AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur: ಶಾರ್ಟ್ ಸರ್ಕ್ಯೂಟ್​ನಿಂದ ಎಸಿ ಸ್ಫೋಟ: ತಾಯಿ, ಇಬ್ಬರು ಮಕ್ಕಳು ಸಜೀವದಹನ

ಶಾರ್ಟ್ ಸರ್ಕ್ಯೂಟ್​ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಸಜೀವ ದಹನವಾಗಿರುವಂತಹ ಘಟನೆ ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿ ನಡೆದಿದೆ.

Raichur: ಶಾರ್ಟ್ ಸರ್ಕ್ಯೂಟ್​ನಿಂದ ಎಸಿ ಸ್ಫೋಟ: ತಾಯಿ, ಇಬ್ಬರು ಮಕ್ಕಳು ಸಜೀವದಹನ
ಪ್ರಾತಿನಿಧಿಕ ಚಿತ್ರImage Credit source: jantakareporter.com
ಗಂಗಾಧರ​ ಬ. ಸಾಬೋಜಿ
|

Updated on:Mar 06, 2023 | 9:56 PM

Share

ರಾಯಚೂರು: ಶಾರ್ಟ್ ಸರ್ಕ್ಯೂಟ್​ನಿಂದ ಎಸಿ ಸ್ಫೋಟಗೊಂಡ (AC blast) ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಸಜೀವ ದಹನವಾಗಿರುವಂತಹ ಘಟನೆ ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿ ನಡೆದಿದೆ. ತಾಯಿ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಮೃತರು. ಮೂಲತಃ ಮಂಡ್ಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಿದ್ದಲಿಂಗಯ್ಯ ಸ್ವಾಮಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಶಕ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಸಂಬಂಧಿಕರ ಹೇಳಿಕೆ ಆಧರಿಸಿ ಪೊಲೀಸರು ದೂರು ದಾಖಲಿಸಲಿಕೊಂಡಿದ್ದಾರೆ.

ಅನುಮಾನಸ್ಪದವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಚಿಕ್ಕಮಗಳೂರು: ಅನುಮಾನಸ್ಪದವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ನಗರದ AIT ಬಾಯ್ಸ್ ವಸತಿ ನಿಲಯದಲ್ಲಿ ನಡೆದಿದೆ. ಕಿಶೋರ್​ ಮೃತ ಇಂಜಿನಿಯರಿಂಗ್ ವಿದ್ಯಾರ್ಥಿ. ಹಾಸ್ಟೆಲ್ ಕಿಟಕಿಗೆ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವಪತ್ತೆಯಾಗಿದೆ. ದ್ವಿತೀಯ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಮೃತ ಕಿಶೋರ್, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಿವಾಸಿ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Vijyanagar: ಲವ್ ಮ್ಯಾರೇಜ್.. ಆದರೂ ಗಂಡನ ಕಿರುಕುಳ, ತಮ್ಮ ಶಾಲೆಯಲ್ಲೆ ಟೀಚರ್ ಸೂಸೈಡ್, ಡೆತ್​​ ನೋಟ್​​​​ನಲ್ಲಿ ಏನು ಬರೆದಿದ್ದಾರೆ ಒಮ್ಮೆ ಓದಿ!

ಕ್ಲುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಆನೇಕಲ್: ಕ್ಲುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಹಕ್ಕಿ ಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ಹಕ್ಕಿ ಪಿಕ್ಕಿ ಕಾಲೋನಿ ನಿವಾಸಿ ದೊಡ್ಡ ಮಾದಯ್ಯ(57) ಕೊಲೆಯಾದ ವ್ಯಕ್ತಿ. ಕಳೆದ ಶನಿವಾರ ರಾತ್ರಿ ತಲೆ ಮೇಲೆ ಸೈಜು ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಪಚ್ವಿ ಆಟ(ಹುಣಸೆ ಬೀಜ) ಆಡುವ ವೇಳೆ ಗಲಾಟೆ ನಡೆದಿದೆ. ಕುಡಿದ ಅಮಲಿನಲ್ಲಿ ಜೊತೆಯಲ್ಲಿದ್ದವರನ್ನು ನಿಂದಿಸಿದ್ದು, ಈ ವೇಳೆ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಬನ್ನೇರುಘಟ್ಟ ಪೊಲೀಸರಿಂದ ಆರು ಮಂದಿ ಶಂಕಿತ ಆರೋಪಿಗಳ ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಅಧಿಕಾರಿಗಳಿಂದ ಕಿರುಕುಳ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಅಂಬೇಡ್ಕರ್ ಸೇವಾ ಸಮಿತಿ ಮುಖಂಡ

ವಿಷ ಸೇವಿಸಿ ಪತಿ ಆತ್ಮಹತ್ಯೆ, ಪತ್ನಿ ವಿರುದ್ಧ ಪೊಲೀಸರಿಗೆ ದೂರು

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಉಗ್ಗೆಹಳ್ಳಿ ಗ್ರಾಮದ ಜಗದೀಶ್ ಎಂಬಾತ ಎರಡು ದಿನದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೆ ಆತನ ಪತ್ನಿಯೇ ಕಾರಣ ಎಂದು ಮೃತನ ಕುಟುಂಬಸ್ಥರು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ನೇತ್ರಾವತಿ ವಿರುದ್ಧ ದೂರು ನೀಡಿದ್ದರು. ನಿನ್ನೆ(ಮಾ.5) ಮನೆಯಿಂದ ನಾಪತ್ತೆಯಾಗಿದ್ದ ಮೃತನ ಪತ್ನಿ ನೇತ್ರಾವತಿ, ಮನನೊಂದು ಮನೆಯ ಸಮೀಪದ ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತುಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:51 pm, Mon, 6 March 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​