AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab Crime: 4 ಕೋಟಿ ರೂ. ಇನ್ಶೂರೆನ್ಸ್​ ಪಡೆಯಲು ಸ್ನೇಹಿತನನ್ನು ಕೊಂದು ತಾನೇ ಸತ್ತಿದ್ದೇನೆಂದು ಬಿಂಬಿಸಿದ್ದ ವ್ಯಕ್ತಿಯ ಬಂಧನ

ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಉದ್ಯಮಿಯೊಬ್ಬರು ಸ್ನೇಹಿತನೊಬ್ಬನನ್ನು ಕೊಂದು ತಾನೇ ಸತ್ತಿದ್ದೇನೆಂದು ಬಿಂಬಿಸಿ 4 ಕೋಟಿ ರೂ. ಇನ್ಶೂರೆನ್ಸ್​ ಪಡೆಯಲು ಯತ್ನಿಸಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ.

Punjab Crime: 4 ಕೋಟಿ ರೂ. ಇನ್ಶೂರೆನ್ಸ್​ ಪಡೆಯಲು ಸ್ನೇಹಿತನನ್ನು ಕೊಂದು ತಾನೇ ಸತ್ತಿದ್ದೇನೆಂದು ಬಿಂಬಿಸಿದ್ದ ವ್ಯಕ್ತಿಯ ಬಂಧನ
ಜೈಲು
ನಯನಾ ರಾಜೀವ್
|

Updated on: Jun 29, 2023 | 9:44 AM

Share

ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಉದ್ಯಮಿಯೊಬ್ಬರು ಸ್ನೇಹಿತನೊಬ್ಬನನ್ನು ಕೊಂದು ತಾನೇ ಸತ್ತಿದ್ದೇನೆಂದು ಬಿಂಬಿಸಿ 4 ಕೋಟಿ ರೂ. ಇನ್ಶೂರೆನ್ಸ್​ ಪಡೆಯಲು ಯತ್ನಿಸಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ರಾಮದಾಸ್ ನಗರ ಪ್ರದೇಶದ ಗುರ್‌ಪ್ರೀತ್ ಸಿಂಗ್, ಅವರ ಪತ್ನಿ ಖುಷ್‌ದೀಪ್ ಕೌರ್ ಮತ್ತು ಇತರ ನಾಲ್ವರನ್ನು ಸುಖಜೀತ್ ಸಿಂಗ್ ಹತ್ಯೆ ಮಾಡಿರುವ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾವ್‌ಜೋತ್ ಕೌರ್ ಗ್ರೆವಾಲ್ ತಿಳಿಸಿದ್ದಾರೆ.

ಸುಖ್‌ಜೀತ್‌ನ ಪತ್ನಿ ಜೀವನ್‌ದೀಪ್ ಕೌರ್ ಅವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರ್‌ಪ್ರೀತ್ ತನ್ನ ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸಿದ್ದರು ಮತ್ತು 4 ಕೋಟಿ ಮೌಲ್ಯದ ವಿಮೆಯ ಹಣವನ್ನು ಪಡೆಯಲು ತನ್ನ ಹೆಂಡತಿ ಮತ್ತು ಇತರ ನಾಲ್ವರು ಸುಖ್ವಿಂದರ್ ಸಿಂಗ್, ಜಸ್ಪಾಲ್ ಸಿಂಗ್, ದಿನೇಶ್ ಕುಮಾರ್ ಮತ್ತು ರಾಜೇಶ್ ಕುಮಾರ್ ಜೊತೆ ಸೇರಿ ತಾನೇ ಸತ್ತಿದ್ದೇನೆನ್ನುವಂತೆ ಬಿಂಬಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಗುರ್‌ಪ್ರೀತ್ ತನ್ನ ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸಿದ್ದನು ಮತ್ತು 4 ಕೋಟಿ ಮೌಲ್ಯದ ವಿಮಾ ಹಣವನ್ನು ಪಡೆಯಲು ತನ್ನ ಹೆಂಡತಿ ಮತ್ತು ಇತರ ನಾಲ್ವರು ಸುಖ್ವಿಂದರ್ ಸಿಂಗ್ ಸಂಘ, ಜಸ್ಪಾಲ್ ಸಿಂಗ್, ದಿನೇಶ್ ಕುಮಾರ್ ಮತ್ತು ರಾಜೇಶ್ ಕುಮಾರ್ ಜೊತೆ ಸೇರಿ ತನ್ನ ಸಾವನ್ನು ನಕಲಿ ಮಾಡಲು ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೋಲಾರ: ಪ್ರೀತಿಸಿದ ಮಗಳ ಮರ್ಯಾದ ಹತ್ಯೆ; ಯುವತಿ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ಪ್ರಿಯಕರ

ಇದು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಗುರ್ ಪ್ರೀತ್ ಕುಟುಂಬದವರನ್ನು ಮತ್ತೆ ವಿಚಾರಣೆ ನಡೆಸಲಾಗಿದೆ. ಆಗ ಗುರ್‌ಪ್ರೀತ್ ಬದುಕಿರುವುದು ಪತ್ತೆಯಾಗಿದ್ದು, 4 ಕೋಟಿ ರೂಪಾಯಿ ಮೌಲ್ಯದ ವಿಮೆ ಹಣ ಪಡೆಯಲು ತನ್ನ ಪತ್ನಿ ಮತ್ತು ಇತರರೊಂದಿಗೆ ಸೇರಿ ಸಾವಿನ ನಾಟಕವಾಡಿರುವುದು ಬೆಳಕಿಗೆ ಬಂದಿದೆ.

ತನಿಖೆಯ ವೇಳೆ ಗುರುಪ್ರೀತ್‌ನ ಕುಟುಂಬವು ರಾಜ್‌ಪುರ ಪೊಲೀಸ್ ಠಾಣೆಯಲ್ಲಿ ಜೂನ್ 20 ರಂದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ದೂರು ನೀಡಿರುವುದು ಕಂಡುಬಂದಿದೆ. ಜೂನ್ 19ರಂದು ಗುರುಪ್ರೀತ್ ಸುಖಜೀತ್​ಗೆ ಹೆಚ್ಚು ಮದ್ಯಪಾನ ಮಾಡಿಸಿ, ಪ್ರಜ್ಞೆ ತಪ್ಪಿಸಿದ್ದರು.

ಗುರುಪ್ರೀತ್ ತನ್ನ ಬಟ್ಟೆ ಬದಲಿಸಿ ಆತನಿಗೆ ತೊಡಿಸಿ, ಆತನ ಮುಖದ ಮೇಲೆ ಟ್ರಕ್ ಓಡಿಸಿ ಹತ್ಯೆ ಮಾಡಿದ್ದ, ಮುಖದ ಗುರುತು ಸಿಗದಂತೆ ಮಾಡಿದ್ದ ಎನ್ನಲಾಗಿದೆ. ಗುರ್‌ಪ್ರೀತ್‌ನ ಪತ್ನಿ ಸುಖಜೀತ್‌ನ ಛಿದ್ರಗೊಂಡ ದೇಹವನ್ನು ತನ್ನ ಗಂಡನದೇ ಎಂದು ಹೇಳಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ