AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಸಹೋದರಿ ಪ್ರಿಯಾಂಕಾ ಆಳ್ವಾಗೆ CCB ಬುಲಾವ್

ಬೆಂಗಳೂರು: ಆದಿತ್ಯ ಆಳ್ವಾ ಸಹೋದರಿ ಪ್ರಿಯಾಂಕಾ ಆಳ್ವಾ ಒಬೆರಾಯ್​ಗೆ CCB ನೋಟಿಸ್ ಜಾರಿಮಾಡಿದೆ. ಬೆಳಗ್ಗೆ ತಮ್ಮ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು ಇಂದು ಪ್ರಿಯಾಂಕಾ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ನಿನ್ನೆ ಮುಂಬೈನ ಜುಹೂನಲ್ಲಿರುವ ಬಾಲಿವುಡ್​ ನಟ ವಿವೇಕ್​ ಒಬೆರಾಯ್​ ನಿವಾಸಕ್ಕೆ ತೆರಳಿದ್ದ ಸಿಸಿಬಿ ಅಧಿಕಾರಿಗಳಿಗೆ ನಟ ಹಾಗೂ ಅವರ ಪತ್ನಿ ಪ್ರಿಯಾಂಕಾ ಆಳ್ವಾ ತನಿಖೆಗೆ ಸಮರ್ಪಕವಾಗಿ ಸಹಕರಿಸಿರಲಿಲ್ಲವಂತೆ. ಮೊದಲು ಮನೆಗೆ ಹೋದಾಗ ಸಿಸಿಬಿ ಪೊಲೀಸರನ್ನು ಒಳಗೆ ಬಿಡಲ್ಲಾ ಎಂದು ದಂಪತಿ ಹೇಳಿದ್ದರು. ನಂತರ ಸಿಸಿಬಿ ಅಧಿಕಾರಿಗಳು […]

ಆದಿತ್ಯ ಸಹೋದರಿ ಪ್ರಿಯಾಂಕಾ ಆಳ್ವಾಗೆ CCB ಬುಲಾವ್
KUSHAL V
| Edited By: |

Updated on:Oct 16, 2020 | 12:37 PM

Share

ಬೆಂಗಳೂರು: ಆದಿತ್ಯ ಆಳ್ವಾ ಸಹೋದರಿ ಪ್ರಿಯಾಂಕಾ ಆಳ್ವಾ ಒಬೆರಾಯ್​ಗೆ CCB ನೋಟಿಸ್ ಜಾರಿಮಾಡಿದೆ. ಬೆಳಗ್ಗೆ ತಮ್ಮ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು ಇಂದು ಪ್ರಿಯಾಂಕಾ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ನಿನ್ನೆ ಮುಂಬೈನ ಜುಹೂನಲ್ಲಿರುವ ಬಾಲಿವುಡ್​ ನಟ ವಿವೇಕ್​ ಒಬೆರಾಯ್​ ನಿವಾಸಕ್ಕೆ ತೆರಳಿದ್ದ ಸಿಸಿಬಿ ಅಧಿಕಾರಿಗಳಿಗೆ ನಟ ಹಾಗೂ ಅವರ ಪತ್ನಿ ಪ್ರಿಯಾಂಕಾ ಆಳ್ವಾ ತನಿಖೆಗೆ ಸಮರ್ಪಕವಾಗಿ ಸಹಕರಿಸಿರಲಿಲ್ಲವಂತೆ. ಮೊದಲು ಮನೆಗೆ ಹೋದಾಗ ಸಿಸಿಬಿ ಪೊಲೀಸರನ್ನು ಒಳಗೆ ಬಿಡಲ್ಲಾ ಎಂದು ದಂಪತಿ ಹೇಳಿದ್ದರು. ನಂತರ ಸಿಸಿಬಿ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಯ ನೆರವು ಪಡೆಯಲು ಮುಂದಾಗಿದ್ದರು.

ಜುಹೂ ಪೊಲೀಸರನ್ನು ಕರೆದುಕೊಂಡು ಬಂದು ಸರ್ಚ್ ಮಾಡಲು ಮುಂದಾಗಿದ್ದರು. ಮೊದಲು ವಿವೇಕ್ ತಂದೆ ನಟ ಸುರೇಶ್ ಒಬೆರಾಯ್ ನಿವಾಸಕ್ಕೆ ತೆರಳಿದ್ದ ಸಿಸಿಬಿ ಅಧಿಕಾರಿಗಳಿಗೆ ಅಲ್ಲಿ ಸಂಪೂರ್ಣ ಸಹಕಾರ ಸಿಗದೆ ಹಿನ್ನೆಲೆಯಲ್ಲಿ ಬಳಿಕ ವಿವೇಕ್ ಒಬೆರಾಯ್ ನಿವಾಸಕ್ಕೆ ಹೋಗಿದ್ದರು. ಅದರೆ, ವಿವೇಕ್ ಒಬೆರಾಯ್ ಮನೆಯಲ್ಲಿ ಸಿಸಿಬಿ ಪೊಲೀಸರ ತನಿಖೆಗೆ ಸಹಕಾರ ದೊರೆತಿಲ್ಲ.

ಜೊತೆಗೆ, ವಿವೇಕ್ ಒಬೆರಾಯ್ ನಿವಾಸದಲ್ಲಿ ಪೊಲೀಸರಿಗೆ ಸರಿಯಾಗಿ ಸರ್ಚ್ ಮಾಡಲು ಸಹ ದಂಪತಿ ಬಿಡಲಿಲ್ಲವಂತೆ. ಮನೆಯ ವಸ್ತುಗಳ ಪರಿಶೀಲನೆ ಮಾಡಲು ಮುಂದಾದರೆ ಒಬೆರಾಯ್ ಕುಟುಂಬ ಕಿರಿಕ್ ಮಾಡುತಿದ್ದ ರಂತೆ. ಕೊನೆಗೆ ಮನೆಯನ್ನೆಲ್ಲ ಸರ್ಚ್ ಮಾಡಿ ಬರಿಗೈಯಲ್ಲಿ ಬಂದ ಸಿಸಿಬಿ ಅಧಿಕಾರಿಗಳು ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವಾ ಒಬೆರಾಯ್​ಗೆ ಇದೀಗ ನೋಟಿಸ್ ಜಾರಿಮಾಡಿದ್ದಾರೆ.

WhatsApp ಮೂಲಕ ನೋಟಿಸ್ ನೀಡಿ ಬಳಿಕ ಫೋನ್ ಮಾಡಿ ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತನಿಖಾಧಿಕಾರಿಯಾದ ಇನ್​ಸ್ಪೆಕ್ಟರ್​ ಪುನೀತ್ ಮತ್ತು ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್​ರಿಂದ ಇಂದು ಪ್ರಿಯಾಂಕಾ ವಿಚಾರಣೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ.

Published On - 11:18 am, Fri, 16 October 20

Follow Us
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ