AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ; ಬಾಯ್ ಫ್ರೆಂಡ್ ಟಾರ್ಚರ್​ಗೆ ಬೇಸತ್ತು ಸಾವೀಗೀಡಾದಳಾ ಯುವತಿ?

ಮನೆಗೆ ಅವಳೊಬ್ಬಳೆ ಏಕೈಕ ಮುದ್ದಿನ ಮಗಳು. ಕಾಲೇಜ್​ನಲ್ಲಿ ಎಲ್ಲರಿಗಿಂತಲೂ ಓದಿನಲ್ಲಿ ಮುಂದಿದ್ದಳು. ಆದರೆ, ಅವಳ ಬಾಯ್ ಫ್ರೆಂಡ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಾವಿಗೆ ಕಾರಣವಾದ ಆ ಯುವಕನಿಗೆ ಶಿಕ್ಷೆಯಾಗಬೇಕು ನಮಗೆ ನ್ಯಾಯ ಕೊಡಿಸಿ ಎಂದು ಪಾಲಕರು ಮನವಿ ಮಾಡುತ್ತಿದ್ದಾರೆ.

ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ; ಬಾಯ್ ಫ್ರೆಂಡ್ ಟಾರ್ಚರ್​ಗೆ ಬೇಸತ್ತು ಸಾವೀಗೀಡಾದಳಾ ಯುವತಿ?
ಮೃತ ಮಗಳ ತಾಯಿ
ಸುರೇಶ ನಾಯಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 19, 2023 | 5:00 PM

Share

ಬೀದರ್​, ಸೆ.19: ಬಾಯ್ ಫ್ರೆಂಡ್ ಟಾರ್ಚರ್​ಗೆ ಬೆಸತ್ತು ಪಿಯುಸಿ (PUC) ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ವಾರದ ಬಳಿಕ ವಿಚಾರ ಬೆಳೆಕಿಗೆ ಬಂದಿದೆ. ಈ ಕುರಿತಾಗಿ ಆತ್ಮಹತ್ಯೆಗೆ ಪ್ರಚೋಧನೆ ಕೊಟ್ಟ ಯುವಕನ ಮೇಲೆ ದೂರು ಕೊಡಲು ಹೋದರೆ, ಪೊಲೀಸರು ದೂರು ತೆಗೆದುಕೊಳ್ಳುತ್ತಿಲ್ಲವಂತೆ. ಹೌದು, 2023 ಅಗಷ್ಟ್ 17 ರಂದು ಬೀದರ್ ಜಿಲ್ಲೆಯ ಚಿಟಗುಪ್ಪಾ ಬೆಮಳಖೇಡ ಗ್ರಾಮದ ತನ್ನ ಮನೆಯಲ್ಲಿಯೇ ಪ್ರಿಯಾಂಕಾ(17) ಆತ್ಮಹತ್ಯೆಗೆ ಶರನಾಗಿದ್ದಳು.

 ಬಾಯ್​ ಫ್ರೆಂಡ್ ಬೆದರಿಕೆಗೆ ಆತ್ಮಹತ್ಯೆ ಆರೋಪ​

ಹೀಗೆ ತನ್ನ ಮಗಳ ಪೋಟೋ ಹಿಡಿದುಕೊಂಡು ಅಳುತ್ತಾ ಕುಳಿತಿರುವ ಈ ತಾಯಿಯ ಹೆಸರು ಗಂಗಮ್ಮ, ತನ್ನ ಮಗಳ ಸಾವಿನ ನ್ಯಾಯಕ್ಕಾಗಿ ಎಸ್ಪಿ ಕಛೇರಿಗೆ ಓಡಾಡುತ್ತಿದ್ದಾಳೆ. ಇನ್ನು ತನ್ನ ಮಗಳ ಸಾವಿಗೆ ಇದೆ ಗ್ರಾಮದ ಅಂಬ್ರೇಷ್ ಎಂಬಾತ ಕಾರಣವಂತೆ. ಹೌದು, ಕಳೆದೊಂದು ವರ್ಷದಿಂದ ಇವರಿಬ್ಬರು ಪ್ರೀತಿಸುತ್ತಿದ್ದರು, ಅದೇ ಪ್ರೀತಿಯ ಸಲುಗೆಯಿಂದ ಇಬ್ಬರು ಪೋಟೋ ತೆಗೆಸಿಕೊಂಡಿದ್ದಾರೆ. ಕೆಲವು ವಿಡಿಯೋಗಳನ್ನು ಕೂಡ ಆ ಯುವಕ ಮಾಡಿಕೊಂಡು ತನ್ನ ಮೊಬೈಲ್​ನಲ್ಲಿ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಸೋಶಿಯಲ್ ಮೀಡಿಯಾ ಸ್ಟಾರ್​ನಿಂದ ವಂಚನೆ; ಸಹೋದರಿಯ ಆತ್ಮಹತ್ಯೆಗೆ ನ್ಯಾಯ ಕೊಡಿಸುವಂತೆ ಗೃಹ ಸಚಿವರಿಗೆ ಪತ್ರ

ನಂತರ ಪ್ರೀಯಾಂಕಾಳಿಗೆ ಹಣ ಕೊಂಡುವಂತೆ ಹೆದರಿಸಲು ಶುರುಮಾಡಿದ್ದಾನೆ. ಹಣ ಕೊಡದೆ ಹೋದರೆ, ನಾನು ನೀನು ಮಾತನಾಡಿರುವ ಆಡಿಯೋ, ವಿಡಿಯೋ ಹಾಗೂ ಪೋಟೋಗಳನ್ನು ವಾಟ್ಸಪ್, ಪೇಸ್​ ಬುಕ್​ನಲ್ಲಿ ಅಫ್ ಲೋಡ್ ಮಾಡಿ ನಿನ್ನ ಮಾನ ಕಳೆಯುವೆ ಎಂದು ಹೆದರಿಸಲು ಶುರು ಮಾಡಿದ್ದಾನೆ. ಅವನ ಕಿರುಕುಳಕ್ಕೆ ಹೆದರಿ ಸರಿ ಸುಮಾರು 30 ಸಾವಿರದ ವರೆಗೆ ಹಣವನ್ನು ಪೋನ್ ಪೇ ಮಾಡಿದ್ದಾಳೆ. ಕೇಳಿದಾಗೊಮ್ಮ ಹಣ ಕೊಡಲು ಶುರುಮಾಡಿದ ಪ್ರಿಯಾಂಕಾಗೆ ಹಣ ಕೊಡುತ್ತಾಳೆಂದು ತಿಳಿದ ಅಂಬ್ರೇಷ್ ಪದೇ ಪದೇ ಹಣ ಕೊಡುವಂತೆ ಪೀಡಿಸಲು ಶುರುಮಾಡಿದ್ದಾನೆ.

ಇದಕ್ಕೆ ಬೇಸತ್ತು ಹಣ ಕೊಡಲಾಗದೇ ಹೋದರೆ, ಎಲ್ಲಿ ನಾನು ಅವನ ಜೊತೆಗೆ ಮಾತನಾಡಿದ ಆಡಿಯೋ ಹಾಗೂ ಜೊತೆಗೆ ಇದ್ದ ಪೋಟೋವನ್ನು ಫೇಸ್​ಬುಕ್​ಗೆ ಅಪ್​ಲೋಡ್ ಮಾಡುತ್ತಾನೊ ಎಂದು ತಿಳಿದು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನ ಮಗಳಿಗೆ ನ್ಯಾಯ ಬೇಕು, ನ್ಯಾಯಕೊಡಿಸಿ ಎಂದು ತಾಯಿ ಗಂಗಮ್ಮ ಪೊಲೀಸರಿಗೆ ಮನವಿ ಮಾಡುತ್ತಿದ್ದಾಳೆ.

ಆತ್ಮಹತ್ಯೆ ಮಾಡಿಕೊಂಡಿರುವ ಪ್ರಿಯಾಂಕಾ ಏಕೈಕ ಪುತ್ರಿಯಾಗಿದ್ದು, ಮನೆಯಲ್ಲಿ ಚನ್ನಾಗಿಯೇ ಬೆಳೆಸಿದ್ದರು. ಆದರೆ, ಇದೆ ಊರಿನ ಅಂಬ್ರೇಷ್ ಅನ್ನೋ ಯುವಕ ತಂಗಿ ಎನ್ನುತ್ತಲೇ ಪ್ರೀಯಾಂಕಾ ಜೊತೆಗೆ ಮಾತನಾಡುತ್ತಿದ್ದ. ಆದರೆ, ಪೋನ್​ನಲ್ಲಿ ಮಾತ್ರ ಇಬ್ಬರು ಪ್ರೇಮಿಗಳ ಹಾಗೇ ಮಾತನಾಡುತ್ತಿದ್ದರು. ಇದ್ಯಾವ ವಿಚಾರವೂ ಕೂಡ ಮನೆಯವರಿಗೆ ಗೊತ್ತಾಗಿರಲಿಲ್ಲ. ಆದರೆ, ಅಂಬ್ರೇಷ್ ಮಾತ್ರ ಈಕೆಯ ಜೊತೆಗೆ ಇರುವ ಪೋಟೋ ಹಾಗೂ ಆಡಿಯೋವನ್ನ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಶುರುಮಾಡಿದ್ದ. ಇದರಿಂದ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ:ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ; ರೈತರ ಆತ್ಮಹತ್ಯೆಗಳ ಬಗ್ಗೆ ಸರ್ಕಾರದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಕೇಸ್​ ದಾಖಲಿಸಿದ ಪೊಲೀಸರು

ಆತ್ಮಹತ್ಯೆ ಮಾಡಿಕೊಂಡು ವಾರದ ಬಳಿಕೆ ಆಕೆಯ ಪೋನ್ ಚೇಕ್ ಮಾಡಿದಾಗ ಪ್ರಿಯಾಂಕಾ ಅಂಬ್ರೇಷಗೆ ಹಣ ಹಾಕಿರುವ ಮಾಹಿತಿ ಸಿಕ್ಕಿದೆ. ಜೊತೆಗೆ ಕೆಲವು ಪೋಟೋಗಳು ಕೂಡ ಸಿಕ್ಕಿದ್ದು, ಇನ್ನೂ ಆತನ ಜೊತೆಗೆ ಮಾತನಾಡಿರುವ ಆಡೀಯೋ ಕೂಡ ಸಿಕ್ಕದೆ. ಹೀಗಾಗಿ ವಾರದ ಬಳಿಕ ಮಗಳ ಸಾವಿಗೆ ಕಾರಣರಾದ ಅಂಬ್ರೇಷ್ ಮೇಲೆ ಕೇಸ್ ಕೊಡಲು ಹೋದರೆ ಪೊಲೀಸರು ಕೇಸ್ ತೆಗೆದುಕೊಳ್ಳುತ್ತಿಲ್ಲ. ಆತ್ಮಹತ್ಯೆ ಮಾಡಿಕೊಂಡ ದಿನ ನಮಗೆ ಕಂಪ್ಲೇಟ್ ಕೊಡಬಹುದಿತ್ತು. ಆದರೆ, ವಾರದ ಬಳಿಕ ನಾವು ಕಂಪ್ಲೇಟ್ ತೆಗೆದಕೊಳ್ಳುವುದಿಲ್ಲ ಎಂದು ಪೊಲೀಸರು ಹೇಳುತ್ತಿರುವುದು ಈ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.

ಒಬ್ಬ ಯುವಕನ ಹಣದ ದಾಹಕ್ಕೆ ಬದುಕಿ ಬಾಳಬೇಕಾಗಿದ್ದ ಯುವತಿಯೊಬ್ಬಳು ಸಾವೀಗೀಡಾಗಿದ್ದಾಳೆ. ಆದರೆ, ಈ ಕುಟುಂಬಕ್ಕೆ ನ್ಯಾಯ ಕೊಡಿಸಬೇಕಾದ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದು ಹೆಣ್ಣು ಹೆತ್ತವರ ದುಃಖ ಹೆಚ್ಚಿಸುವಂತೆ ಮಾಡಿದೆ. ಇದ್ದಕ್ಕಿದ್ದಂತೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಈ ಸಾವಿನ ಮರ್ಮವನ್ನು ಪೊಲೀಸರು ತನಿಖೆ ಮೂಲಕ ಬಯಲಿಗೆ ತರಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ