AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

23ರ ಯುವತಿಗೆ 45 ವರ್ಷದ ಗಂಡು ಬೇಕಾಗಿದ್ದಾನೆ; ತನ್ನ ಆಫರ್​ ಒಪ್ಪದವಳ ಮದುವೆ ಬಗ್ಗೆ ನಕಲಿ ಜಾಹೀರಾತು ನೀಡಿ ಅವಮಾನಿಸಿದ ವಿವಾಹಿತನ ಬಂಧನ

ಆರೋಪಿಯು ವಿವಾಹಿತನಾಗಿದ್ದು, ಆದರೂ ತನ್ನೊಂದಿಗೆ ಸಂಬಂಧವಿಟ್ಟುಕೊಳ್ಳುವಂತೆ ಆತ 23 ವರ್ಷದ ಯುವತಿಯನ್ನು ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿರಲಿಲ್ಲ.

23ರ ಯುವತಿಗೆ 45 ವರ್ಷದ ಗಂಡು ಬೇಕಾಗಿದ್ದಾನೆ; ತನ್ನ ಆಫರ್​ ಒಪ್ಪದವಳ ಮದುವೆ ಬಗ್ಗೆ ನಕಲಿ ಜಾಹೀರಾತು ನೀಡಿ ಅವಮಾನಿಸಿದ ವಿವಾಹಿತನ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 30, 2022 | 6:34 PM

Share

ಪುಣೆ: 23 ವರ್ಷದ ಯುವತಿಯೊಬ್ಬಳ ಮಾನಹಾನಿ ಮಾಡುವ ಸಲುವಾಗಿ ಸಾಮಾಜಿಕ ಮಾಧ್ಯಮದಲ್ಲಿ ಆಕೆಯ ನಕಲಿ ವಿವಾಹದ ಪ್ರೊಫೈಲ್ ಪೋಸ್ಟ್ ಮಾಡಿದ್ದಾರೆ. ಈ ನಾಚಿಕೆಗೇಡಿನ ಘಟನೆ ಮಹಾರಾಷ್ಟ್ರದ ಪುಣೆ ಘೋರ್ಪಾಡಿ ಪ್ರದೇಶದಲ್ಲಿ ನಡೆದಿದೆ. 37 ವರ್ಷದ ವ್ಯಕ್ತಿಯೊಬ್ಬರು ಯುವತಿಗೆ ಅವಮಾನ ಮಾಡುವ ಸಲುವಾಗಿ ಆಕೆಯ ಮದುವೆಯ ನಕಲಿ ಪ್ರೊಫೈಲ್ ಸೃಷ್ಟಿಸಿದ್ದರು. ಈ ಪ್ರಕರಣದ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಈಗಾಗಲೇ ಆರೋಪಿಯನ್ನು ಚಂದನನಗರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಿದ ಪೊಲೀಸರು, ಆರೋಪಿಗಳು ಮತ್ತು ಯುವತಿ ಒಂದೇ ಗುಂಪಿಗೆ ಸೇರಿದವರಾಗಿರುವುದರಿಂದ ಪರಸ್ಪರ ಪರಿಚಿತರಾಗಿದ್ದರು. ಆರೋಪಿಯು ವಿವಾಹಿತನಾಗಿದ್ದು, ಆದರೂ ತನ್ನೊಂದಿಗೆ ಸಂಬಂಧವಿಟ್ಟುಕೊಳ್ಳುವಂತೆ ಆತ 23 ವರ್ಷದ ಯುವತಿಯನ್ನು ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿರಲಿಲ್ಲ. ಹೀಗಾಗಿ, ಆಕೆಗೆ ಅವಮಾನ ಮಾಡಲು ಸಾಮಾಜಿಕ ಜಾಲತಾಣದಲ್ಲಿ ಆಕೆಯ ನಕಲಿ ಪ್ರೊಫೈಲ್ ಕ್ರಿಯೇಟ್ ಮಾಡಿ ಅದರಲ್ಲಿ ಆಕೆಯ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡುತ್ತಿದ್ದ ಎಂದಿದ್ದಾರೆ.

ನಕಲಿ ಪೋಸ್ಟ್​ನಲ್ಲಿ, ಆ ಯುವತಿ ಈಗಾಗಲೇ ಮದುವೆಯಾಗಿ, ವಿಚ್ಛೇದನ ಪಡೆದಿದ್ದಾಳೆ. 45 ವರ್ಷಕ್ಕಿಂತ ಮೇಲ್ಪಟ್ಟ ವರನನ್ನು ಮತ್ತೆ ಮದುವೆಯಾಗಲು ಹುಡುಕುತ್ತಿದ್ದಾಳೆ ಎಂದು ಆತ ಬರೆದಿದ್ದ. ಆ ಯುವತಿಯ ಸಂಬಂಧಿಕರು ಮತ್ತು ಇತರರು ಆ ಪ್ರೊಫೈಲ್ ಅನ್ನು ನೋಡಿದಾಗ, ಅವರು ಆಕೆಗೆ ಫೋನ್ ಮಾಡಿ ಪ್ರಶ್ನಿಸಿದ್ದರು. ಇದರಿಂದ ಆಕೆಗೆ ಆ ನಕಲಿ ಪ್ರೊಫೈಲ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಇದೆಲ್ಲ ಆ 37 ವರ್ಷದ ವ್ಯಕ್ತಿಯ ಕೃತ್ಯ ಎಂದು ಅರ್ಥ ಮಾಡಿಕೊಂಡ ಆಕೆ ಆತನ ಬಳಿ ಹೋಗಿ ಮಾಡಿದ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳುವಂತೆ ಎಚ್ಚರಿಸಿದ್ದಾಳೆ. ಆದರೆ, ಆತ ಅದಕ್ಕೆ ಒಪ್ಪಲಿಲ್ಲ. ಹೀಗಾಗಿ, ಆತನ ವಿರುದ್ಧ ದೂರು ದಾಖಲಿಸಿದ್ದಾಳೆ.

ಇದನ್ನೂ ಓದಿ: Crime News: ತಮಿಳುನಾಡಿನಲ್ಲಿ ಐವರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಕುಡಿದ ಅಮಲಿನಲ್ಲಿ ತಾವಾಗೇ ಸಿಕ್ಕಿಬಿದ್ದ ಕಾಮುಕರು

Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್