ಕೌಟುಂಬಿಕ ಕಲಹ ಶಂಕೆ: ಮನೆಯಲ್ಲೇ PSI ನೇಣಿಗೆ ಶರಣು!

ಬೀದರ್: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರೊಬೆಷನರಿ ಎಸ್​ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣದ ಮಹದೇವ್ ನಗರದಲ್ಲಿ ನಡೆದಿದೆ. ರೇಖಾ ಕಿರಣ್ ಕುಮಾರ್ ಕೋರೆ (26) ಆತ್ಮಹತ್ಯೆಗೆ ಶರಣಾದ ಎಸ್​ಐ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ನಿವಾಸಿಯಾಗಿರುವ ರೇಖಾ ಕಿರಣ್ ಅವರು 8 ವರ್ಷದ ಹಿಂದೆ ಮದುವೆಯಾಗಿದ್ದರು. ರೇಖಾಗೆ ಇಬ್ಬರು ಮಕ್ಕಳು ಸಹ ಇದ್ದರು. ಕಳೆದ 8 ತಿಂಗಳಿನಿಂದ ಬಸವಕಲ್ಯಾಣದಲ್ಲಿ ಪಿಎಸ್​ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ […]

ಕೌಟುಂಬಿಕ ಕಲಹ ಶಂಕೆ: ಮನೆಯಲ್ಲೇ PSI ನೇಣಿಗೆ ಶರಣು!
ಸಾಧು ಶ್ರೀನಾಥ್​

Updated on: Feb 23, 2020 | 3:30 PM

ಬೀದರ್: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರೊಬೆಷನರಿ ಎಸ್​ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣದ ಮಹದೇವ್ ನಗರದಲ್ಲಿ ನಡೆದಿದೆ. ರೇಖಾ ಕಿರಣ್ ಕುಮಾರ್ ಕೋರೆ (26) ಆತ್ಮಹತ್ಯೆಗೆ ಶರಣಾದ ಎಸ್​ಐ.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ನಿವಾಸಿಯಾಗಿರುವ ರೇಖಾ ಕಿರಣ್ ಅವರು 8 ವರ್ಷದ ಹಿಂದೆ ಮದುವೆಯಾಗಿದ್ದರು. ರೇಖಾಗೆ ಇಬ್ಬರು ಮಕ್ಕಳು ಸಹ ಇದ್ದರು. ಕಳೆದ 8 ತಿಂಗಳಿನಿಂದ ಬಸವಕಲ್ಯಾಣದಲ್ಲಿ ಪಿಎಸ್​ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us