AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಟ್ರಕ್ ಓಡಿಸಿ ಫುಟ್​ಪಾತ್​ ಮೇಲೆ ಮಲಗಿದ್ದ ಮೂವರನ್ನು ಕೊಂದ ಚಾಲಕ

ಮಹಾರಾಷ್ಟ್ರದ ಪುಣೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕುಡಿದ ಅಮಲಿನಲ್ಲಿದ್ದ ಟ್ರಕ್ ಚಾಲಕ ಫುಟ್‌ಪಾತ್ ಮೇಲೆ ಮಲಗಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರ ಮೇಲೆ ಟ್ರಕ್ ಚಲಾಯಿಸಿ, ಅವರ ಸಾವಿಗೆ ಕಾರಣನಾಗಿದ್ದಾನೆ. ಮೃತರನ್ನು ವೈಭವಿ ಪವಾರ್ (1), ವೈಭವ್ ಪವಾರ್ (2) ಮತ್ತು ವಿಶಾಲ್ ಪವಾರ್ (22) ಎಂದು ಗುರುತಿಸಲಾಗಿದೆ. ಇನ್ನೂ 6 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಿದ ಮತ್ತಿನಲ್ಲಿ ಟ್ರಕ್ ಓಡಿಸಿ ಫುಟ್​ಪಾತ್​ ಮೇಲೆ ಮಲಗಿದ್ದ ಮೂವರನ್ನು ಕೊಂದ ಚಾಲಕ
pune accident
ಸುಷ್ಮಾ ಚಕ್ರೆ
|

Updated on: Dec 23, 2024 | 3:12 PM

Share

ಪುಣೆ: ಇಂದು ಮುಂಜಾನೆ ಟ್ರಕ್ ರಸ್ತೆಯಿಂದ ಫುಟ್‌ಪಾತ್‌ ಮೇಲೆ ಪಲ್ಟಿಯಾಗಿ ಬಿದ್ದು, ಅದರ ಮೇಲೆ ಮಲಗಿದ್ದ 9 ಜನರು ಟ್ರಕ್​ನಡಿ ಸಿಲುಕಿದ್ದಾರೆ. ಅವರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 6 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಚಾಲಕನನ್ನು ಗಜಾನನ ಶಂಕರ್ ತೋಟೆ (26) ಎಂದು ಗುರುತಿಸಲಾಗಿದೆ. ಆತ ಕುಡಿದು ವಾಹನ ಚಲಾಯಿಸುತ್ತಿದ್ದ. ಆತನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ವಘೋಲಿಯ ಕೇಸ್ನಂದ್ ಫಾಟಾ ಬಳಿ ಇಂದು ಮುಂಜಾನೆ 1 ಗಂಟೆಗೆ ಅಪಘಾತ ಸಂಭವಿಸಿದೆ. ಅತಿವೇಗದಲ್ಲಿ ಸಾಗುತ್ತಿದ್ದ ಡಂಪರ್ ಟ್ರಕ್ ಏಕಾಏಕಿ ರಸ್ತೆಯಿಂದ 12 ಮಂದಿ ಮಲಗಿದ್ದ ಫುಟ್‌ಪಾತ್‌ಗೆ ಪಲ್ಟಿಯಾಗಿದೆ. 9 ಮಂದಿ ಟ್ರಕ್ ಅಡಿ ಸಿಲುಕಿ ನಜ್ಜುಗುಜ್ಜಾಗಿದ್ದು, ಇತರರು ಗಾಯಗಳೊಂದಿಗೆ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ

ಸಂತ್ರಸ್ತರನ್ನು ತಕ್ಷಣವೇ ಸಾಸೂನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ವಿಶಾಲ್ ವಿನೋದ್ ಪವಾರ್ (22), ವೈಭವಿ ರಿತೇಶ್ ಪವಾರ್ (1), ಮತ್ತು ವೈಭವ್ ರಿತೇಶ್ ಪವಾರ್ (2) ಎಂದು ಗುರುತಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ