AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pune Crime: ಸಾಲ ಪಡೆದ ಹಣವನ್ನು ಹಿಂದಿರುಗಿಸದಿದ್ದಕ್ಕೆ ಪತಿ ಎದುರೇ ಪತ್ನಿಯ ಮೇಲೆ ಅತ್ಯಾಚಾರವೆಸಗಿದ ಲೇವಾದೇವಿಗಾರ

ಪುಣೆಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ, ಸಣ್ಣ ಸಾಲ ಪಡೆದು ತೀರಿಸಲಾಗದ ವ್ಯಕ್ತಿಯ ಪತ್ನಿ ಮೇಲೆ ಆತನ ಎದುರೇ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.  

Pune Crime: ಸಾಲ ಪಡೆದ ಹಣವನ್ನು ಹಿಂದಿರುಗಿಸದಿದ್ದಕ್ಕೆ ಪತಿ ಎದುರೇ ಪತ್ನಿಯ ಮೇಲೆ ಅತ್ಯಾಚಾರವೆಸಗಿದ ಲೇವಾದೇವಿಗಾರ
Image Credit source: Telegraph
ನಯನಾ ರಾಜೀವ್
|

Updated on:Jul 27, 2023 | 9:54 AM

Share

ಪುಣೆ, ಜುಲೈ 27:   ಪುಣೆಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ, ಸಣ್ಣ ಸಾಲ ಪಡೆದು ತೀರಿಸಲಾಗದ ವ್ಯಕ್ತಿಯ ಪತ್ನಿ ಮೇಲೆ ಆತನ ಎದುರೇ ಅತ್ಯಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.  ಅಷ್ಟೇ ಅಲ್ಲದೆ ಸಂಪೂರ್ಣ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಈ ಘಟನೆಯು ಪುಣೆಯ ಹಡಪ್ಸರ್ ಪ್ರದೇಶದಲ್ಲಿ ಫೆಬ್ರವರಿ 2023 ರಲ್ಲಿ ನಡೆದಿತ್ತು,ಈ ಪ್ರಕರಣದಲ್ಲಿ 34 ವರ್ಷದ ವಿವಾಹಿತ ಮಹಿಳೆ ದೂರು ದಾಖಲಿಸಿದ್ದಾರೆ. ಅದರಂತೆ ಆರೋಪಿ ಇಮ್ತಿಯಾಜ್ ಹಸಿನ್ ಶೇಖ್ (47 ವರ್ಷ) ವಿರುದ್ಧ ಹಡಪ್ಸರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.

ಈ ವೇಳೆ ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಆರೋಪಿಯು ಸಂತ್ರಸ್ತೆಯ ಪತಿಗೆ ಹಣ ನೀಡಿದ್ದ, ಅದನ್ನು ತೀರಿಸಲು ಸಾಧ್ಯವಾಗಿರಲಿಲ್ಲ. ಸಂತ್ರಸ್ತೆಯ ಪತಿಗೆ 40 ಸಾವಿರ ರೂ. ಬಡ್ಡಿ ರಹಿತ ಸಾಲವನ್ನು ನೀಡಿದ್ದರು.

ಆದ್ದರಿಂದ ಆರೋಪಿಗಳು ಫಿರ್ಯಾದಿದಾರರನ್ನು ಮತ್ತು ಆಕೆಯ ಪತಿಯನ್ನು ಹಡಪ್ಸರ್‌ನ ಮ್ಹಾದಾ ಕಾಲೋನಿಗೆ ಕರೆದು ಕೊಲೆ ಬೆದರಿಕೆ ಹಾಕಿದ್ದಾರೆ. ನಂತರ ದೂರುದಾರ ಮಹಿಳೆಯ ಗಂಡನ ಮುಂದೆ ಕುಳಿತು ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಇದರೊಂದಿಗೆ ಪತಿಯ ಎದುರೇ ಮಹಿಳೆಯನ್ನು ಅತ್ಯಾಚಾರ ಮಾಡಿದ್ದಾರೆ.

ಮತ್ತಷ್ಟು ಓದಿ: Gurugram Crime: ಡೇಟಿಂಗ್ ಆ್ಯಪ್​ನಲ್ಲಿ ಭೇಟಿ, ಹೋಟೆಲ್​ಗೆ ಕರೆಸಿಕೊಂಡು ಯುವತಿ ಮೇಲೆ ಇಬ್ಬರಿಂದ ಅತ್ಯಾಚಾರ

ಆರೋಪಿಗಳು ಇಡೀ ಘಟನೆಯ ವಿಡಿಯೋವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ, ಇದಾದ ನಂತರ ಆರೋಪಿಯು ಮತ್ತೆ ಫಿರ್ಯಾದಿದಾರ ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾನೆ. ಆದರೆ ಮಹಿಳೆ ನಿರಾಕರಿಸಿದ್ದರಿಂದ ಆರೋಪಿಗಳು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಇದಾದ ಬಳಿಕ ಮಹಿಳೆ ಹಡಪ್ಸರ್ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ದೂರನ್ನು ಸ್ವೀಕರಿಸಿದ ಹಡಪ್ಸರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಇಮ್ತಿಯಾಜ್ ಹಸಿನ್ ಶೇಖ್ ನನ್ನು ಬಂಧಿಸಿದ್ದಾರೆ. ಹಿರಿಯ ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ.

ಕಳೆದ ವರ್ಷ ಪುಣೆಯಲ್ಲಿ ಸಹಕಾರಿ ಇಲಾಖೆಯ ಅಧಿಕಾರಿಯೊಬ್ಬರು ಲೇವಾದೇವಿಗಾರರ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹಕಾರಿ ಇಲಾಖೆಯ ಅಕೌಂಟೆಂಟ್ ಆಗಿದ್ದು ಸೆಪ್ಟೆಂಬರ್ 19 ರಂದು ಮಂಗಳವಾರ್ ಪೇಠದ ಬಾಲಾಜಿ ಹೈಟ್ಸ್ ಕಟ್ಟಡದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯ ಹೆಸರು ಗಣೇಶ ಶಂಕರ ಶಿಂಧೆ (52 ವರ್ಷ). ಅವರು ಆತ್ಮಹತ್ಯೆ ಪತ್ರವನ್ನೂ ಬರೆದಿದ್ದು, ಅದರಲ್ಲಿ ಸಾಲಗಾರರು ಹಣಕ್ಕಾಗಿ ಪರದಾಡುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಮುಂಬೈನಿಂದ ಪುಣೆಗೆ ವರ್ಗಾವಣೆ ಮಾಡಲು ಅಧಿಕಾರಿಗಳಿಗೆ ಪಾವತಿಸಲು ಗಣೇಶ್ ಶಂಕರ್ ಶಿಂಧೆ ಲೇವಾದೇವಿಗಾರರಿಂದ 20 ರಿಂದ 25 ರಷ್ಟು ಬಡ್ಡಿ ದರದಲ್ಲಿ 84 ಲಕ್ಷ 50 ಸಾವಿರ ರೂಪಾಯಿ ಸಾಲ ಪಡೆದಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:51 am, Thu, 27 July 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ