ರಾಗಿಣಿಗೆ ಇಂದೂ ಇಲ್ಲ ಜಾಮೀನು ಭಾಗ್ಯ, ಇನ್ನೂ 3 ದಿನ ಜೈಲೇ ಗತಿ

[lazy-load-videos-and-sticky-control id=”maB5IIXix9g”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದೂ ಸಹ ಜಾಮೀನು ಸಿಗಲಿಲ್ಲ. ಪ್ರಕರಣದಲ್ಲಿ ಹೊಸ ಎಸ್​ಪಿಪಿಗಳ ನೇಮಕ ಮಾಡಿರುವ ಹಿನ್ನೆಲೆಯಿಂದಾಗಿ NDPS ವಿಶೇಷ ಕೋರ್ಟ್ ಸೆ.19 ಕ್ಕೆ ವಿಚಾರಣೆ ಮುಂದೂಡಿದೆ. ಜೊತೆಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೊಸ ಅಭಿಯೋಜಕರು ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ರಾಗಿಣಿಗೆ ಸದ್ಯಕ್ಕೆ ಯಾವುದೇ ರಿಲೀಫ್ ಇಲ್ಲದಂತ್ತಾಗಿದೆ. ಇನ್ನೂ ಮೂವರ ಜಾಮೀನು ಅರ್ಜಿ ವಿಚಾರಣೆಯೂ ಮುಂದೂಡಿಕೆ.. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ […]

ರಾಗಿಣಿಗೆ ಇಂದೂ ಇಲ್ಲ ಜಾಮೀನು ಭಾಗ್ಯ, ಇನ್ನೂ 3 ದಿನ ಜೈಲೇ ಗತಿ
ಸಾಧು ಶ್ರೀನಾಥ್​

Updated on: Sep 16, 2020 | 1:17 PM

[lazy-load-videos-and-sticky-control id=”maB5IIXix9g”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದೂ ಸಹ ಜಾಮೀನು ಸಿಗಲಿಲ್ಲ.

ಪ್ರಕರಣದಲ್ಲಿ ಹೊಸ ಎಸ್​ಪಿಪಿಗಳ ನೇಮಕ ಮಾಡಿರುವ ಹಿನ್ನೆಲೆಯಿಂದಾಗಿ NDPS ವಿಶೇಷ ಕೋರ್ಟ್ ಸೆ.19 ಕ್ಕೆ ವಿಚಾರಣೆ ಮುಂದೂಡಿದೆ. ಜೊತೆಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೊಸ ಅಭಿಯೋಜಕರು ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ರಾಗಿಣಿಗೆ ಸದ್ಯಕ್ಕೆ ಯಾವುದೇ ರಿಲೀಫ್ ಇಲ್ಲದಂತ್ತಾಗಿದೆ.

ಇನ್ನೂ ಮೂವರ ಜಾಮೀನು ಅರ್ಜಿ ವಿಚಾರಣೆಯೂ ಮುಂದೂಡಿಕೆ..

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಬಂಧಿತರಾಗಿರುವ ರಾಹುಲ್ ತೋನ್ಸೆ, ವಿನಯ್ ಕುಮಾರ್, ಶಿವಪ್ರಕಾಶ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಜಾಮೀನು ಅರ್ಜಿಯ ವಿಚಾರಣೆಯನ್ನು NDPS ವಿಶೇಷ ಕೋರ್ಟ್ ಸೆಪ್ಟೆಂಬರ್ 19ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Published On - 12:03 pm, Wed, 16 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us