AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರನ್ನೇ ಬೆಚ್ಚಿಬೀಳಿಸಿದ್ದ ಭೀಕರ ಕೊಲೆ: 31 ಬಾರಿ ಇರಿದು ಕೊಂದವರು ಸಿಕ್ಕಿಬಿದ್ದರು

ರಾಯಚೂರಿನಲ್ಲಿ ನಡೆದ ಭೀಕರ ಕೊಲೆಯ ಸಿಸಿಟಿವಿ ದೃಶ್ಯಗಳು ಬೆಳಕಿಗೆ ಬಂದಿವೆ. ಬರೋಬ್ಬರಿ 31 ಬಾರಿ ಇರಿದು ವ್ಯಕ್ತಿಯನ್ನು ಕೊಲ್ಲಲಾಗಿದೆ. ಹಳೆಯ ದ್ವೇಷದಿಂದ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಘಟನೆ ಇಡೀ ರಾಯಚೂರನ್ನು ಬೆಚ್ಚಿಬೀಳಿಸಿದೆ.

ರಾಯಚೂರನ್ನೇ ಬೆಚ್ಚಿಬೀಳಿಸಿದ್ದ ಭೀಕರ ಕೊಲೆ: 31 ಬಾರಿ ಇರಿದು ಕೊಂದವರು ಸಿಕ್ಕಿಬಿದ್ದರು
ರಾಯಚೂರನ್ನೇ ಬೆಚ್ಚಿಬೀಳಿಸಿದ್ದ ಭೀಕರ ಕೊಲೆ: 31 ಬಾರಿ ಇರಿದು ಕೊಂದವರು ಸಿಕ್ಕಿಬಿದ್ದರು
Follow us
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ

Updated on: Mar 17, 2025 | 7:14 PM

ರಾಯಚೂರು, ಮಾರ್ಚ್​ 17: ಅದು ಜನನಿಬಿಡ ಪ್ರದೇಶದ ಮಧ್ಯೆ ಭಾಗದಲ್ಲಿ ನಡೆದ ರಣ ಭೀಕರ ಕೊಲೆ (kill). ಅಲ್ಲಿ ಹಂತಕರು ಬರೋಬ್ಬರಿ 31 ಬಾರಿ ಇರಿದು ವ್ಯಕ್ತಿಯನ್ನ ಕೊಲೆ ಮಾಡಿದ್ದಾರೆ. ನಗರದ ಬಂಗಿಕುಂಟದಲ್ಲಿ ಇದೇ ಮಾರ್ಚ್ 15 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಯ್ಯದ್ ಖದೀರ್(43) ಮೃತ ವ್ಯಕ್ತಿ. ಅನ್ವರ್ ಹಾಗೂ ತಪ್ಪಣ್ಣ ಎಂಬುವವರನ್ನು ಬಂಧಿಸಲಾಗಿದ್ದು, ಸದರ್ ಬಜಾರ್ ಠಾಣೆಯಲ್ಲಿ (police) ಪ್ರಕರಣ ದಾಖಲಾಗಿದೆ.

31 ಬಾರಿ ಇರಿತ

ನೋಡನೋಡುತ್ತಲೇ ಅಲ್ಲಿ ವ್ಯಕ್ತಿಯೊಬ್ಬನ ಉಸಿರುಚೆಲ್ಲಿತ್ತು. ಒಂದಲ್ಲಾ, ಎರಡಲ್ಲಾ ಬರೋಬ್ಬರಿ 31 ಬಾರಿ ವ್ಯಕ್ತಿಯೊಬ್ಬನಿಗೆ ಮನಸೋ ಇಚ್ಛೆ ಇರಿದು ಕೊಲ್ಲಲಾಗಿದೆ. ಹೌದು. ಇಂಥ ಭಯ ಭೀಕರ ಘಟನೆಗೆ ಸಾಕ್ಷಿಯಾಗಿದ್ದು ರಾಯಚೂರು. ರಾಯಚೂರು ನಗರದ ಬಂಗಿಕುಂಟ ಅನ್ನೊ ಏರಿಯಾದಲ್ಲಿನ ಮಾರುಕಟ್ಟೆಯಲ್ಲೇ ಇದೇ ಮಾರ್ಚ್​ 15 ರ ಮಧ್ಯಾಹ್ನ ಸಯ್ಯದ್ ಖದೀರ್​​ ಎಂಬ ವ್ಯಕ್ತಿಯನ್ನ ಹಾಡಹಗಲೇ ಹತ್ಯೆಗೈಯಲಾಗಿತ್ತು. ಈ ಘಟನೆಯಿಂದ ಇಡೀ ರಾಯಚೂರಿಗೆ ರಾಯಚೂರೇ ಬೆಚ್ಚಿಬಿದ್ದಿತ್ತು. ಬೈಕ್​ನಲ್ಲಿ ಬಂದಿದ್ದ ಇಬ್ಬರು ರಕ್ಕಸರು ಸಯ್ಯದ್ ಖದೀರ್​ನ ಮೇಲೆ ಅಟ್ಯಾಕ್ ಮಾಡಿ ಬರೋಬ್ಬರಿ 31 ಬಾರಿ ಇರಿದು ಹತ್ಯೆಗೈದಿದ್ದಾರೆ.

ಇದನ್ನೂ ಓದಿ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಜಲಸಮಾಧಿ: ಗ್ರಾಮದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಹೀಗೆ ಭೀಕರ ಹತ್ಯೆ ಬಳಿಕ ಇಬ್ಬರು ಹಂತಕರು ತಾವೇ ಹೋಗಿ ಸದರಬಜಾರ್ ಠಾಣೆಯಲ್ಲಿ ಶರಣಾಗಿದ್ದಾರೆ. ಸಯ್ಯದ್ ಖದೀರ್​ನನ್ನ ಕೊಂದಿದ್ದ ಹಂತಕರು ಸೀದಾ ಪೊಲೀಸರ ಮುಂದೆ ಸರೆಂಡರ್ ಆಗಿದ್ದನ್ನ ಕಂಡು ಪೊಲೀಸರೇ ಶಾಕ್ ಆಗಿದ್ದರು. ಅವರೇ ಅನ್ವರ್ ಹಾಗೂ ತಿಮ್ಮಪ್ಪ. ಈ ಅನ್ವರ್ ಹಾಗೂ ತಿಮ್ಮಪ್ಪ ಇಬ್ಬರು ಸ್ನೇಹಿತರು. ಏ-1 ಆರೋಪಿ ಅನ್ವರ್​​ನ ಸಹೋದರ ಕಲಂದರ್ ಹಾಗೂ ಹತ್ಯೆಯಾಗಿರುವ ಖದೀರ್​​​ ಇಬ್ಬರು ಸ್ನೇಹಿತರು.

ಮೃತ ಖದೀರ್​ಗೆ ಸಂಬಂಧಿಕರಾಗಬೇಕಿರುವ ಕುಟುಂಬಸ್ಥರು ತೆಲಂಗಾಣದ ಗಟ್ಟು ಮಾಚರ್ಲಾ ಅನ್ನೋ ಪಟ್ಟಣದಲ್ಲಿ ವಾಸವಿದ್ದಾರೆ. ಅಲ್ಲಿ ಖದೀರ್ ಸಂಬಂಧಿಕರು ಹಾಗೂ ಅಲ್ಲಿನ ಮತ್ತೊಂದು ಕುಟುಂಬದ ನಡುವೆ ಕಿರಿಕ್ ಆಗಿತ್ತಂತೆ. ಈ ವಿಚಾರ ತಿಳಿದು ಇತ್ತೀಚೆಗೆ ಮೃತ ಖದೀರ್​ ಏ-1 ಆರೋಪಿ ಅನ್ವರ್​ನ ಸಹೋದರ ಕಲಂದರ್​ನನ್ನ ಕರೆದುಕೊಯ್ದಿದ್ದ. ಅಲ್ಲಿ ಹೋಗಿ ಮಾತುಕತೆಯಾಡಿ ಜಗಳ ಬಗೆಹರಿಸಿ ಬರೋಣ ಅಂತ ಕರೆದೊಯ್ದಿದ್ದ. ಆದರೆ ಅಲ್ಲಿ ಗಲಾಟೆ ಹೆಚ್ಚಾದ ಕಾರಣ ವಿರೋಧಿ ಬಣದ ಕೆಲವರು, ಖದೀರ್​ ಜೊತೆಗೆ ಹೋಗಿದ್ದ ಆತನ ಸ್ನೇಹಿತ ಕಲಂದರ್​ನನ್ನ ಕೊಂದಿದ್ದರು.

ಇದನ್ನೂ ಓದಿ: ಪ್ರೀತ್ಸೇ…ಪ್ರೀತ್ಸೇ ಎಂದು ಬಾಲಕಿಯನ್ನು ಬಲಿ ಪಡೆದ ಪಾಗಲ್ ಪ್ರೇಮಿ

ಇತ್ತ ಈ ಘಟನೆ ಬಳಿಕ ಕಲಂದರ್ ಕುಟುಂಬಸ್ಥರು ಕೆರಳಿದ್ದಾರೆ. ಅಲ್ಲಿ ಮಾತುಕತೆಗೆ ಕರೆದೊಯ್ದಿದ್ದ ಖದೀರ್​ನಿಂದಲೇ ಕಲಂದರ್ ಕೊಲೆಯಾಗಿದ್ದಾನೆ. ಅದಕ್ಕೆ ಅವನೇ ಕಾರಣ ಅಂತ ಸಿಡಿದೆದ್ದಿದ್ದರು. ಇದೇ ಕಾರಣಕ್ಕೆ ಕಲಂದರ್ ಸಹೋದರ ಅನ್ವರ್​ ತನ್ನ ಸ್ನೇಹಿತ ತಿಮ್ಮಪ್ಪನ ಜೊತೆ ಸೇರಿಕೊಂಡು ಬ್ಯಾಂಕ್​ಗೆ ಬಂದಿದ್ದ ಖದೀರ್​ನನ್ನ ಕೊಂದು ಹಾಕಿದ್ದಾರೆ. ಸದ್ಯ ಸಬರ ಬಜಾರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಏ-1 ಆರೋಪಿ ಅನ್ವರ್ ಹಾಗೂ ಏ-2 ಆರೋಪಿ ತಮ್ಮಪ್ಪನನ್ನ ಬಂಧಿಸಿ, ಜೈಲಿಗಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?