AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಗ್ರಾಮ ದೇವಿ ಜಾತ್ರೆಗೆ ಬಂದಿದ್ದವನ ಹತ್ಯೆ! ಪಾರ್ಟಿಗೆಂದು ಹೋದವ ಮೂರು ದಿನದ ಬಳಿಕ ಶವವಾಗಿ ಪತ್ತೆ

ಆತ ಹೊಟ್ಟೆ ಬಟ್ಟೆ ಕಟ್ಟಿಕೊಂಡು ದೂರದ ಬೆಂಗಳೂರಿಗೆ ಹೋಗಿ ಕೂಲಿ ಮಾಡುತ್ತಿದ್ದ ಯುವಕ. ಓದು ಅಷ್ಟಕ್ಕಷ್ಟೆ ಆದರೂ ಸಹೋದರರ ಜೊತೆಗೂಡಿ ಮೈ ಬಗ್ಗಿಸಿ ದುಡಿದು ಕೈ ತುಂಬ ಹಣ ಹೆತ್ತವರಿಗೆ ಕೊಡುತ್ತಿದ್ದ. ಅದರಂತೆ ಗ್ರಾಮ ದೇವಿಯ ಜಾತ್ರೆಗೆ ಮರಿಯನ್ನ ಬಲಿಕೊಡಲು ಬಂದಿದ್ದವ ರಾತ್ರೋ ರಾತ್ರಿ ಸುಟ್ಟ ಸ್ಥಿತಿಯಲ್ಲಿ ಹೆಣವಾಗಿದ್ದಾನೆ.

ರಾಯಚೂರು: ಗ್ರಾಮ ದೇವಿ ಜಾತ್ರೆಗೆ ಬಂದಿದ್ದವನ ಹತ್ಯೆ! ಪಾರ್ಟಿಗೆಂದು ಹೋದವ ಮೂರು ದಿನದ ಬಳಿಕ ಶವವಾಗಿ ಪತ್ತೆ
ಮೃತ ಸುರೇಶ್​
ಭೀಮೇಶ್​​ ಪೂಜಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 03, 2024 | 5:54 PM

Share

ರಾಯಚೂರು, ಮಾ.02: ಗ್ರಾಮ ದೇವತೆ ಜಾತ್ರೆಗೆ ಬೆಂಗಳೂರಿನಿಂದ ಊರಿಗೆ ಬಂದಿದ್ದವನನ್ನ ಕೊಲೆ ಮಾಡಿದ ಘಟನೆ ಜಿಲ್ಲೆಯ ಮಾನ್ವಿ (Manvi) ತಾಲ್ಲೂಕಿನ ನಿರಮಾನ್ವಿ ಗ್ರಾಮದಲ್ಲಿ ನಡೆದಿದೆ. ಸುರೇಶ್(20) ಮೃತ ರ್ದುದೈವಿ. ಈ ಗ್ರಾಮದಲ್ಲಿ ಪ್ರತಿವರ್ಷ ಫೆಬ್ರವರಿ ಕೊನೆಯಲ್ಲಿ ರೇಣುಕಾ ಯಲ್ಲಮ್ಮದೇವಿ ಜಾತ್ರೆ ನಡೆಯುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಭಕ್ತರು ಇಲ್ಲಿಗೆ ಬಂದು ಹರಕೆ ತೀರಿಸುತ್ತಾರೆ. ಅದೇ ರೀತಿ ಈ ಗ್ರಾಮದ ಜನ ಕೂಡ ಪ್ರತಿ ವರ್ಷ ಯಲ್ಲಮ್ಮದೇವಿಗೆ ಮರಿ ಬಲಿ ಕೊಟ್ಟು ಪೂಜೆ ಮಾಡುತ್ತಾರೆ. ನಿರಮಾನ್ವಿ ಗ್ರಾಮದ ನಾಗೇಶ್ ಕುಟುಂಬ ಕೂಡ ದೇವಿಗೆ ಮರಿ ಹೊಡೆಯಲು ಮುಂದಾಗಿದ್ದರು.

ಹೀಗಾಗಿ ಇದೇ ಫೆಬ್ರವರಿ 25 ರಂದು ಹಬ್ಬಕ್ಕೆ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡುವ ಮೂವರು ಗಂಡು ಮಕ್ಕಳು ಬಂದಿದ್ದರು. 20 ವರ್ಷದ ಸುರೇಶ್ ಸಹೋದರರಾದ ಮಹೇಶ್ ಹಾಗೂ ವಿನಯ್ ಕೂಡ ಬಂದಿದ್ದರು. ರೇಣುಕಾ ಯಲ್ಲಮ್ಮ ರಥೋತ್ಸವದ ಬಳಿಕ ಇದೇ ಮಾರ್ಚ್ 1 ರಂದು ನಾಗೇಶ್ ಕುಟುಂಬಸ್ಥರಿಗೆಲ್ಲ ಹೇಳಿ ಮರಿ ಹರಕೆ ತೀರಿಸಲು ಮುಂದಾಗಿದ್ರು. ಇದಕ್ಕೂ ಮುನ್ನ ಅಪರೂಪಕ್ಕೆ ಗ್ರಾಮಕ್ಕೆ ಸುರೇಶ್ ಬಂದಿದ್ದರಿಂದ ದೋಸ್ತ್​​ಗಳು ಆತನನ್ನ ಕರೆದುಕೊಂಡು ಸುತ್ತಾಡ ತೊಡಗಿದ್ದರು. ಫೆಬ್ರವರಿ 26 ರಂದು ಸುರೇಶ್ ಮನೆಯಲ್ಲಿದ್ದ. ಆಗ ಆತನ ಸ್ನೇಹಿತರು ಬಂದು ಪಾರ್ಟಿ ಮಾಡಲು ಸುರೇಶ್​​ನನ್ನ ಕರೆದೊಯ್ದಿದ್ದಾರೆ. ಹೀಗೆ ಪಾರ್ಟಿಗೆ ಹೋದವ ಮತ್ತೆ ಮನೆಗೆ ಬಾರಲೇ ಇಲ್ಲ.

ಇದನ್ನೂ ಓದಿ:ಡ್ರ್ಯಾಗರ್​ನಿಂದ ಇರಿದು ರೌಡಿ ಶೀಟರ್ ಕೊಲೆ; ಹಳೆ ಕೇಸ್ ರಾಜಿ ಮಾಡಿಕೊಳ್ಳಲು ಹೋದವ ಸೇರಿದ ಮಸಣ

ಹೀಗೆ ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಸುರೇಶ್​​ ಮನೆಗೆ ಬರುವುದು ವಿಳಂಬವಾದಾಗ ತಂದೆ ನಾಗೇಶ್ ಸಂಬಂಧಿ ದೇವರಾಜ್ ಎನ್ನುವವರ ಮೂಲಕ ಫೋನ್ ಮಾಡಿಸಿದ್ರು. ಆಗ ಆತನ ಫೋನ್ ಸ್ವಿಚ್ಟ್ ಆಫ್ ಆಗಿತ್ತು. ನಂತರ ಸುರೇಶ್ ಸ್ನೇಹಿತರಿಗೆ ಕರೆ ಮಾಡಲಾಗಿತ್ತು. ಆಗಲು ಮಾಹಿತಿ ಸಿಕ್ಕಿರಲಿಲ್ಲ. ಸುರೇಶ್​ನನ್ನ ಕರೆದೊಯ್ದಿದ್ದ ಸ್ನೇಹಿತರನ್ನ ವಿಚಾರಿಸಿದಾಗ ಆತನನ್ನ ಆಗಲೇ ಮನೆ ಬಳಿ ಬಿಟ್ಟು ಹೋಗಿದ್ದಿವಿ ಎಂಬ ಉತ್ತರ ಬಂದಿತ್ತು. ಕೊನೆಗೆ ಬೈಕ್​ಗಳ ಮೂಲಕ ಸುರೇಶ್​​ಗಾಗಿ ಹುಡುಕಾಡದ ಸ್ಥಳವೇ ಇಲ್ಲದಂತಾಗಿತ್ತು.

ಸ್ನೇಹಿತರೇ ಹತ್ಯೆ ಮಾಡಿದರಾ?

ಊರು, ಹಳ್ಳಿಹಳ್ಳಿ ಸುತ್ತಾಡಿದರೂ ಸುರೇಶ್​​ನ ಮಾಹಿತಿಯೇ ಸಿಕ್ಕಿರಲಿಲ್ಲ. ಈ ಮಧ್ಯೆ ಫೆಬ್ರವರಿ 29ರ ಮದ್ಯಾಹ್ನ ಊರ ಹೊರಭಾಗದ ಬೆಟ್ಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿತ್ತು. ನಂತರ ಮಾನ್ವಿ ಪೊಲೀಸರು ಅಲರ್ಟ್​ ಆಗಿ ಪರಿಶೀಲನೆ ನಡೆಸಿದರು. ಆಗ ಅರ್ಧಂಬರ್ಧ ಸುಟ್ಟಿದ್ದ ಮೃತದೇಹ ನೋಡಿ ಅದು ನಾಪತ್ತೆಯಾಗಿದ್ದ ಸುರೇಶ್​ನ ಶವ ಎನ್ನುವುದು ದೃಢಪಟ್ಟಿತ್ತು. ಕಾಣೆಯಾಗಿದ್ದ ಸುರೇಶ್ ಹೆಣವಾಗಿ ಪತ್ತೆಯಾಗಿದ್ದ. ಪಾರ್ಟಿಗೆಂದು ಕರೆದೊಯ್ದಿದ್ದ ಸ್ನೇಹಿತರೇ ಆತನನ್ನ ಕೊಲೆ ಮಾಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ತಮ್ಮನ ಸಾವಿನ ಸೇಡಿಗೆ ಅಣ್ಣನ ಕೊಲೆ; ಇಬ್ಬರು ಅಂದರ್

ಪಾರ್ಟಿಗೆಂದು ಮೃತ ಸುರೇಶ್​​ನನ್ನ ಕರೆದೊಯ್ದಿದ್ದ ಸ್ನೇಹಿತರನ್ನ ವಿಚಾರಣೆಗೊಳಪಡಿಸಲಾಗಿದೆ. ಇದೇ ಕೇಸ್​ನಲ್ಲಿ ಮೃತನ ಸಹೋದರ ಸಂಬಂಧಿ ದೇವರಾಜ್​​ನನ್ನ ವಿಚಾರಿಸಲಾಗಿದೆ. ಆದ್ರೆ, ಸುರೇಶ್​ ಕತ್ತು ಸೀಳಿ, ಹೊಟ್ಟೆಗೆ ಚಾಕುವಿನಿಂದ ಇರಿದು ಕೊಂದು ಸುಟ್ಟು ಹಾಕಲು ಯತ್ನಿಸಲಾಗಿದೆ. ಹೀಗಾಗಿ ಈ ಕೃತ್ಯದಲ್ಲಿ ಬಲವಾದ ಕಾರಣವಿರುವ ಶಂಕೆ ವ್ಯಕ್ತವಾಗಿದ್ದು, ಮಾನ್ವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Sun, 3 March 24

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್