AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ವ್ಯಕ್ತಿ ನಾಪತ್ತೆ, 45 ದಿನದ ಬಳಿಕ ಬೆಟ್ಟದಲ್ಲಿ ಬಿದ್ದಿತ್ತು ಆತನ ಮುಂಡ, ದರ್ಗಾ ಬಳಿ ತಲೆ ಬುರುಡೆ ಪತ್ತೆ

ಫೆಬ್ರವರಿ 11 ರಂದು ರಾಯಚೂರು ತಾಲೂಕಿನ ಕೊರ್ತಕುಂದ ಗ್ರಾಮದ ಕೊರ್ತಕುಂದ ಹೊರಭಾಗದ ದರ್ಗಾ ಬಳಿ ತಲೆ ಬುರುಡೆವೊಂದು ಪತ್ತೆಯಾಗಿತ್ತು.ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ದೇಹಕ್ಕಾಗಿ ಹುಡುಕಾಟ ನಡೆಸಿದ್ದರು. ಮಂಗಳವಾರದಂದು ಬೆಟ್ಟದ ಮೇಲೆ ಅಸ್ತಿಪಂಜರ ಪತ್ತೆಯಾಗಿದೆ.ಈ ಅಸ್ಥಿಪಂಜರ ಯಾರದ್ದು ಎಂಬ ತನಿಖೆ ನಡೆಸಿದ ಪೊಲೀಸರಿಗೆ ಅಚ್ಚರಿ ಅಂಶವೊಂದು ತಿಳಿದಿದೆ.

ರಾಯಚೂರು: ವ್ಯಕ್ತಿ ನಾಪತ್ತೆ, 45 ದಿನದ ಬಳಿಕ ಬೆಟ್ಟದಲ್ಲಿ ಬಿದ್ದಿತ್ತು ಆತನ ಮುಂಡ, ದರ್ಗಾ ಬಳಿ ತಲೆ ಬುರುಡೆ ಪತ್ತೆ
ಪೊಲೀಸರ ತಪಾಸಣೆ, ನಾಪತ್ತೆಯಾದ ವ್ಯಕ್ತಿ ರಸೂಲ್ ಸಾಬ್
ಭೀಮೇಶ್​​ ಪೂಜಾರ್
| Edited By: ವಿವೇಕ ಬಿರಾದಾರ|

Updated on: Feb 14, 2024 | 9:22 AM

Share

ರಾಯಚೂರು, ಫೆಬ್ರವರಿ 14: ರಾಯಚೂರು (Raichur) ತಾಲೂಕಿನ ಕೊರ್ತಕುಂದ ಗ್ರಾಮದ ವ್ಯಕ್ತಿ 45 ದಿನಗಳ ಹಿಂದೆ ನಾಪತ್ತೆಯಾಗಿದ್ದು, ಮಂಗಳವಾರ (ಫೆ.14) ಆತನ ಅಸ್ಥಿಪಂಜರ (Skeleton) ಪತ್ತೆಯಾಗಿದೆ. ಕೊರ್ತಕುಂದ ಗ್ರಾಮದ ರಸೂಲ್ ಸಾಬ್ (45) ಅನುಮಾನಾಸ್ಪದವಾಗಿ ಮೃತಪಟ್ಟಿರುವ ವ್ಯಕ್ತಿ. 45 ದಿನಗಳ ಹಿಂದೆ ಹೊಲಕ್ಕೆ ಹೋದ ರಸೂಲ್ ಸಾಬ್ ಇದ್ದಕ್ಕಿದಂತೆ ನಾಪತ್ತೆಯಾಗಿದ್ದನು. ರಸೂಲ್​ಗಾಗಿ ಕುಟುಂಬಸ್ಥರು 20 ಕ್ಕೂ ಹೆಚ್ಚು ಹಳ್ಳಿಗಳಲ್ಲಿ, ದೇವಸ್ಥಾನ, ದರ್ಗಾಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಹುಡುಕಾಡಿದರೂ ರಸೂಲ್ ಸಿಗಲ್ಲಿ. ಕೊನೆಗೆ ಕುಟುಂಬಸ್ಥರು ಕೈಚೆಲ್ಲಿ, ಪೊಲೀಸರಿಗೆ (Police) ದೂರು ನೀಡದೆ ಸುಮ್ಮನಾದರು.

ಇದೆ ಫೆಬ್ರವರಿ 11 ರಂದು ಕೊರ್ತಕುಂದ ಹೊರಭಾಗದ ದರ್ಗಾ ಬಳಿ ತಲೆ ಬುರುಡೆವೊಂದು ಪತ್ತೆಯಾಗಿತ್ತು. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ದೇಹಕ್ಕಾಗಿ ಹುಡುಕಾಟ ನಡೆಸಿದ್ದರು. ಮಂಗಳವಾರದಂದು ಬೆಟ್ಟದ ಮೇಲೆ ಅಸ್ತಿಪಂಜರ ಪತ್ತೆಯಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ರುಸೂಲ್​ ಕುಟುಂಬಸ್ಥರು, ಚಪ್ಪಲಿ, ಬುರುಡೆ ಮೇಲಿನ ಕೂದಲು ಮತ್ತು ಬಟ್ಟೆಯಿಂದ ಗುರುತು ಪತ್ತೆ ಹಚ್ಚಿದ್ದಾರೆ. ರಸೂಲ್​ನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಯಾಪಲದಿನ್ನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಅಸ್ಥಿಪಂಜರ ಪತ್ತೆ ಪ್ರಕರಣ: ಆತ್ಮಹತ್ಯೆಗೆ ಶರಣಾದ ಜಗನ್ನಾಥರೆಡ್ಡಿ ಕುಟುಂಬ? ಡೆತ್​​ ನೋಟ್​ನಿಂದ ರಿವೀಲ್​ ಆಯ್ತು ಹಲವು ಅಂಶ

2 ವರ್ಷದ ಮಗು ಹತ್ಯೆಗೈದು ತಾಯಿ ನೇಣಿಗೆ ಶರಣು

ಕಲಬುರಗಿ: ಎರಡು ವರ್ಷದ ಮಗುವನ್ನು ಹತ್ಯೆಗೈದು ತಾಯಿಯೂ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ. ವರ್ಷಿತಾ (2) ಶಿವಲೀಲಾ (23) ಮೃತ ದುರ್ದೈವಿಗಳು. ಗಂಡ ಮತ್ತು ಅತ್ತೆಯ ಕಿರುಕುಳದಿಂದ ಶಿವಲೀಲಾ ತವರು ಸೇರಿದ್ದರು. ಶಿವಲೀಲಾ ಎರಡು ದಿನದ ಹಿಂದಷ್ಟೆ ಗಂಡನ ಮನೆಗೆ ಬಂದಿದ್ದರು. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ