AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧಕ್ಕೆ ಅಡ್ಡಿ; ಗಂಡನಿಗೆ ಮದ್ಯಪಾನ ಮಾಡಿಸಿ ಉಸಿರು ಗಟ್ಟಿಸಿ ಕೊಂದ ಪತ್ನಿ!

ರಾಯಚೂರು ತಾಲ್ಲೂಕಿನ ಸಿಂಗನೋಡಿ ತಾಂಡಾ ನಿವಾಸಿ, ಸಮಾಜ ಸೇವೆ ಮಾಡುತ್ತಾ ತಾಲ್ಲೂಕು ಪಂಚಾಯಿತಿ ಸದಸ್ಯನಾಗಿದ್ದ. ಬಡ ಬಗ್ಗರಿಗೆ ಹೆಗಲು ಕೊಟ್ಟು ನಿಲ್ಲುತ್ತಿದ್ದ ಆತ, ರಾತ್ರೋ ರಾತ್ರಿ ಹೆಣವಾಗಿ ಹೋಗಿದ್ದ. ಅಷ್ಟಕ್ಕೂ ಆತನ ಉಸಿರು ನಿಲ್ಲಿಸಿದ್ದು ಬೇರೆ ಯಾರೂ ಅಲ್ಲ, ಆತನ ಜೊತೆ ಸಪ್ತಪದಿ ತುಳಿದು ಸಂಸಾರ ನಡೆಸುತ್ತಿದ್ದ ಮುದ್ದಿನ ಮಡದಿ.

ಅನೈತಿಕ ಸಂಬಂಧಕ್ಕೆ ಅಡ್ಡಿ; ಗಂಡನಿಗೆ ಮದ್ಯಪಾನ ಮಾಡಿಸಿ ಉಸಿರು ಗಟ್ಟಿಸಿ ಕೊಂದ ಪತ್ನಿ!
ಗಂಡನಿಗೆ ಮದ್ಯಪಾನ ಮಾಡಿಸಿ ಉಸಿರು ಗಟ್ಟಿಸಿ ಕೊಂದ ಪತ್ನಿ
ಭೀಮೇಶ್​​ ಪೂಜಾರ್
| Edited By: |

Updated on: Mar 21, 2024 | 10:20 PM

Share

ರಾಯಚೂರು, ಮಾ.21: ತಾಲ್ಲೂಕಿನ ಸಿಂಗನೋಡಿ  ತಾಂಡಾದಲ್ಲಿ ಜನಸೇವೆ ಮಾಡಿಕೊಂಡಿದ್ದ ಟಿ.ಎ.ರಾಜು ನಾಯ್ಕ್​​ ಎನ್ನುವ ವ್ಯಕ್ತಿ ಮಾರ್ಚ್​ 19 ರಂದು ರಾತ್ರಿ ಮಲಗಿದ್ದಲ್ಲೇ ಮೃತಪಟ್ಟಿದ್ದ. ನಿನ್ನೆ(ಮಾ.20) ಬೆಳಿಗ್ಗೆ ಆತನ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ರಾಯಚೂರು(Raichur) ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಸಿಂಗನೋಡಿ ಪಂಚಾಯಿತಿ ಹಾಲಿ ಸದಸ್ಯನಾಗಿದ್ದ ಟಿ.ಎ ರಾಜು ನಾಯ್ಕ್​​​ ಒಳ್ಳೆಯ ವ್ಯಕ್ತಿ. ಕಷ್ಟ ಅಂದರೆ ಕರಗಿ ಹೋಗುತ್ತಿದ್ದವ ರಾತ್ರೋ ರಾತ್ರಿ ಹೆಣವಾಗಿದ್ದಾನೆ ಎಂಬ ವಿಷಯ ಅರಗಿಸಿಕೊಳ್ಳಲಾಗುತ್ತಿರಲಿಲ್ಲ. ಈ ಹಿನ್ನಲೆ ನಿನ್ನೆ ಬೆಳಿಗ್ಗೆ ಆತನ ಪತ್ನಿ ಸ್ನೇಹಾರನ್ನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರಶ್ನಿಸಿದ್ದರು. ಆದ್ರೆ, ಆಕೆ ಏನನ್ನು ಬಾಯಿ ಬಿಟ್ಟಿರಲಿಲ್ಲ. ನಂತರ ಮೃತನ ಕುಟುಂಬಸ್ಥರು ನೀಡಿದ ದೂರಿನ ಮೆರೆಗೆ ಯಾಪಲದಿನ್ನಿ ಪೊಲೀಸರು ತನಿಖೆ ನಡೆಸಿದಾಗ ಅಸಲಿ ಸತ್ಯ ಬಯಲಾಗಿತ್ತು.

ಮೃತ ಟಿ.ಎ ರಾಜು ನಾಯ್ಕ್​ ಪತ್ನಿ ಸ್ನೇಹಾ ಗ್ರಾಮಸ್ಥರ ಪ್ರಶ್ನೆಗಳಿಗೆ ತಬ್ಬಿಬ್ಬಾಗಿದ್ದಳು. ಇದರಿಂದ ಗ್ರಾಮಸ್ಥರಲ್ಲಿ ಅನುಮಾನ ಮೂಡಿತ್ತು. ನಂತರ ಯಾಪಲದಿನ್ನಿ ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬಟಾಬಯಲಾಗಿದೆ. ಮೃತನ ಪತ್ನಿ ಸ್ನೇಹಾ ಅನೈತಿಕ ಸಂಬಂಧ ಹೊಂದಿದಳು. ಇದೇ ಅಕ್ರಮ ಸಂಬಂಧದ ಭಾಗವಾಗಿ ಪತಿಯನ್ನ ಹತ್ಯೆಗೈದಿದ್ದಾಳೆ ಎನ್ನುವುದು ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಇದೇ ಸಿಂಗನೋಡಿ ತಾಂಡಾದಲ್ಲಿ ದೇವಸ್ಥಾನವೊಂದರ ಕಾಮಗಾರಿ ನಡೆಯುತ್ತಿತ್ತು. ಆಗ ಆ ಕೆಲಸಕ್ಕೆ ಮಹಾರಾಷ್ಟ್ರ ಮೂಲದ ರಾಜು ಎನ್ನುವ ವ್ಯಕ್ತಿ ಸೇರಿ ನಾಲ್ಕೈದು ಜನ ಕೆಲಸಕ್ಕೆ ಬಂದಿದ್ರು. ಹೀಗೆ ಕೆಲಸಕ್ಕೆ ಬಂದಿದ್ದ ರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರಾಜು ನಾಯ್ಕ್​ ಪತ್ನಿ ಸ್ನೇಹಾ ಮೇಲೆ ಕಣ್ಣು ಹಾಕಿದ್ದ. ಆ ಬಳಿಕ ಪರಿಚಯ, ಸ್ನೇಹವಾಗಿ ರಾಜು ನಾಯ್ಕ್​ ಪತ್ನಿ ಸ್ನೇಹಾ ಹಾಗೂ ಕೆಲಸಕ್ಕೆ ಬಂದಿದ್ದ ರಾಜು ನಡುವೆ ಅನೈತಿಕ ಸಂಬಂಧ ಶುರುವಾಗಿತ್ತು.

ಇದನ್ನೂ ಓದಿ:ವಿಜಯಪುರ: ಅನೈತಿಕ ಸಂಬಂಧದ ಶಂಕೆ; ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ

ಇದಾದ ಕೆಲವು ತಿಂಗಳುಗಳ ಬಳಿಕ ಪತಿ ಟಿ.ಎ.ರಾಜು ನಾಯ್ಕ್​​ಗೆ ಗೊತ್ತಾಗಿತ್ತು. ಆತ ಪತ್ನಿಗೆ ಬೈದು ಬುದ್ದಿ ಹೇಳಿದ್ದ. ಇತ್ತ ಗ್ರಾಮಸ್ಥರು ಕೆಲಸಕ್ಕೆ ಬಂದಿದ್ದ ರಾಜುನನ್ನ ತರಾಟೆಗೆ ತೆಗೆದುಕೊಂಡು ಊರು ಬಿಡಿಸಿದ್ದರು. ಆದ್ರೆ, ಅವರಿಬ್ಬರ ನಡುವೆ ಫೋನ್ ಸಂಪರ್ಕ ಆಕ್ಟಿವ್ ಆಗಿಯೇ ಇತ್ತು. ಆಗಾಗ ಪಟ್ಟಣಕ್ಕೆ ಹೋಗಿ ಭೇಟಿಯಾಗುತ್ತಿದ್ದರಂತೆ. ಇದರ ಭಾಗವಾಗಿ ಪತಿಯನ್ನ ಕೊಂದು ಒಂದಾಗೋಕೆ ಪತ್ನಿ ಸ್ನೇಹಾ ಮುಂದಾಗಿದ್ದಳಂತೆ. ಅದರಂತೆ ಮೊನ್ನೆ ಪತಿ ರಾಜು ನಾಯ್ಕ್​​ ಎಂದಿನಂತೆ ಮನೆಯಲ್ಲಿ ಮದ್ಯಪಾನ ಮಾಡೋವಾಗ ಆತನಿಗೆ ಪತ್ನಿ ಸ್ನೇಹಾ ಹೆಚ್ಚು ಕುಡಿಸಿದ್ದಾಳೆ. ನಂತರ ರಾತ್ರಿ ಮಲಗಿದ್ದಾಗ ಆತನ ಕತ್ತು ಹಿಸುಕಿ ಕೊಂದಿದ್ದಾಳೆ. ಬೆಳಿಗ್ಗೆ ಆತನ ಸಹಜವಾಗಿ ಮೃತಪಟ್ಟಿರುವ ರೀತಿ ಡ್ರಾಮಾ ಮಾಡಿದ್ದು, ಇದೀಗ ಸತ್ಯ ಬೆಳಕಿಗೆ ಬಂದಿದೆ.

ಈ ಬಗ್ಗೆ ಯಾಪಲದಿನ್ನಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ರಾಜು ನಾಯ್ಕ್​ ಪತ್ನಿ ಸ್ನೇಹಾಳನ್ನ ವಶಕ್ಕೆ ಪಡೆದಿದ್ದಾರೆ. ಇದು ಕೊಲೆ ಪ್ರಕರಣ ಎಂದು ದೃಢವಾದ ಬಳಿಕ ಇಂದು ಮರಣೋತ್ತರ ಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಲಾಗಿದೆ. ಆಕೆಗೆ ಕುಮ್ಮಕ್ಕು ನೀಡಿದ್ದ ಪ್ರಿಯಕರ ರಾಜುಗಾಗಿ ಶೋಧ ಕಾರ್ಯ ನಡೀತಿದೆ. ಆದ್ರೆ, ಇತ್ತ ಹೆತ್ತ ತಂದೆ ಹೆಣವಾಗಿದ್ರೆ, ತಾಯಿ ಜೈಲು ಸೇರಿದ್ದು, ಮಕ್ಕಳು ಅನಾಥವಾಗಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?