AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕೂಲಿ ಕೆಲಸ ಮಾಡುತ್ತೇನೆಂದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನ ಬಂಧನ

ಕೂಲಿ ಕೆಲಸ ಮಾಡುತ್ತೇನೆಂದು ಬಿಂಬಿಸಿ ಕಳ್ಳತನ ಮಾಡುತ್ತಿದ್ದ ರಾಯಚೂರಿನ ಕುಖ್ಯಾತ ಕಳ್ಳ ನಾಗರಾಜ್ ದೇವರಮನಿ ಎಂಬಾತನನ್ನು ದೇವದುರ್ಗ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಾಗರಾಜ್ ಇತ್ತೀಚೆಗೆ ಮನೆಗಳ್ಳತನ ಹಾಗೂ ಚಿನ್ನದ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ. ಸದ್ಯ ಪೊಲೀಸರು ಬಂಧಿಸಿದ್ದಾರೆ.

ರಾಯಚೂರು: ಕೂಲಿ ಕೆಲಸ ಮಾಡುತ್ತೇನೆಂದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನ ಬಂಧನ
ನಾಗರಾಜ್ ದೇವರಮನಿ ಎಂಬ ಕಳ್ಳನನ್ನು ಬಂಧಿಸಿದ ಪೊಲೀಸರು
TV9 Web
| Edited By: |

Updated on: Sep 04, 2023 | 12:48 PM

Share

ರಾಯಚೂರು, ಸೆ.24: ಕೂಲಿ ಕೆಲಸ ಮಾಡುತ್ತೇನೆಂದು ಬಿಂಬಿಸಿ ಕಳ್ಳತನ ಮಾಡುತ್ತಿದ್ದ ರಾಯಚೂರಿನ(Raichur) ಕುಖ್ಯಾತ ಕಳ್ಳ ನಾಗರಾಜ್ ದೇವರಮನಿಯನ್ನು ದೇವದುರ್ಗ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇತ್ತೀಚೆಗೆ ಮನೆಗಳ್ಳತನ ಹಾಗೂ ಚಿನ್ನದ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ. ಸದ್ಯ ಬಂಧಿತನಿಂದ 6 ಲಕ್ಷ ಮೌಲ್ಯದ 85 ಗ್ರಾಂ ಚಿನ್ನಾಭರಣ ಹಾಗೂ 70 ಗ್ರಾಂ ಬೆಳ್ಳಿ ಆಭರಣ ಜಪ್ತಿ ಮಾಡಲಾಗಿದೆ. ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಇನ್ನು ಮತ್ತೊಂದೆಡೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕೊಂಗರಹಳ್ಳಿ ಬಳಿ ಗಾಂಜಾ ಮಾರುತ್ತಿದ್ದ ಆಂಧ್ರದ ಪೆದ್ದಗಿರಗರಪಲ್ಲಿ ಮೂಲದ ಚಲಪತಿ ಎಂಬಾತನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿ ಇದ್ದ 6 ಕೆಜಿ 160 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕೆಜಿಎಫ್ ಸಿಇಎನ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ಸಮುದ್ರಪಾಲು, ಹಾಸನದಲ್ಲಿ ಕೋಟೆ ನೋಡಲು ಬಂದು ಕಾಲು ಜಾರಿ ಬಿದ್ದಿದ್ದ ಯುವಕ ಪಾರು

ಯುವಕನಿಗೆ ಚೂರಿ ಇರಿದ ಮೂವರು ಆರೋಪಿಗಳ ಬಂಧನ

ಮಂಗಳೂರು ಹೊರವಲಯದ ಸುರತ್ಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಯುವಕನಿಗೆ ಚೂರಿ ಇರಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23), ಯಜ್ಞೆಶ್ (22) ಬಂಧಿತ ಆರೋಪಿಗಳು.

ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ‌ ಕಳವಾರು ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್‌ (23) ಎಂಬಾತನಿಗೆ ಮೂವರು ಆರೋಪಿಗಳು ಚೂರಿ ಇರಿದಿದ್ದರು. ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮೊಹಮ್ಮದ್ ಸಫ್ವಾನ್ ನೊಂದಿಗೆ ಬೈಕ್ ನಲ್ಲಿ ತೆರಳುತಿದ್ದಾಗ ಎರಡು ಬೈಕ್​ನಲ್ಲಿ ಬಂದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಅಬ್ದುಲ್ ಸಫ್ವಾನ್‌ ಅವರ ಕೈ, ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದವು. ಗಾಯಗೊಂಡ ಸಫ್ವಾನ್​ನನ್ನು ಮಂಗಳೂರಿನ ಖಾಸಗಿ‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಫ್ವಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತೆರಳಿ ಸುರತ್ಕಲ್ ಠಾಣೆಯ ಪೊಲೀಸರು ತನಿಖೆ ನಡೆಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ