AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಮನೆಯ ಛಾವಣಿ ಮೇಲೆ ಹತ್ತಿ ವ್ಯಕ್ತಿಯಿಂದ ಮನಬಂದಂತೆ ಗುಂಡಿನ ದಾಳಿ, ಇಬ್ಬರು ಸಾವು, ತಾನೂ ಆತ್ಮಹತ್ಯೆಗೆ ಶರಣು

ಮನೆಯ ಛಾವಣಿ ಮೇಲೆ ಹತ್ತಿ ವ್ಯಕ್ತಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಇಷ್ಟೆಲ್ಲಾ ಆದ ಬಳಿಕ ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಚಿಕ್ಕಪ್ಪ, ಚಿಕ್ಕಮ್ಮ ಕುಟುಂಬದ ಜಮೀನು ವಿಷಯವಾಗಿ ವಿವಾದ ನಡೆದಿತ್ತು.

ಪಂಜಾಬ್: ಮನೆಯ ಛಾವಣಿ ಮೇಲೆ ಹತ್ತಿ ವ್ಯಕ್ತಿಯಿಂದ ಮನಬಂದಂತೆ ಗುಂಡಿನ ದಾಳಿ, ಇಬ್ಬರು ಸಾವು, ತಾನೂ ಆತ್ಮಹತ್ಯೆಗೆ ಶರಣು
ಪೊಲೀಸ್-ಸಾಂದರ್ಭಿಕ ಚಿತ್ರImage Credit source: The Economic Times
ನಯನಾ ರಾಜೀವ್
|

Updated on: Nov 10, 2023 | 2:12 PM

Share

ಮನೆಯ ಛಾವಣಿ ಮೇಲೆ ಹತ್ತಿ ವ್ಯಕ್ತಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಇಷ್ಟೆಲ್ಲಾ ಆದ ಬಳಿಕ ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಚಿಕ್ಕಪ್ಪ, ಚಿಕ್ಕಮ್ಮ ಕುಟುಂಬದ ಜಮೀನು ವಿಷಯವಾಗಿ ವಿವಾದ ನಡೆದಿತ್ತು.

ಆರೋಪಿ ಲಾಲಾ ಸಿಂಗ್ ಪುತ್ರ ಗುರು ಶರಣ್​ ಸಿಂಗ್ ಶುಕ್ರವಾರ ಬೆಳಗ್ಗೆ 12 ಬೋರ್​ ಗನ್ ಹಿಡಿದು ಮನೆಯ ಛಾವಣಿಯ ಮೇಲೆ ಹೋಗಿ ಮನಬಂದಂತೆ ಗುಂಡು ಹಾರಿಸಲು ಆರಂಭಿಸಿದ್ದ. ಯಾರ್ಯಾರು ಅವನ ಕಣ್ಣೆದುರಿಗೆ ಕಾಣಿಸುತ್ತಾರೋ ಅವರೆಲ್ಲರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಕಾಕಾ ಸಿಂಗ್ ಅವರ ಮಗ ಗುರುಶಾಂತ್ ಸಿಂಗ್ ಮತ್ತು ನಾರಾಯಣ ಸಿಂಗ್ ಅವರ ಮಗ ಭೋಲಾ ಸಿಂಗ್ ಗುಂಡು ತಗುಲಿ ಸಾವನ್ನಪ್ಪಿದ್ದಾರೆ.

ಜೈಲ್ ಸಿಂಗ್ ಅವರ ಪುತ್ರ ಕುಲದೀಪ್ ಸಿಂಗ್ ಗಾಯಗೊಂಡಿದ್ದಾರೆ. ಇದಾದ ಬಳಿಕ ಆರೋಪಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜನರ ಪ್ರಕಾರ, ಗ್ರಾಮದಲ್ಲಿ 35 ಸುತ್ತಿನ ಗುಂಡಿನ ದಾಳಿ ನಡೆದಿದೆ . ಆರೋಪಿಯ ಕುಟುಂಬದಲ್ಲಿ ಜಮೀನು ವಿವಾದ ನಡೆಯುತ್ತಿದೆ.

ಮತ್ತಷ್ಟು ಓದಿ: ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಗ್ಯಾಂಗ್​ಸ್ಟರ್​ನನ್ನು ಹೊಡೆದು ಕೊಂದ ವೈದ್ಯರು

ಗುಂಡಿನ ದಾಳಿಯಿಂದ ಗ್ರಾಮದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿತ್ತು. ಜನರು ತಮ್ಮ ಮನೆಗಳಲ್ಲಿ ಅಡಗಿಕೊಂಡರು. ಯಾರೂ ಮನೆಯಿಂದ ಹೊರಗೆ ಬರಲಿಲ್ಲ. ತಡೆಯಲು ಮುಂದಾದವರ ಮೇಲೆ ಆರೋಪಿ ಗುಂಡು ಹಾರಿಸಿದ್ದಾನೆ. ಇದರಿಂದಾಗಿ ಇತರ ಜನರು ಓಡಿ ಹೋಗಿದ್ದಾರೆ, ಸಿಐಎ ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿವೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?