AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಸಹೋದರಿ ಪ್ರಿಯಾಂಕಾ ಆಳ್ವಾಗೆ CCB ಬುಲಾವ್

ಬೆಂಗಳೂರು: ಆದಿತ್ಯ ಆಳ್ವಾ ಸಹೋದರಿ ಪ್ರಿಯಾಂಕಾ ಆಳ್ವಾ ಒಬೆರಾಯ್​ಗೆ CCB ನೋಟಿಸ್ ಜಾರಿಮಾಡಿದೆ. ಬೆಳಗ್ಗೆ ತಮ್ಮ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು ಇಂದು ಪ್ರಿಯಾಂಕಾ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ನಿನ್ನೆ ಮುಂಬೈನ ಜುಹೂನಲ್ಲಿರುವ ಬಾಲಿವುಡ್​ ನಟ ವಿವೇಕ್​ ಒಬೆರಾಯ್​ ನಿವಾಸಕ್ಕೆ ತೆರಳಿದ್ದ ಸಿಸಿಬಿ ಅಧಿಕಾರಿಗಳಿಗೆ ನಟ ಹಾಗೂ ಅವರ ಪತ್ನಿ ಪ್ರಿಯಾಂಕಾ ಆಳ್ವಾ ತನಿಖೆಗೆ ಸಮರ್ಪಕವಾಗಿ ಸಹಕರಿಸಿರಲಿಲ್ಲವಂತೆ. ಮೊದಲು ಮನೆಗೆ ಹೋದಾಗ ಸಿಸಿಬಿ ಪೊಲೀಸರನ್ನು ಒಳಗೆ ಬಿಡಲ್ಲಾ ಎಂದು ದಂಪತಿ ಹೇಳಿದ್ದರು. ನಂತರ ಸಿಸಿಬಿ ಅಧಿಕಾರಿಗಳು […]

ಆದಿತ್ಯ ಸಹೋದರಿ ಪ್ರಿಯಾಂಕಾ ಆಳ್ವಾಗೆ CCB ಬುಲಾವ್
KUSHAL V
| Edited By: ಸಾಧು ಶ್ರೀನಾಥ್​|

Updated on:Oct 16, 2020 | 12:37 PM

Share

ಬೆಂಗಳೂರು: ಆದಿತ್ಯ ಆಳ್ವಾ ಸಹೋದರಿ ಪ್ರಿಯಾಂಕಾ ಆಳ್ವಾ ಒಬೆರಾಯ್​ಗೆ CCB ನೋಟಿಸ್ ಜಾರಿಮಾಡಿದೆ. ಬೆಳಗ್ಗೆ ತಮ್ಮ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು ಇಂದು ಪ್ರಿಯಾಂಕಾ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ನಿನ್ನೆ ಮುಂಬೈನ ಜುಹೂನಲ್ಲಿರುವ ಬಾಲಿವುಡ್​ ನಟ ವಿವೇಕ್​ ಒಬೆರಾಯ್​ ನಿವಾಸಕ್ಕೆ ತೆರಳಿದ್ದ ಸಿಸಿಬಿ ಅಧಿಕಾರಿಗಳಿಗೆ ನಟ ಹಾಗೂ ಅವರ ಪತ್ನಿ ಪ್ರಿಯಾಂಕಾ ಆಳ್ವಾ ತನಿಖೆಗೆ ಸಮರ್ಪಕವಾಗಿ ಸಹಕರಿಸಿರಲಿಲ್ಲವಂತೆ. ಮೊದಲು ಮನೆಗೆ ಹೋದಾಗ ಸಿಸಿಬಿ ಪೊಲೀಸರನ್ನು ಒಳಗೆ ಬಿಡಲ್ಲಾ ಎಂದು ದಂಪತಿ ಹೇಳಿದ್ದರು. ನಂತರ ಸಿಸಿಬಿ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಯ ನೆರವು ಪಡೆಯಲು ಮುಂದಾಗಿದ್ದರು.

ಜುಹೂ ಪೊಲೀಸರನ್ನು ಕರೆದುಕೊಂಡು ಬಂದು ಸರ್ಚ್ ಮಾಡಲು ಮುಂದಾಗಿದ್ದರು. ಮೊದಲು ವಿವೇಕ್ ತಂದೆ ನಟ ಸುರೇಶ್ ಒಬೆರಾಯ್ ನಿವಾಸಕ್ಕೆ ತೆರಳಿದ್ದ ಸಿಸಿಬಿ ಅಧಿಕಾರಿಗಳಿಗೆ ಅಲ್ಲಿ ಸಂಪೂರ್ಣ ಸಹಕಾರ ಸಿಗದೆ ಹಿನ್ನೆಲೆಯಲ್ಲಿ ಬಳಿಕ ವಿವೇಕ್ ಒಬೆರಾಯ್ ನಿವಾಸಕ್ಕೆ ಹೋಗಿದ್ದರು. ಅದರೆ, ವಿವೇಕ್ ಒಬೆರಾಯ್ ಮನೆಯಲ್ಲಿ ಸಿಸಿಬಿ ಪೊಲೀಸರ ತನಿಖೆಗೆ ಸಹಕಾರ ದೊರೆತಿಲ್ಲ.

ಜೊತೆಗೆ, ವಿವೇಕ್ ಒಬೆರಾಯ್ ನಿವಾಸದಲ್ಲಿ ಪೊಲೀಸರಿಗೆ ಸರಿಯಾಗಿ ಸರ್ಚ್ ಮಾಡಲು ಸಹ ದಂಪತಿ ಬಿಡಲಿಲ್ಲವಂತೆ. ಮನೆಯ ವಸ್ತುಗಳ ಪರಿಶೀಲನೆ ಮಾಡಲು ಮುಂದಾದರೆ ಒಬೆರಾಯ್ ಕುಟುಂಬ ಕಿರಿಕ್ ಮಾಡುತಿದ್ದ ರಂತೆ. ಕೊನೆಗೆ ಮನೆಯನ್ನೆಲ್ಲ ಸರ್ಚ್ ಮಾಡಿ ಬರಿಗೈಯಲ್ಲಿ ಬಂದ ಸಿಸಿಬಿ ಅಧಿಕಾರಿಗಳು ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವಾ ಒಬೆರಾಯ್​ಗೆ ಇದೀಗ ನೋಟಿಸ್ ಜಾರಿಮಾಡಿದ್ದಾರೆ.

WhatsApp ಮೂಲಕ ನೋಟಿಸ್ ನೀಡಿ ಬಳಿಕ ಫೋನ್ ಮಾಡಿ ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತನಿಖಾಧಿಕಾರಿಯಾದ ಇನ್​ಸ್ಪೆಕ್ಟರ್​ ಪುನೀತ್ ಮತ್ತು ಇನ್​ಸ್ಪೆಕ್ಟರ್​ ಅಂಜುಮಾಲಾ ನಾಯಕ್​ರಿಂದ ಇಂದು ಪ್ರಿಯಾಂಕಾ ವಿಚಾರಣೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ.

Published On - 11:18 am, Fri, 16 October 20

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು