AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಟ್ರಕ್ ಓಡಿಸಿ ಫುಟ್​ಪಾತ್​ ಮೇಲೆ ಮಲಗಿದ್ದ ಮೂವರನ್ನು ಕೊಂದ ಚಾಲಕ

ಮಹಾರಾಷ್ಟ್ರದ ಪುಣೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕುಡಿದ ಅಮಲಿನಲ್ಲಿದ್ದ ಟ್ರಕ್ ಚಾಲಕ ಫುಟ್‌ಪಾತ್ ಮೇಲೆ ಮಲಗಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರ ಮೇಲೆ ಟ್ರಕ್ ಚಲಾಯಿಸಿ, ಅವರ ಸಾವಿಗೆ ಕಾರಣನಾಗಿದ್ದಾನೆ. ಮೃತರನ್ನು ವೈಭವಿ ಪವಾರ್ (1), ವೈಭವ್ ಪವಾರ್ (2) ಮತ್ತು ವಿಶಾಲ್ ಪವಾರ್ (22) ಎಂದು ಗುರುತಿಸಲಾಗಿದೆ. ಇನ್ನೂ 6 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಿದ ಮತ್ತಿನಲ್ಲಿ ಟ್ರಕ್ ಓಡಿಸಿ ಫುಟ್​ಪಾತ್​ ಮೇಲೆ ಮಲಗಿದ್ದ ಮೂವರನ್ನು ಕೊಂದ ಚಾಲಕ
pune accident
ಸುಷ್ಮಾ ಚಕ್ರೆ
|

Updated on: Dec 23, 2024 | 3:12 PM

Share

ಪುಣೆ: ಇಂದು ಮುಂಜಾನೆ ಟ್ರಕ್ ರಸ್ತೆಯಿಂದ ಫುಟ್‌ಪಾತ್‌ ಮೇಲೆ ಪಲ್ಟಿಯಾಗಿ ಬಿದ್ದು, ಅದರ ಮೇಲೆ ಮಲಗಿದ್ದ 9 ಜನರು ಟ್ರಕ್​ನಡಿ ಸಿಲುಕಿದ್ದಾರೆ. ಅವರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 6 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಚಾಲಕನನ್ನು ಗಜಾನನ ಶಂಕರ್ ತೋಟೆ (26) ಎಂದು ಗುರುತಿಸಲಾಗಿದೆ. ಆತ ಕುಡಿದು ವಾಹನ ಚಲಾಯಿಸುತ್ತಿದ್ದ. ಆತನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ವಘೋಲಿಯ ಕೇಸ್ನಂದ್ ಫಾಟಾ ಬಳಿ ಇಂದು ಮುಂಜಾನೆ 1 ಗಂಟೆಗೆ ಅಪಘಾತ ಸಂಭವಿಸಿದೆ. ಅತಿವೇಗದಲ್ಲಿ ಸಾಗುತ್ತಿದ್ದ ಡಂಪರ್ ಟ್ರಕ್ ಏಕಾಏಕಿ ರಸ್ತೆಯಿಂದ 12 ಮಂದಿ ಮಲಗಿದ್ದ ಫುಟ್‌ಪಾತ್‌ಗೆ ಪಲ್ಟಿಯಾಗಿದೆ. 9 ಮಂದಿ ಟ್ರಕ್ ಅಡಿ ಸಿಲುಕಿ ನಜ್ಜುಗುಜ್ಜಾಗಿದ್ದು, ಇತರರು ಗಾಯಗಳೊಂದಿಗೆ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ

ಸಂತ್ರಸ್ತರನ್ನು ತಕ್ಷಣವೇ ಸಾಸೂನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ವಿಶಾಲ್ ವಿನೋದ್ ಪವಾರ್ (22), ವೈಭವಿ ರಿತೇಶ್ ಪವಾರ್ (1), ಮತ್ತು ವೈಭವ್ ರಿತೇಶ್ ಪವಾರ್ (2) ಎಂದು ಗುರುತಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು