ಮೊಲ ಬೇಟೆಯಾಡಿ ಟಿಕ್‌ ಟಾಕ್ ಮಾಡಿದ್ದ ಆರೋಪಿಗಳು ಅಂದರ್​​

ತುಮಕೂರು: ಕಾಡು ಮೊಲವನ್ನು ಬೇಟೆಯಾಡಿ ಟಿಕ್‌ಟಾಕ್ ಮಾಡಿ ವಿಡಿಯೋ ವೈರಲ್ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಧುಗಿರಿ ತಾಲೂಕಿನ ಕರಿದುಗ್ಗನಹಳ್ಳಿ ಗ್ರಾಮದ ವಿನಯ್, ವಿನಯ್ ಕುಮಾರ್ ಬಂಧಿತ ಆರೋಪಿಗಳು. ಮೊಲ ಬೇಟೆಯಾಡಿ ಮಾಂಸ ಕತ್ತರಿಸುವುದನ್ನು ಟಿಕ್ ಟಾಕ್ ಮಾಡಿದ್ದರು. ಈ ಟಿಕ್ ಟಾಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ತುಮಕೂರು ಉಪ ಅರಣ್ಯ ಸಂರಕ್ಷಾಣಾದಿಕಾರಿ ಹೆಚ್.ಸಿ.ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ 2(16), 9, 39, 50, […]

ಮೊಲ ಬೇಟೆಯಾಡಿ ಟಿಕ್‌ ಟಾಕ್ ಮಾಡಿದ್ದ ಆರೋಪಿಗಳು ಅಂದರ್​​
ಸಾಧು ಶ್ರೀನಾಥ್​

Updated on: May 02, 2020 | 8:17 AM

ತುಮಕೂರು: ಕಾಡು ಮೊಲವನ್ನು ಬೇಟೆಯಾಡಿ ಟಿಕ್‌ಟಾಕ್ ಮಾಡಿ ವಿಡಿಯೋ ವೈರಲ್ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಧುಗಿರಿ ತಾಲೂಕಿನ ಕರಿದುಗ್ಗನಹಳ್ಳಿ ಗ್ರಾಮದ ವಿನಯ್, ವಿನಯ್ ಕುಮಾರ್ ಬಂಧಿತ ಆರೋಪಿಗಳು.

ಮೊಲ ಬೇಟೆಯಾಡಿ ಮಾಂಸ ಕತ್ತರಿಸುವುದನ್ನು ಟಿಕ್ ಟಾಕ್ ಮಾಡಿದ್ದರು. ಈ ಟಿಕ್ ಟಾಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ತುಮಕೂರು ಉಪ ಅರಣ್ಯ ಸಂರಕ್ಷಾಣಾದಿಕಾರಿ ಹೆಚ್.ಸಿ.ಗಿರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ 2(16), 9, 39, 50, 51 ಅಡಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us