AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ರೈಲ್ವೆ ಹಳಿಯ ಮೇಲೆ ವೃದ್ಧೆಯ ಮೃತದೇಹ ಪತ್ತೆ; ಆಕಸ್ಮಿಕ ಅಲ್ಲ, ಕೊಲೆ

ಜಗಳವಾಡುವಾಗ ನಿಂಗಮ್ಮ ಕೆಳಗೆ ಬಿದ್ದಿದ್ದಾರೆ. ಬಳಿಕ ಬಾಲಚಂದ್ರ ಜತೆ ಸೇರಿ ರೈಲ್ವೆ ಟ್ರಾಕ್​ಗೆ ನಿಂಗಮ್ಮನನ್ನು ಹಾಕಿದ್ದು, ರೈಲು ಹರಿದು ನಿಂಗಮ್ಮನ ದೇಹ ಚಿದ್ರ ಚಿದ್ರವಾಗಿದೆ. ನಂತರ ರೈಲ್ವೆ ಟ್ರಾಕ್​ನಿಂದ ಮೃತ ನಿಂಗಮ್ಮರ ತಲೆ ಕದ್ದಿದ್ದ ಈ ಅರೋಪಿಗಳು, ಅದನ್ನು ಲಾರಿಯೊಂದರ ಒಳಕ್ಕೆ ಹಾಕಿದ್ದಾರೆ.

Crime News: ರೈಲ್ವೆ ಹಳಿಯ ಮೇಲೆ ವೃದ್ಧೆಯ ಮೃತದೇಹ ಪತ್ತೆ; ಆಕಸ್ಮಿಕ ಅಲ್ಲ, ಕೊಲೆ
ಬಾಲಚಂದ್ರ ಮತ್ತು ಲತಾ
TV9 Web
| Edited By: |

Updated on:Jul 26, 2021 | 12:54 PM

Share

ಬೆಂಗಳೂರು: ರೈಲ್ವೆ ಹಳಿಯ ಮೇಲೆ ವೃದ್ಧೆಯ ಮೃತದೇಹ ಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ತನಿಖೆಯ ವೇಳೆ ವೃದ್ಧೆಯನ್ನು ಕೊಲೆ ಮಾಡಿ ಮೃತ ದೇಹವನ್ನು ರೈಲ್ವೆ ಟ್ರಾಕ್ ಮೇಲೆ ಹಾಕಿರುವುದು ಬೆಳಕಿಗೆ ಬಂದಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಾಲಚಂದ್ರನನ್ನು ಸದ್ಯ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಕೊಲೆ ಮಾಡಲು ಬಾಲಚಂದ್ರನಿಗೆ ಸಹಕರಿಸಿದ ಆರೋಪಿ ಲತಾ ಪರಾರಿಯಾಗಿದ್ದು, ಆಕೆಗಾಗಿ ಶೋಧಕಾರ್ಯ ನಡೆಯುತ್ತಿದೆ.

ಮಂಡ್ಯದ ನಿಂಗಮ್ಮನನ್ನು ಬಾಲಚಂದ್ರ ಮತ್ತು ಲತಾ ಸೇರಿ ಕೊಲೆ ಮಾಡಿದ್ದಾರೆ. ನಿಂಗಮ್ಮ ಮತ್ತು ಇವರ ಸೊಸೆ ಲತಾ ನಡುವೆ ಹಣಕಾಸು ವ್ಯವಹಾರ ಇತ್ತು. ಇದೇ ವಿಚಾರವಾಗಿ ಜಗಳವಾಗಿದ್ದು, ಜಗಳವಾಡುವಾಗ ನಿಂಗಮ್ಮ ಕೆಳಗೆ ಬಿದ್ದಿದ್ದಾರೆ. ಬಳಿಕ ಬಾಲಚಂದ್ರ ಜತೆ ಸೇರಿ ರೈಲ್ವೆ ಟ್ರಾಕ್​ಗೆ ನಿಂಗಮ್ಮನನ್ನು ಹಾಕಿದ್ದು, ರೈಲು ಹರಿದು ನಿಂಗಮ್ಮನ ದೇಹ ಚಿದ್ರ ಚಿದ್ರವಾಗಿದೆ. ನಂತರ ರೈಲ್ವೆ ಟ್ರಾಕ್​ನಿಂದ ಮೃತ ನಿಂಗಮ್ಮರ ತಲೆ ಕದ್ದಿದ್ದ ಈ ಅರೋಪಿಗಳು, ಅದನ್ನು ಲಾರಿಯೊಂದರ ಒಳಕ್ಕೆ ಹಾಕಿದ್ದಾರೆ. ಹೀಗಾಗಿ ಗ್ರಾನೈಟ್ ಲಾರಿಯಲ್ಲಿ ಮೃತ ಮಹಿಳೆಯ ತಲೆ ಪತ್ತೆಯಾಗಿದೆ.

ಲಾರಿಯಲ್ಲಿ ತಲೆ ಪತ್ತೆಯಾಗಿದ್ದ ಕಾರಣ ಇಳಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿತ್ತು. ಆದರೆ ರೈಲ್ವೆ ಟ್ರಾಕ್ ಮೇಲೆ ಮೃತ ದೇಹ ಪತ್ತೆಯಾಗಿದ್ದ ಕಾರಣ, ಬೆಂಗಳೂರು ಗ್ರಾಮಾಂತರ ರೈಲ್ವೆ ಠಾಣೆಯಲ್ಲಿ ಈ ಪ್ರಕರಣ ದಾಖಲು ಮಾಡಲಾಗಿತ್ತು. ಸದ್ಯ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸರು ಅರೋಪಿಯನ್ನು ಬಂಧಿಸಿದ್ದಾರೆ.

ಚಾಕುವಿನಿಂದ ಇರಿದು ಆಟೋ ಚಾಲಕನ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಆಟೋ ಚಾಲಕನನ್ನು ಕೊಲೆ ಮಾಡಿದ ಘಟನೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ. ಕಲಬುರಗಿಯ ದುಬೈ ಕಾಲೋನಿ‌ ನಿವಾಸಿ ಅನಿಲ್ ಭಜಂತ್ರಿ(24) ಕೊಲೆಯಾದ ಆಟೋ ಚಾಲಕ. 10-15 ಯುವಕರ ಗುಂಪು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಹಳೆ ವೈಷಮ್ಯದಿಂದ ಆಟೋ ಚಾಲಕನ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಆನೇಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಪೆನ್ನಪಳ್ಳಿಯ ಕಿರಣ್(26) ಬಂಧಿತ ಆರೋಪಿ. ಬಂಧಿತ ಕಿರಣ್​ನಿಂದ ಪೊಲೀಸರು 10 ಬೈಕ್ ವಶಕ್ಕೆ ಪಡೆದಿದ್ದಾರೆ. ಆನೇಕಲ್, ಹೆಬ್ಬಗೋಡಿ, ಅತ್ತಿಬೆಲೆ, ಬೊಮ್ಮನಹಳ್ಳಿ ಭಾಗದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ, ಈ ದ್ವಿಚಕ್ರ ವಾಹನಗಳನ್ನು ತಮಿಳುನಾಡಿನಲ್ಲಿ ಮಾರುತ್ತಿದ್ದ. ಕಿರಣ್ ಜತೆಗೆ ಬೈಕ್​ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದ ಸಂದೀಪ್ ಮತ್ತು ರಾಜೇಶ್ ತಲೆಮರೆಸಿಕೊಂಡಿದ್ದಾರೆ. ಸದ್ಯ ಪೊಲೀಸರು ಅವರಿಬ್ಬರ ಹುಡುಕಾಟದಲ್ಲಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಒಂಟಿ ವೃದ್ಧೆ ಕೊಲೆ ಪ್ರಕರಣ ಪತ್ತೆ ಹಚ್ಚಿದ ಪೊಲೀಸ್ ಡಾಗ್ ತುಂಗಾ; ಶ್ವಾನದ ಯಶೋಗಾಥೆ ಇಲ್ಲಿದೆ

Udupi Murder: ವಿಶಾಲಾ ಗಾಣಿಗ ಕೊಲೆ ಪ್ರಕರಣ: ಪತಿ ರಾಮಕೃಷ್ಣ 4 ದಿನ ಪೊಲೀಸರ ವಶಕ್ಕೆ

Published On - 12:43 pm, Mon, 26 July 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ