AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿ ನಡುವೆ ಜಗಳ; ಬಿಡಿಸಲು ಹೋದ ಮಗ ಚಾಕು ಇರಿತಕ್ಕೆ ಬಲಿ

ಇತ್ತೀಚೆಗೆ ಚಿಕ್ಕ ಚಿಕ್ಕ ವಿಚಾರಗಳಿಗೆ ಆತ್ಮಹತ್ಯೆ, ಕೊಲೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಂತೆ ಹಾಸಿಗೆ ಹಿಡಿದಿರುವ ಮೃತನ ಅಜ್ಜಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ತಂದೆ- ತಾಯಿ ನಡುವೆ ಜಗಳ ಶುರುವಾಗಿದ್ದು, ಬಿಡಿಸಲು ಹೋದ ಮಗ ಆಕಸ್ಮಿಕವಾಗಿ ಕೊಲೆಯಾದ ಘಟನೆ ಬೆಂಗಳೂರಿನ ಜರಗನಹಳ್ಳಿ (Jarganahalli) ಯಲ್ಲಿ ನಡೆದಿದೆ.

ತಂದೆ-ತಾಯಿ ನಡುವೆ ಜಗಳ; ಬಿಡಿಸಲು ಹೋದ ಮಗ ಚಾಕು ಇರಿತಕ್ಕೆ ಬಲಿ
ಮೃತ ಯುವಕ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 05, 2024 | 5:53 PM

Share

ಬೆಂಗಳೂರು, ಜೂ.05: ಹಾಸಿಗೆ ಹಿಡಿದಿರುವ ಮೃತನ ಅಜ್ಜಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ಅಪ್ಪ- ಅಮ್ಮನ ನಡುವೆ ಜಗಳ ಶುರುವಾಗಿದ್ದು, ಬಿಡಿಸಲು ಹೋದ ಮಗ ಆಕಸ್ಮಿಕವಾಗಿ ಕೊಲೆಯಾದ ಘಟನೆ ಬೆಂಗಳೂರಿನ ಜರಗನಹಳ್ಳಿ (Jarganahalli) ಯಲ್ಲಿ ಇಂದು(ಜೂ.05) ಬೆಳಿಗ್ಗೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಇತ ಇನ್ಫೋಸಿಸ್(Infosys) ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ. ಈ ಕುರಿತು ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ವಿವರ

ಉತ್ತಮ ವ್ಯಕ್ತತ್ವ ಹೊಂದಿದ್ದ ಮೃತ ಯಶವಂತ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತ, ತಂದೆ ಮಾಡಿದ್ದ ಸಾಲವನ್ನು ತೀರಿಸುತ್ತಿದ್ದ. ಹೀಗಿರುವಾಗ ಆತನ ಅಜ್ಜಿ ಹಾಸಿಗೆ ಹಿಡಿದಿದ್ದಾರೆ. ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ತಂದೆ-ತಾಯಿ ನಡುವೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದ. ಆದರೆ, ಆಕಸ್ಮಾತಾಗಿ ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ. ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಹಾಸನದಲ್ಲಿ ನಟೋರಿಯಸ್ ರೌಡಿ ಶೀಟರ್ ಭೀಕರ ಹತ್ಯೆ; ಭಯಾನಕ ಕೊಲೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ದಕ್ಷಿಣ ವಿಭಾಗ ಡಿಸಿಪಿ ಹೇಳಿದ್ದಿಷ್ಟು

ಇನ್ನು ಘಟನೆ ಕುರಿತು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಮಾತನಾಡಿ, ‘ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿ 23 ವರ್ಷದ ಯುವಕನ ಕೊಲೆಯಾಗಿದೆ. ಮೃತನ ಅಜ್ಜಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ತಂದೆ-ತಾಯಿ ನಡುವೆ ಆಗಾಗ ಗಲಾಟೆ ಆಗುತ್ತಿರುತ್ತೆ. ಇದೇ ಜಗಳ ಅತಿರೇಕಕ್ಕೆ ಹೋಗಿ ಗಂಡ- ಹೆಂಡತಿ ಹೊಡೆದಾಡಲು ಮುಂದಾಗಿದ್ದಾರೆ. ಆಗ ಮಗ ಇಬ್ಬರನ್ನು ಬಿಡಿಸಲು ಹೋಗಿದ್ದಾನೆ. ತಂದೆ ಮಗನ ಮಧ್ಯೆ ತಳ್ಳಾಟ ನುಕಾಟ ಆಗಿದೆ. ಈ ವೇಳೆ ತಂದೆ ಅಡುಗೆ ಮನೆಯಲ್ಲಿದ್ದ ಚಾಕು ತಂದು ಇರಿದಿದ್ದಾನೆ. ಆಸ್ಪತ್ರೆಗೆ ಹೋಗೋ ಮಾರ್ಗ‌ ಮಧ್ಯೆ ಯಶವಂತ್ ಸಾವನ್ನಪ್ಪಿದ್ದಾನೆ. ಮೃತ ಯುವಕ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ