೂಕು ದೊಡ್ಡ ಬೇಲಾಳು ಗ್ರಾಮದ ಬಳಿಯ ಅದಾನಿ ಗ್ರೀನ್ ಎನರ್ಜಿ ಸೋಲಾರ್ ಪವರ್ ಪ್ಲಾಂಟ್ ಆವರಣದಲ್ಲಿ ಬೆಳಿಗಿನ ಜಾವ 5 ಗಂಟೆಯ ಸಮಯದಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿವೆ. ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಭದ್ರತಾ ಸಿಬ್ಬಂದಿ, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಸೋಲಾರ್ ಪ್ಲಾಂಟ್ ಒಳಗಡೆ ಯಾರು ಓಡಾಡದಂತೆ ಸೂಚನೆ ನೀಡಲಾಗಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದೆ.

ಇದನ್ನೂ ಓದಿ:

Viral: ವಿಶ್ವದ ಅತ್ಯಂತ ದುಬಾರಿ ಶಾಲೆ ಬಗ್ಗೆ ಗೊತ್ತಾ; ಫೀಸ್​ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ..!

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?