ಮಗಳನ್ನು ಸಂಬಂಧಿಕರ ಮನೆಯಲ್ಲಿ ಇರಿಸಿದಕ್ಕೆ ಪಾಗಲ್​ ಪ್ರೇಮಿಯ ಕಿರಿಕ್​, ಪೋಷಕರ ಮೇಲೆ ಹಲ್ಲೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್​.ಹೆಚ್​.ಕ್ಯಾಂಪ್​ 3 ಗ್ರಾಮದಲ್ಲಿ ಅಮಾನವಿಯ ಘಟನೆ ನಡೆದಿದೆ. ಪ್ರೀತಿ, ಪ್ರೇಮ ಹೆಸರಿನಲ್ಲಿ ಯುವಕನೋರ್ವ ಕಾಟ ಕೊಡುತ್ತಿರುವುದನ್ನು ತಪ್ಪಿಸಲು ಪೋಷಕರು ಮಗಳನ್ನು ಸಂಬಂಧಿಕರ ಮನೆಯಲ್ಲಿ ಇರಿಸಿದ್ದರು. ಇದರಿಂದ ಕೋಪಗೊಂಡ ಯುವಕ, ಪ್ರೇಯಸಿಯ ಪೋಷಕರ ಮೇಲೆ ಹಲ್ಲೆ ಮಾಡಿದ್ದಾರೆ.

ಮಗಳನ್ನು ಸಂಬಂಧಿಕರ ಮನೆಯಲ್ಲಿ ಇರಿಸಿದಕ್ಕೆ ಪಾಗಲ್​ ಪ್ರೇಮಿಯ ಕಿರಿಕ್​, ಪೋಷಕರ ಮೇಲೆ ಹಲ್ಲೆ
ಹಲ್ಲೆಗೊಳಗಾದ ಪೋಷಕರು, ಆರೋಪಿ ಪ್ರಣವ್​
Follow us
| Updated By: ವಿವೇಕ ಬಿರಾದಾರ

Updated on:Apr 20, 2024 | 10:21 AM

ರಾಯಚೂರು, ಏಪ್ರಿಲ್​ 20: ಪ್ರೀತಿ ವಿಚಾರಕ್ಕೆ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ (Student Neha) ಕೊಲೆ ಪ್ರಕರಣ ಮಾಸುವ ಮುನ್ನವೇ ರಾಯಚೂರಿನಲ್ಲಿ (Raichur) ಮತ್ತೊಂದು ಘಟನೆ ನಡೆದಿದೆ. ಪ್ರೀತಿ ಪ್ರೇಮದ ಹೆಸರಿನಲ್ಲಿ ತೊಂದರೆ ಕೊಡುತ್ತಿದ್ದ ಹಿನ್ನೆಲೆಯಲ್ಲಿ ಮಗಳನ್ನು ಊರು ಬಿಡಿಸಿ, ಸಂಬಂಧಿಕರ ಮನೆಯಲ್ಲಿ ಇರಿಸಿದ್ದಕ್ಕೆ ಪಾಗಲ್​ ಪ್ರೇಮಿ ಪೋಷಕರ ಮೇಲೆ ಹಲ್ಲೆ ಮಾಡಿರುವ ಘಟನೆ ಸಿಂಧನೂರು (Sindanur) ತಾಲೂಕಿನ ಆರ್​.ಹೆಚ್​.ಕ್ಯಾಂಪ್​ 3ರಲ್ಲಿ ನಡೆದಿದ್ದು, ತಡವಾಗಿ ಬೆಳೆಕಿಗೆ ಬಂದಿದೆ. ಪ್ರಣವ್​​​ ಮತ್ತು ಈತನ ಗ್ಯಾಂಗ್​ ಯುವತಿಯ ಪೋಷಕರ ಮೇಲೆ ಹಲ್ಲೆ ಮಾಡಿದೆ. ಯುವತಿ ತಂದೆ ಹೀರಾ ಮೋಹನ್ ಹಾಗೂ ತಾಯಿ ಶೃತಿ ಮಂಡಲ್, ಸೋದರ ಹೀಮಂತು, ಸಂಬಂಧಿ ಶುಬ್ರತೋ ಹಲ್ಲೆಗೊಳಗಾದವರು.

ಆರೋಪಿ ಪ್ರಣವ್ ಹಲ್ಲೆಗೊಳಗಾದ ಹೀರಾ ಮೋಹನ್ ಮಂಡಲ್​​ ಅವರ ಮಗಳಿಗೆ ಪ್ರೀತಿ ಪ್ರೇಮ ಅಂತ ತೊಂದರೆ ಕೊಡುತ್ತಿದ್ದನು. ಹೀಗಾಗಿ ಹೀರಾ ಮೋಹನ್ ಮಂಡಲ್​​ ಅವರು ಮಗಳನ್ನು ಊರು ಸಂಬಂಧಿಕರ ಮನೆಯಲ್ಲಿರಿಸಿದ್ದರು. ಈ ವಿಚಾರ ತಿಳಿದ ಆರೋಪಿ ಪ್ರಣವ್​ ಆಕೆಯನ್ನು ಯಾಕೆ ಬೇರೆಡೆ ಕಳುಹಿಸಿದ್ದೀರಿ, ಆಕೆಯನ್ನು ಊರಿಗೆ ಕರೆತನ್ನಿ ಅಂತ ಯುವತಿಯ ತಂದೆಗೆ ಕಿರುಕುಳ ನೀಡಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನ ಡಬಲ್ ಮರ್ಡರ್​ಗೆ ಬಿಗ್ ಟಿಸ್ಟ್, ಮಗಳ ಹತ್ಯೆಗೆ ಪ್ರತಿಕಾರ ತೀರಿಸಿಕೊಂಡ ತಾಯಿ!

ಬಳಿಕ ಆರೋಪಿ ಪ್ರಣವ್ ಯುವತಿ ತಂದೆ ಹೀರಾ ಮೋಹನ್ ಮಂಡಲ್​ಗೆ ಕತ್ತು ಹಿಡಿದು ನೆಲಕ್ಕೆ ಕೆಡವಿ, ದೊಡ್ಡ ಕಲ್ಲು ತೆಗೆದುಕೊಂಡು ಬಲಗಾಲಿನ ಮೇಲೆ ಹಾಕಿದ್ದಾನೆ. ಕಣ್ಣಿಗೆ ಕಲ್ಲಿನಿಂದ ಜಜ್ಜಿ ಗಾಯಗೊಳಿಸಿದ್ದಾನೆ. ಅಲ್ಲದೆ ಗ್ರಾಮದಲ್ಲಿ ಅಟ್ಟಾಡಿಸಿ ಹೊಡೆಯುತ್ತಿದ್ದನು. ಇದನ್ನು ಕಂಡ ಸಂಬಂಧಿ ಶುಬ್ರತೋ ಮಂಡಲ್​ ಬಿಡಿಸಲು ಹೋದಾಗ, ಪ್ರಣವ್​ನ ಮೂವರು ಸಹಚರರು ಶುಬ್ರತೋ ಅನ್ನು ನೆಲಕ್ಕೆ ಕೆಡವಿ ಹೊಟ್ಟೆಗೆ ಒದ್ದು, ಮುಖಕ್ಕೆ ಗುದ್ದಿ, ಜೀವ ಬೆದರಿಕೆ ಹಾಕಿದ್ದಾರೆ.

ಆರೋಪಿ ಪ್ರಣವ್​, ಯುವತಿ

ಬಳಿಕ ಆರೋಪಿಗಳು ಯುವತಿಯ ಮನೆಗೆ ಬಂದು, ಯುವತಿಯ ತಾಯಿಗೆ “ಅವಾಚ್ಯ ಶಬ್ದಗಳಿಂದ ನಿಂದಿಸಿ ನಿನ್ನ ಮಗಳನ್ನು ಊರಿಗೆ ಕರೆಸು, ಇಲ್ಲದಿದ್ದರೆ ನಿನ್ನನ್ನು ಅತ್ಯಾಚಾರ ಮಾಡುತ್ತೇವೆ” ಎಂದು ಬೈದು ಸೀರೆ ಹಿಡಿದು ಎಳೆದಾಡಿ, ಮುಖಕ್ಕೆ ಗುದ್ದಿದ್ದಾರೆ. ಬಳಿಕ ನೆಲಕ್ಕೆ ಕೆಡವಿ ಒದ್ದು ಅವಾಚ್ಯ ಶಬ್ದಗಳಿಂದ ಬೈಯ್ದು ಬಟ್ಟೆ ಹಿಡಿದು ಎಳೆದಾಡಿದ್ದಾರೆ. ಬಳಿಕ “ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಹಾಕಿದ್ದಾರೆ. ಘಟನೆಯಲ್ಲಿ ಹಲ್ಲೆಗೊಳಗಾದ ಯುವತಿಯ ತಂದೆ ಹೀರಾ ಮೋಹನ್ ಮಂಡಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂದನೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಯುವತಿಯ ತಾಯಿಯನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:21 am, Sat, 20 April 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು