AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳನ್ನು ಸಂಬಂಧಿಕರ ಮನೆಯಲ್ಲಿ ಇರಿಸಿದಕ್ಕೆ ಪಾಗಲ್​ ಪ್ರೇಮಿಯ ಕಿರಿಕ್​, ಪೋಷಕರ ಮೇಲೆ ಹಲ್ಲೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್​.ಹೆಚ್​.ಕ್ಯಾಂಪ್​ 3 ಗ್ರಾಮದಲ್ಲಿ ಅಮಾನವಿಯ ಘಟನೆ ನಡೆದಿದೆ. ಪ್ರೀತಿ, ಪ್ರೇಮ ಹೆಸರಿನಲ್ಲಿ ಯುವಕನೋರ್ವ ಕಾಟ ಕೊಡುತ್ತಿರುವುದನ್ನು ತಪ್ಪಿಸಲು ಪೋಷಕರು ಮಗಳನ್ನು ಸಂಬಂಧಿಕರ ಮನೆಯಲ್ಲಿ ಇರಿಸಿದ್ದರು. ಇದರಿಂದ ಕೋಪಗೊಂಡ ಯುವಕ, ಪ್ರೇಯಸಿಯ ಪೋಷಕರ ಮೇಲೆ ಹಲ್ಲೆ ಮಾಡಿದ್ದಾರೆ.

ಮಗಳನ್ನು ಸಂಬಂಧಿಕರ ಮನೆಯಲ್ಲಿ ಇರಿಸಿದಕ್ಕೆ ಪಾಗಲ್​ ಪ್ರೇಮಿಯ ಕಿರಿಕ್​, ಪೋಷಕರ ಮೇಲೆ ಹಲ್ಲೆ
ಹಲ್ಲೆಗೊಳಗಾದ ಪೋಷಕರು, ಆರೋಪಿ ಪ್ರಣವ್​
TV9 Web
| Edited By: |

Updated on:Apr 20, 2024 | 10:21 AM

Share

ರಾಯಚೂರು, ಏಪ್ರಿಲ್​ 20: ಪ್ರೀತಿ ವಿಚಾರಕ್ಕೆ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ (Student Neha) ಕೊಲೆ ಪ್ರಕರಣ ಮಾಸುವ ಮುನ್ನವೇ ರಾಯಚೂರಿನಲ್ಲಿ (Raichur) ಮತ್ತೊಂದು ಘಟನೆ ನಡೆದಿದೆ. ಪ್ರೀತಿ ಪ್ರೇಮದ ಹೆಸರಿನಲ್ಲಿ ತೊಂದರೆ ಕೊಡುತ್ತಿದ್ದ ಹಿನ್ನೆಲೆಯಲ್ಲಿ ಮಗಳನ್ನು ಊರು ಬಿಡಿಸಿ, ಸಂಬಂಧಿಕರ ಮನೆಯಲ್ಲಿ ಇರಿಸಿದ್ದಕ್ಕೆ ಪಾಗಲ್​ ಪ್ರೇಮಿ ಪೋಷಕರ ಮೇಲೆ ಹಲ್ಲೆ ಮಾಡಿರುವ ಘಟನೆ ಸಿಂಧನೂರು (Sindanur) ತಾಲೂಕಿನ ಆರ್​.ಹೆಚ್​.ಕ್ಯಾಂಪ್​ 3ರಲ್ಲಿ ನಡೆದಿದ್ದು, ತಡವಾಗಿ ಬೆಳೆಕಿಗೆ ಬಂದಿದೆ. ಪ್ರಣವ್​​​ ಮತ್ತು ಈತನ ಗ್ಯಾಂಗ್​ ಯುವತಿಯ ಪೋಷಕರ ಮೇಲೆ ಹಲ್ಲೆ ಮಾಡಿದೆ. ಯುವತಿ ತಂದೆ ಹೀರಾ ಮೋಹನ್ ಹಾಗೂ ತಾಯಿ ಶೃತಿ ಮಂಡಲ್, ಸೋದರ ಹೀಮಂತು, ಸಂಬಂಧಿ ಶುಬ್ರತೋ ಹಲ್ಲೆಗೊಳಗಾದವರು.

ಆರೋಪಿ ಪ್ರಣವ್ ಹಲ್ಲೆಗೊಳಗಾದ ಹೀರಾ ಮೋಹನ್ ಮಂಡಲ್​​ ಅವರ ಮಗಳಿಗೆ ಪ್ರೀತಿ ಪ್ರೇಮ ಅಂತ ತೊಂದರೆ ಕೊಡುತ್ತಿದ್ದನು. ಹೀಗಾಗಿ ಹೀರಾ ಮೋಹನ್ ಮಂಡಲ್​​ ಅವರು ಮಗಳನ್ನು ಊರು ಸಂಬಂಧಿಕರ ಮನೆಯಲ್ಲಿರಿಸಿದ್ದರು. ಈ ವಿಚಾರ ತಿಳಿದ ಆರೋಪಿ ಪ್ರಣವ್​ ಆಕೆಯನ್ನು ಯಾಕೆ ಬೇರೆಡೆ ಕಳುಹಿಸಿದ್ದೀರಿ, ಆಕೆಯನ್ನು ಊರಿಗೆ ಕರೆತನ್ನಿ ಅಂತ ಯುವತಿಯ ತಂದೆಗೆ ಕಿರುಕುಳ ನೀಡಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನ ಡಬಲ್ ಮರ್ಡರ್​ಗೆ ಬಿಗ್ ಟಿಸ್ಟ್, ಮಗಳ ಹತ್ಯೆಗೆ ಪ್ರತಿಕಾರ ತೀರಿಸಿಕೊಂಡ ತಾಯಿ!

ಬಳಿಕ ಆರೋಪಿ ಪ್ರಣವ್ ಯುವತಿ ತಂದೆ ಹೀರಾ ಮೋಹನ್ ಮಂಡಲ್​ಗೆ ಕತ್ತು ಹಿಡಿದು ನೆಲಕ್ಕೆ ಕೆಡವಿ, ದೊಡ್ಡ ಕಲ್ಲು ತೆಗೆದುಕೊಂಡು ಬಲಗಾಲಿನ ಮೇಲೆ ಹಾಕಿದ್ದಾನೆ. ಕಣ್ಣಿಗೆ ಕಲ್ಲಿನಿಂದ ಜಜ್ಜಿ ಗಾಯಗೊಳಿಸಿದ್ದಾನೆ. ಅಲ್ಲದೆ ಗ್ರಾಮದಲ್ಲಿ ಅಟ್ಟಾಡಿಸಿ ಹೊಡೆಯುತ್ತಿದ್ದನು. ಇದನ್ನು ಕಂಡ ಸಂಬಂಧಿ ಶುಬ್ರತೋ ಮಂಡಲ್​ ಬಿಡಿಸಲು ಹೋದಾಗ, ಪ್ರಣವ್​ನ ಮೂವರು ಸಹಚರರು ಶುಬ್ರತೋ ಅನ್ನು ನೆಲಕ್ಕೆ ಕೆಡವಿ ಹೊಟ್ಟೆಗೆ ಒದ್ದು, ಮುಖಕ್ಕೆ ಗುದ್ದಿ, ಜೀವ ಬೆದರಿಕೆ ಹಾಕಿದ್ದಾರೆ.

ಆರೋಪಿ ಪ್ರಣವ್​, ಯುವತಿ

ಬಳಿಕ ಆರೋಪಿಗಳು ಯುವತಿಯ ಮನೆಗೆ ಬಂದು, ಯುವತಿಯ ತಾಯಿಗೆ “ಅವಾಚ್ಯ ಶಬ್ದಗಳಿಂದ ನಿಂದಿಸಿ ನಿನ್ನ ಮಗಳನ್ನು ಊರಿಗೆ ಕರೆಸು, ಇಲ್ಲದಿದ್ದರೆ ನಿನ್ನನ್ನು ಅತ್ಯಾಚಾರ ಮಾಡುತ್ತೇವೆ” ಎಂದು ಬೈದು ಸೀರೆ ಹಿಡಿದು ಎಳೆದಾಡಿ, ಮುಖಕ್ಕೆ ಗುದ್ದಿದ್ದಾರೆ. ಬಳಿಕ ನೆಲಕ್ಕೆ ಕೆಡವಿ ಒದ್ದು ಅವಾಚ್ಯ ಶಬ್ದಗಳಿಂದ ಬೈಯ್ದು ಬಟ್ಟೆ ಹಿಡಿದು ಎಳೆದಾಡಿದ್ದಾರೆ. ಬಳಿಕ “ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಹಾಕಿದ್ದಾರೆ. ಘಟನೆಯಲ್ಲಿ ಹಲ್ಲೆಗೊಳಗಾದ ಯುವತಿಯ ತಂದೆ ಹೀರಾ ಮೋಹನ್ ಮಂಡಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂದನೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಯುವತಿಯ ತಾಯಿಯನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:21 am, Sat, 20 April 24

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ