AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಎಡಿಜಿಪಿ ಅಮ್ರಿತ್ ಪಾಲ್​ಗೆ 5 ಕೋಟಿ, ಅವ್ಯವಹಾರದ ಮಹತ್ವದ ಮಾಹಿತಿ ಸಿಐಡಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ

545 ಪಿಎಸ್ಐ ಅಕ್ರಮ ಪರೀಕ್ಷಾ ನೇಮಕಾತಿಯಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಸಿಐಡಿ ದಾಖಲಿಸಿದ್ದ ಚಾರ್ಜ್​ಶೀಟ್ ಪ್ರತಿ ಟಿವಿ9ಗೆ ಲಭ್ಯವಾಗಿದೆ. ಪಿಎಸ್ಐ ಅಕ್ರಮ ಪರೀಕ್ಷಾ ಒಳ ಸಂಚಿನ ಹಣದ ವರ್ಗಾವಣೆ, ಸಂಗ್ರಹದ ಕುರಿತು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

PSI Recruitment Scam: ಎಡಿಜಿಪಿ ಅಮ್ರಿತ್ ಪಾಲ್​ಗೆ 5 ಕೋಟಿ, ಅವ್ಯವಹಾರದ ಮಹತ್ವದ ಮಾಹಿತಿ ಸಿಐಡಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ
ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on: Aug 23, 2022 | 11:42 AM

Share

ಬೆಂಗಳೂರು: 545 ಪಿಎಸ್ಐ ನೇಮಕಾತಿಯಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಅಕ್ರಮದಲ್ಲಿ ಹತ್ತಾರು ಆರೋಪಿಗಳು ಸಿಲುಕಿ ಬಂಧನದಲ್ಲಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿವ ಸಿಐಡಿ, ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದೆ. ಇದರ ಪ್ರತಿ ಟಿವಿ9ಗೆ ಲಭ್ಯವಾಗಿದ್ದು, ಪಿಎಸ್ಐ ಅಕ್ರಮ ಪರೀಕ್ಷಾ ಒಳ ಸಂಚಿನ ಹಣದ ವರ್ಗಾವಣೆ, ಸಂಗ್ರಹದ ಕುರಿತು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮದಲ್ಲಿ ಭಾಗಿಯಾಗಿರುವ ಎಡಿಜಿಪಿ ಅಮ್ರಿತ್ ಪಾಲ್ ಕೃತ್ಯದಲ್ಲಿ ಭಾಗಿಯಾಗಿರುವ ನೇಮಕಾತಿ ವಿಭಾಗದ ಸಿಬ್ಬಂದಿಗಳ ಕರ್ತವ್ಯ ಹಂಚಿಕೆ ಮಾಡಿದ್ದಾರೆ. ಅದರಂತೆ ಡಿವೈಎಸ್​ಪಿ ಶಾಂತಕುಮಾರ್, ಪಿಎ ಡಿ.ಸಿ.ಶೀನಿವಾಸ್, ಎಹೆಎಚ್​ಸಿ ಶ್ರೀಧರ್, ಎಫ್​ಡಿಎ ಹರ್ಷಾಗೆ ಮೌಖಿಕವಾಗಿ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ. ಆ ಮೂಲಕ ಅಪರಾಧಿಕ ಒಳ ಸಂಚು ರೂಪಿಸಿ ಅನರ್ಹ ಅಭ್ಯರ್ಥಿಗಳನ್ನ ಅರ್ಹರನ್ನಾಗಿಸಿ ನೇಮಿಸಲು ಯತ್ನಿಸಲಾಗಿದೆ. ಹಣದಾಸೆಗೆ ಅಕ್ರಮ ಕೂಟ ರಚಿಸಿಕೊಂಡು ಕುಕೃತ್ಯ ಎಸಗಿರುವ ಆರೋಪಿಗಳು, ಕೆಲವು ಪ್ರಶ್ನೆಗಳಿಗೆ ಮಾತ್ರ ಉತ್ತರಿಸಿ, ಉಳಿದಂತೆ ಉತ್ತರ ಪತ್ರಿಕೆಯಲ್ಲಿ ಖಾಲಿ ಬಿಡುವಂತೆ ಅಭ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ.

ಅಭ್ಯರ್ಥಿಗಳಿಂದ ತಲಾ 30 ಲಕ್ಷ ಹಣ ಸಂಗ್ರಹ

ಪಿಎಸ್ಐ ಅಕ್ರಮ ನೇಮಕಾತಿ ಹಣ ಸಂಗ್ರಹದ ಹೊಣೆಯನ್ನು ಡಿವೈಎಸ್​ಪಿ ಶಾಂತಕುಮಾರ್ ಹೊತ್ತಿದ್ದರು. ಇವರು ನೇಮಕಾತಿ ವಿಭಾಗದಲ್ಲಿ 12 ವರ್ಷಗಳ ಕಾಲ ಅನುಭವ ಹೊಂದಿದ್ದಾರೆ. 545 ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ ಆರೋಪಿ ಎಡಿಜಿಪಿ ಅಮ್ರಿತ್ ಪಾಲ್ 5 ಕೋಟಿ ಹಣ ನೀಡಿ ಉಳಿದ ಹಣವನ್ನು ಹಂಚಿಕೊಳ್ಳಲು ಸೂಚಿಸಿದ್ದಾಗಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳೊಂದಿಗೆ ಡೀಲ್ ಕುದುರಿಸಿ ಕರೆತರುವ ಕೆಲಸವನ್ನು ಎಫ್​ಡಿಎ ಹರ್ಷಾ ಅವರು ಮಾಡುತ್ತಿದ್ದರು.

ಅಭ್ಯರ್ಥಿಗಳು ಮತ್ತು ಮಧ್ಯವರ್ತಿಗಳಿಂದ ಸಂಗ್ರಹಿಸಿದ್ದ ಹಣವನ್ನು 2021 ರ ಅಕ್ಟೋಬರ್ 1 ರಂದು ಎಫ್​ಡಿಎ ಹರ್ಷ ಅವರಿಂದ ಡಿವೈಎಸ್​ಪಿ ಶಾಂತಕುಮಾರ್​​ಗೆ ವರ್ಗಾವಣೆ ಮಾಡಲಾಗಿದೆ. ಹಡ್ಸನ್ ಸರ್ಕಲ್​ನ ಕೃಷಿ ಭವನ ಬಳಿ 1 ಕೋಟಿ 35 ಲಕ್ಷ ನೀಡಿದ್ದಾಗಿ ಸ್ವ ಇಚ್ಚಾ ಹೇಳಿಕೆಯನ್ನು ಕೂಡ ದಾಖಲಿಸಲಾಗಿದೆ. ಅದೇ ದಿನ ಎಡಿಜಿಪಿ ಅಮ್ರಿತ್ ಪಾಲ್​ಗೂ ಹಣ ವರ್ಗಾವಣೆಯಾಗಿದ್ದು, ಸಿಐಡಿ ಕಚೇರಿ ಸಮೀಪದ ಕೋಡಿ‌ಮುನೇಶ್ವರ ದೇವಾಲಯ ಬಳಿ ಹಣ ವರ್ಗಾವಣೆ ಮಾಡಲಾಗಿದೆ. ಅಕ್ಟೋಬರ್ 1ರ ಮಧ್ಯಹ್ನ 3.30ಕ್ಕೆ ಕಾರು ನಿಲ್ಲಿಸಿ ಶಾಂತಕುಮಾರ್​ ಅವರಿಂದ ಅಮ್ರಿತ್ ಪಾಲ್ ಅವರು ಹಣ ಪಡೆದಿದ್ದಾರೆ.

ಸಾಕ್ಷಿ ಸಿಗದಂತೆ ಮಾಡಿದ್ದ ಆರೋಪಿಗಳ ತಂಡ

ಅಕ್ರಮ ಪರೀಕ್ಷಾ ನೇಮಕಾತಿ ಕುಕೃತ್ಯ ಸಾಕ್ಷಿ ಸಿಗದಂತೆ ಮಾಡಲು ಆರೋಪಿಗಳ ತಂಡ ಪಕ್ಕಾ ಯೋಜನೆಯನ್ನು ರೂಪಿಸಿದ್ದರು. ಅಭ್ಯರ್ಥಿಗಳು ಪರೀಕ್ಷೆ ವೇಳೆ ಬಳಸಿದ್ದ ಪೆನ್​ಗಳನ್ನೇ ಓಎಂಆರ್ ತಿದ್ದಲು ಪಡೆದುಕೊಂಡಿದ್ದಾರೆ. ಪ್ಯಾಲೇಸ್ ರಸ್ತೆಯ ಕಾರಗಲ್ ಟನ್ ಭವನದ ಸಿಐಡಿ ಕಚೇರಿ ಆವರಣದ ಸೆಲ್ಲರ್​ನಲ್ಲಿ 2021 ರ ಅಕ್ಟೋಬರ್ 7 ಮತ್ತು 8 ಮತ್ತು 16 ರಂದು ಸ್ಟ್ರಾಂಗ್ ರೂಂನಲ್ಲಿನ ಓಎಂಆರ್​ ಶೀಟ್​ಗಳನ್ನು ಭರ್ತಿ ಮಾಡಲಾಗಿದೆ. ಕಚೇರಿ ಸಿಬ್ದಂದಿ ಬರುವ ಮುನ್ನ ಅಂದರೆ ಬೆಳಗ್ಗೆ 6:30 ರಿಂದ 9:30 ರ ವೇಳೆಗೆ ಕುಕೃತ್ಯ ನಡೆಸಿದ್ದಾರೆ. ಸಾಕ್ಷ್ಯ ನಾಶಪಡಿಸಲು ಕುಕೃತ್ಯ ಎಸಗಿದ ದಿನಗಳ ಸಿಸಿ ಕ್ಯಾಮಾರ ಸ್ವಿಚ್ ಆಫ್ ಮಾಡಿದ್ದಾರೆ. ಈ ಬಗ್ಗೆ ಎಎಚ್​ಸಿ ಶ್ರೀಧರ್ ನೀಡಿದ ಹೇಳಿಕೆಯನ್ನು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ