Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸಾರ್ವಜನಿಕರ ಸಮ್ಮುಖದಲ್ಲೇ ಯುವಕನ ಬರ್ಬರ ಹತ್ಯೆ..!

Crime News: ಈ ಭೀಕರ ಹತ್ಯೆ ಮಾಡಿದ ದಾಳಿಕೋರರಲ್ಲಿ ಮೂವರನ್ನು ಗುರುತಿಸಲಾಗಿದೆ. ಕೊಲೆಗೆ ಹಳೇ ವೈಷ್ಯಮ್ಯವೇ ಕಾರಣ ಎಂದು ಬದ್ನಿ ಕಲಾನ್ ಪೊಲೀಸ್ ಅಧಿಕಾರಿ ಪ್ರತಾಪ್ ಸಿಂಗ್ ಹೇಳಿದ್ದಾರೆ.

Video: ಸಾರ್ವಜನಿಕರ ಸಮ್ಮುಖದಲ್ಲೇ ಯುವಕನ ಬರ್ಬರ ಹತ್ಯೆ..!
punjab murder
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 06, 2022 | 4:13 PM

ಕೆಲ ದಿನಗಳ ಹಿಂದೆಯಷ್ಟೇ ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲ ಅವರ ಹತ್ಯೆಯಿಂದ ಇಡೀ ಪಂಜಾಬ್ ಬೆಚ್ಚಿ ಬಿದ್ದಿತ್ತು. ಈ ಭೀಕರ ಹತ್ಯೆಯ ಕರಾಳತೆ ಮಾಸುವ ಮುನ್ನವೇ ಇದೀಗ ಮತ್ತೊಮ್ಮೆ ಸಾರ್ವಜನಿಕ ಸ್ಥಳದಲ್ಲೇ ಯುವಕನ ಕೊಲೆ ನಡೆದಿದೆ. ಅದು ಕೂಡ ಮಾರುಕಟ್ಟೆ ಪ್ರದೇಶದಲ್ಲಿ. ಅಂದರೆ ಜನನಿಬಿಡ ಪ್ರದೇಶದಲ್ಲೇ ಎಲ್ಲರ ಮುಂದೆ ಯುವಕನನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಭೀಕರ ಘಟನೆ ನಡೆದಿರುವುದು ಪಂಜಾಬ್‌ನ ಮೋಗಾ ಜಿಲ್ಲೆಯ ಬದ್ನಿ ಕಲಾನ್ ಪ್ರದೇಶದ ಮಾರುಕಟ್ಟೆಯಲ್ಲಿ.

ಮಾರುಕಟ್ಟೆಗೆ ಎರಡು ಬೈಕ್‌ಗಳಲ್ಲಿ ಆಗಮಿಸಿದ ಈ ತಂಡ ದೇಶ್​ರಾಜ್ ಅವರನ್ನು ಹಿಂಬಾಲಿಸಿದ್ದರು. ಅಲ್ಲದೆ ಕಾಲ್ನಡಿಗೆಯಲ್ಲಿ ಮಾರುಕಟ್ಟೆಯಲ್ಲಿ ತೆರಳುತ್ತಿದ್ದ ದೇಶ್​ರಾಜ್ ತನ್ನ​ ಮೇಲೆ ಹಲ್ಲೆಯಾಗುತ್ತಿದ್ದಂತೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ. ಆದರೆ ಆರು ಜನರ ಗುಂಪು ಏಕಾಏಕಿ ದಾಳಿ ನಡೆಸಿದ್ದರಿಂದ ತಪ್ಪಿಸಿಕೊಳ್ಳಲು ಅವಕಾಶವಿರಲಿಲ್ಲ. ಇತ್ತ ಸಾರ್ವಜನಿಕರ ನಡುವೆ ದಾಳಿಯಾಗುತ್ತಿದ್ದರೂ ಯಾರೂ ಕೂಡ ಆತನ ಸಹಾಯಕ್ಕೆ ಬರಲಿಲ್ಲ.

ಇದನ್ನೂ ಓದಿ
Image
Crime Story: ಪೊಲೀಸ್ ಮಗ, ಎಲ್​ಎಲ್​ಬಿ ಪದವೀಧರ: ಯಾರು ಈ ಡಾನ್ ಲಾರೆನ್ಸ್ ಬಿಷ್ಣೋಯ್?
Image
T20 World Cup: ಟಿ20 ವಿಶ್ವಕಪ್​ನಲ್ಲಿ 20 ತಂಡಗಳ ನಡುವೆ ಸೆಣಸಾಟ..!
Image
Railway Recruitment 2022: SSLC ಪಾಸಾದವರಿಗೆ ಸುರ್ವಣಾವಕಾಶ: ರೈಲ್ವೆಯಲ್ಲಿದೆ ಉದ್ಯೋಗಾವಕಾಶ
Image
Crime Story: ಕಿಂಗ್ ಆಫ್ ಕ್ರೈಮ್: ದಾವೂದ್ ಇಬ್ರಾಹಿಂಗೆ ನಡುಕ ಹುಟ್ಟಿಸಿದ್ದ ಸ್ಲಂ ಡಾನ್

ಇದಾಗ್ಯೂ ದೇಶ್​ರಾಜ್ ಕೂಡ ಆಯುಧದೊಂದಿಗೆ ಪ್ರತಿರೋಧ ತೋರಲು ಮುಂದಾಗಿದ್ದಾರೆ. ಆದರೆ ಕತ್ತಿ ಮತ್ತು ಇತರ ಹರಿತ ಆಯುಧಗಳಿಂದ ಗುಂಪು ದಾಳಿ ನಡೆಸಿದ ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಿದ್ದಾರೆ. ಹೀಗೆ ಭೀಕರ ಹತ್ಯೆ ಮಾಡಿ 6 ಮಂದಿ ಗುಂಪು ಓಡಿಹೋಗುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ದೇಶ್​ರಾಜ್ ಹಾಗೂ ಕೆಲವರ ನಡುವೆ ಜಗಳವಾಗಿತ್ತು. ಆ ತಂಡವೇ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ದೇಶ್​ರಾಜ್‌ನನ್ನು ಕೊಂದಿದ್ದಾರೆ ಎಂದು ಕುಟುಂಬಸ್ಥರು ಹೇಳಿಕೊಂಡಿದ್ದಾರೆ. ಇನ್ನು ಕೊಲೆಗೆ ಹಳೇ ವೈಷ್ಯಮ್ಯವೇ ಕಾರಣ ಎಂದು ಬದ್ನಿ ಕಲಾನ್ ಪೊಲೀಸ್ ಅಧಿಕಾರಿ ಪ್ರತಾಪ್ ಸಿಂಗ್ ಹೇಳಿದ್ದಾರೆ.

ಅಲ್ಲದೆ ಈ ಭೀಕರ ಹತ್ಯೆ ಮಾಡಿದ ದಾಳಿಕೋರರಲ್ಲಿ ಮೂವರನ್ನು ಗುರುತಿಸಲಾಗಿದೆ. ಉಳಿದ ಎಲ್ಲಾ ಆರೋಪಿಗಳನ್ನು ಪತ್ತೆ ಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.